ಜಿಟಿಜಿಟಿ ಮಳೆ, ಬೆಳೆಗಳಿಗೆ ರೋಗದ ಭೀತಿ!

ಹೆಸರು-ಸೂರ್ಯಕಾಂತಿ ಬೆಳೆಗಳಿಗೆ ರೋಗ; ಆತಂಕದಲ್ಲಿ ರೈತರು

Team Udayavani, Jul 15, 2022, 3:58 PM IST

18

ಅಮೀನಗಡ: ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ರೈತರು ಬೆಳೆದ ಬೆಳೆಗಳಿಗೆ ರೋಗದ ಭೀತಿ ಎದುರಾಗಿದೆ.

ಹೌದು, ಹುನಗುಂದ ತಾಲೂಕಿನಲ್ಲಿ ಅಂದಾಜು 7836 ಹೆಕ್ಟೇರ್‌ ಭೂಮಿಯಲ್ಲಿ ಸೂರ್ಯಕಾಂತಿ, 25471 ಹೆಕ್ಟೇರ್‌ ಭೂಮಿಯಲ್ಲಿ ತೊಗರಿ, 1621 ಹೆಕ್ಟೇರ್‌ ಭೂಮಿಯಲ್ಲಿ ಸಜ್ಜೆ, 1356 ಹೆಕ್ಟೇರ್‌ ಭೂಮಿಯಲ್ಲಿ ಹೆಸರು ಬೆಳೆ ಬಿತ್ತನೆ ಮಾಡ ಲಾಗಿದೆ. ಆದರೆ, ಕಳೆದ ಎರಡು ವಾರದಿಂದ ಹಗಲು-ರಾತ್ರಿ ಎನ್ನದೇ ನಿರಂತರವಾಗಿ ಸುರಿ ಯುತ್ತಿರುವ ಜಿಟಿಜಿಟಿ ಮಳೆ ಮತ್ತು ಮೋಡಕವಿದ ತಂಪು ವಾತಾವರಣದಿಂದ ಬೆಳೆದ ಬೆಳೆಗಳಿಗೆ ರೋಗ ಭಾದೆ ಕಂಡು ಬಂದಿದೆ. ಇದರಿಂದ ರೈತರಿಗೆ ಆತಂಕ ಎದುರಾಗಿದೆ.

ಬೆಳೆಗಳ ಪರಿಸ್ಥಿತಿ: ತಾಲೂಕಿನ ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಮುಸುಕಿನ ಜೋಳ, ಸಜ್ಜೆ, ನವಣಿ, ಸೂರ್ಯಕಾಂತಿ ಬೆಳೆಗಳು ಬಿತ್ತನೆಯಾಗಿದ್ದು, ತೊಗರಿ ಬೆಳೆ ಇನ್ನೂ ಬಿತ್ತನೆ ಹಂತದಲ್ಲಿದೆ. ಆದರೆ, ಬಿತ್ತನೆ ಮಾಡಿದ ಮುಸುಕಿನ ಜೋಳ ಬೆಳೆಯಲ್ಲಿ ಶೇ 15 ರಷ್ಟು ಫಾಲ್‌ ಸೈನಿಕ್‌ ಹುಳುವಿನ ಬಾಧೆ ಕಂಡು ಬಂದಿದೆ. ಹೆಸರು ಬೆಳೆಯಲ್ಲಿ ಶೇ 25 ರಷ್ಟು ಹಳದಿ ನಂಜಾಣು ರೋಗ ಬಾಧೆ ಕಂಡು ಬಂದಿದೆ, ಸೂರ್ಯಕಾಂತಿ ಬೆಳೆಯಲ್ಲಿ ಶೇ. 5ರಷ್ಟು ನೆಕ್ರೋಸಿಸ್‌ ನಂಜಾಣು ರೋಗ ಬಾಧೆ ಕಂಡು ಬಂದಿದೆ.

ಶೇ.25 ರಷ್ಟು ಹಳದಿ ರೋಗ: ತಾಲೂಕಿನಲ್ಲಿ ಶೇ. 25ರಷ್ಟು ಹೆಸರು ಬೆಳೆಗಳಿಗೆ ಹಳದಿ ನಂಜಾಣು ರೋಗ ಬಾಧೆ ಕಂಡು ಬಂದಿದೆ. ಈ ರೋಗವು ಆರಂಭದಲ್ಲಿ ಎಲೆಯ ಮೇಲೆ ಹಳದಿ ಬಣ್ಣದ ಚುಕ್ಕೆಗಳು ಕಾಣಿಸುತ್ತವೆ ನಂತರ ಎಲೆಗಳು ಕಪ್‌ ರೀತಿಯಲ್ಲಿ ಮುದುಡಿಕೊಳ್ಳುತ್ತವೆ.ರೋಗದ ತೀವ್ರತೆ ಹೆಚ್ಚಾದಾಗ ಸಸಿಗಳೆಲ್ಲ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳು ಸುಕ್ಕುಗಟ್ಟುತ್ತವೆ ಇದರಿಂದ ಗಿಡಗಳ ಬೆಳವಣಿಗೆ ಕುಂಠಿತಗೊಂಡು ಇಳುವರಿ ಕಡಿಮೆಯಾಗುತ್ತದೆ.

ಹಳದಿ ರೋಗ ತಡೆಯುವುದೇ ಹೇಗೆ?: ಹೆಸರು ಬೆಳೆಗಳಿಗೆ ಹಳದಿ ನಂಜಾಣು ರೋಗ ಕಂಡು ಬಂದಲ್ಲಿ ರೈತರು ರೋಗಪೀಡಿತ ಸಸಿಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಆ ಸಸಿಗಳನ್ನು ಕಿತ್ತಿ ಮಣ್ಣಿನಲ್ಲಿ ಹೂಳಬೇಕು ಮತ್ತು ರೋಗ ಹರಡುವುದನ್ನು ತಡೆಯಲು ಪ್ರತಿ ಲೀಟರ್‌ ನೀರಿಗೆ 0.3ಮಿ.ಲಿ ಇಮಿಡಾಕ್ಲೋಪ್ರೀಡ್‌ 7.8 ಎಸ್‌.ಎಲ್‌ ಅಥವಾ 0.2 ಗ್ರಾಂ ಥೈಯಾಮಿಥಾಕ್ಸಾಮ್‌ 25 ಡಬ್ಲೂ.ಜಿ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಬೆಳೆಸಿ ಸಿಂಪಡಣೆ ಮಾಡಬೇಕು ಎಂದು ಕೃಷಿ ವಿಜ್ಞಾನಿಗಳು ಹೇಳುತ್ತಾರೆ.

ರೈತರ ಆಗ್ರಹ: ಅನ್ನದಾತ ಸಾಲ ಮಾಡಿ ಬೆಳೆ ಬೆಳೆದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿ ಇದ್ದಾಗ ಬೆಳವಣಿಗೆ ಹಂತದಲ್ಲಿಯೇ ನಿರಂತರ ಜಿಟಿಜಿಟಿ ಮಳೆಯಿಂದ ಬೆಳೆದ ಬೆಳೆಗಳಿಗೆ ರೋಗಗಳ ಬಾಧೆ ಕಂಡು ಬಂದಿದೆ. ಬೆಳೆಗಳು ಹಾನಿಯಾಗುವ ಭೀತಿ ಕಾಡುತ್ತಿದೆ. ಮಳೆ ಬೇಕು ಎಂದು ಪ್ರಾರ್ಥಿಸಿದ್ದ ರೈತರು ಇದೀಗ ಮಳೆ ನಿಲ್ಲಿಸು ಎಂದು ಬೇಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.ಬೆಳೆಗಳನ್ನು ಕಾಪಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಸಹಾಯಕ್ಕೆ ಸರ್ಕಾರ ಮುಂದಾಗಬೇಕು ಎಂಬುದು ರೈತರ ಆಗ್ರಹ.

ಕಳೆದ ಎರಡು ವಾರದಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಮಳೆಯ ವಾತಾವರಣದಿಂದ ನಾವು ಬೆಳೆದ ಬೆಳೆಗಳಿಗೆ ರೋಗಗಳು ಬಂದಿವೆ. ಇದರಿಂದ ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಬೆಳೆಗಳು ನಾಶವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಇಲಾಖೆ ರೈತರ ಸಹಾಯಕ್ಕೆ ಮುಂದಾಗಿ ರೋಗ ತಡೆಗಟ್ಟಲು ಶ್ರಮಿಸಬೇಕಿದೆ. –ಪ್ರಶಾಂತ ಮನ್ನೆರಾಳ, ಯುವರೈತ

ನಿರಂತರ ಜಿಟಿಜಿಟಿ ಮಳೆಯಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಬೆಳೆ ಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಕಳೆದ ನಿರಂತರ ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಬೆಳೆಗಳಿಗೆ ರೋಗಗಳು ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ರೈತರು ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ರೈತರಿಗೆ ತಿಳಿಸಲಾಗಿದೆ. -ಸಿದ್ದಪ್ಪ ಪಟ್ಟಿಹಾಳ, ಸಹಾಯಕ ಕೃಷಿ ನಿರ್ದೇಶಕರು, ಹುನಗುಂದ

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.