ಮದ್ಯ ಬಿಟ್ಟವರಿಗೆ ಮರು ಮದುವೆ!

•1340ನೇ ಮದ್ಯವರ್ಜನ ಶಿಬಿರ •ಮದ್ಯ ತ್ಯಜಿಸಿದ 80 ಜನರು •ಧರ್ಮಸ್ಥಳ ಸಂಸ್ಥೆಯಿಂದ ವಿನೂತನ ಕಾರ್ಯಕ್ರಮ

Team Udayavani, May 28, 2019, 7:00 AM IST

bk-tdy-1..

ಬಾಗಲಕೋಟೆ: ಮದ್ಯವ್ಯಸನದಿಂದ ಮುಕ್ತರಾಗಿ ಏಳು ದಿನ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಮರು ಮದುವೆ ಸಂಪ್ರದಾಯ ನೆರವೇರಿಸಿದ ಬಳಿಕ ಹೊಸ ಬದುಕಿಗೆ ಕಾಲಿಟ್ಟ ಜೋಡಿಗಳು.

ಬಾಗಲಕೋಟೆ: ನಿತ್ಯ ಮದ್ಯ ಕುಡಿದು, ಸಮಾಜದಲ್ಲಿ ಗೌರವ ಕಳೆದುಕೊಳ್ಳುವ ಜತೆಗೆ ಸಂಸರಾದಲ್ಲೂ ಬಿರುಕು ಮೂಡಿಸಿಕೊಂಡಿದ್ದ ಸುಮಾರು 80 ಜನರಿಗೆ ಮದ್ಯ ಸೇವನೆ ಬಿಡಿಸುವ ಜತೆಗೆ ಅವರ ಪತ್ನಿಯರನ್ನು ಕರೆಸಿ, ಮರು ಮದುವೆ ಮಾಡಿಸಿ, ಹೊಸ ಬಾಳು ನೆಮ್ಮದಿಯಿಂದ ಕೂಡಿರಲಿ ಎಂಬ ಹಾರೈಸಿದ ಪ್ರಸಂಗ ನಗರದಲ್ಲಿ ನಡೆಯಿತು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಹಲವು ವರ್ಷಗಳಿಂದ ಮದ್ಯವರ್ಜನ ಶಿಬಿರ ನಡೆಸಲಾಗುತ್ತಿದ್ದು, ಕಳೆದ ಏಳು ದಿನಗಳಿಂದ ವಿದ್ಯಾಗಿರಿಯ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಸುಮಾರು 80 ಜನರಿಗೆ ವಿಶೇಷ ಶಿಬಿರ ನಡೆಸಲಾಯಿತು.

ಈ ಶಿಬಿರದಲ್ಲಿ ಜಿಲ್ಲೆಯ ಜಮಖಂಡಿ, ಬಾಗಲಕೋಟೆ, ಬೀಳಗಿ, ಹುನಗುಂದ, ಬಾದಾಮಿ, ತೇರದಾಳ, ಮಹಾಲಿಂಗಪುರ, ಅಮೀನಗಡ, ಕೆರೂರ ಹೀಗೆ ವಿವಿಧ ನಗರ ಹಾಗೂ ಗ್ರಾಮೀಣ ಪ್ರದೇಶದಿಂದ 80 ಜನರು ಶಿಬಿರಾರ್ಥಿಗಳಾಗಿ ಪಾಲ್ಗೊಂಡಿದ್ದರು.

ಮರು ಮದುವೆ: ಮದ್ಯ ಬಿಟ್ಟಿರುವ ಶಿಬಿರಾರ್ಥಿಗಳಿಗೆ ಅವರ ಕುಟುಂಬದವರನ್ನು ಕರೆಯಿಸಿ, ನವ ವಧುವರರಂತೆ ಶೃಂಗಾರಗೊಳಿಸಿ, ಮತ್ತೂಮ್ಮೆ ಮರು ವಿವಾಹ ಮಾಡಿಸಿದ ವಿಶೇಷ ಪ್ರಸಂಗ ಶಿಬಿರದಲ್ಲಿ ನಡೆಸಲಾಯಿತು.

ಮದ್ಯ ವ್ಯಸನ ಶಿಬಿರಾರ್ಥಿಗಳು ಈ ಸಂಬಂಧ ತರಬೇತಿ ಪಡೆದು ಮದ್ಯ ವ್ಯಸನದಿಂದ ವಿಮುಕ್ತರಾಗಿದ್ದು, ಹೊಸ ಜೀವನಕ್ಕೆ ಅಣಿಯಾಗಿದ್ದು ಕಂಡು ಕುಟುಂಬದವರಲ್ಲಿ ಹರ್ಷ ತಂದಿತು.

ಮದ್ಯ ವ್ಯಸನ ಬಿಟ್ಟವರ ಕುಟುಂಬದವರನ್ನ ಕರೆಯಿಸಿ ಮರು ಮದುವೆ ಮಾಡಿಸಿ ಸುಗಮ ಬಾಳು ನಡೆಸಲು ಅವಕಾಶ ಕಲ್ಪಿಸಲಾಯಿತು. ಕುಡಿತದಿಂದ ತಮ್ಮ ಪತ್ನಿಯವರನ್ನು ನಿಂದನೆ ಮಾಡುವ ಪುರುಷರು ಹಾಗೂ ಬೇಸರವಾಗಿರುವ ಪತ್ನಿಯರಿಗೆ ಪರಸ್ಪರ ಹೊಸ ಸಂಬಂಧ-ಭಾಂದವ್ಯದ ಬೆಸುಗೆ ಬೇಸೆಯುವ ಮೂಲಕ ಗಮನ ಸೆಳೆಯಲಾಯಿತು.

ಗುಳೇದಗುಡ್ಡ-ಕೆಂದೂರ ಸಂಸ್ಥಾನ ಮಠದ ಒಪ್ಪತ್ತೇಶ್ವರ ಮಹಾಸ್ವಾಮಿಗಳು, ಮರು ಮದುವೆ ಆಗಿರುವ ವಧು ವರರಿಗೆ ಆಶೀರ್ವಚನ ನೀಡಿ, ಸಾಮೂಹಿಕ ವಿವಾಹ ಎಂಬಂತೆ ಭಾಸ ಆಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ಏಳು ದಿನಗಳ ವಿಶೇಷ ಶಿಬಿರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಸಿ ಟ್ರಸ್ಟ್‌, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಸಂಸ್ಥೆಗಳ ಅಶ್ರಯದಲ್ಲಿ ನವನಗರದ ನೀಲಕಂಠೇಶ್ವರ ಸಾಂಸ್ಕೃತಿಕ ಭವನದಲ್ಲಿ ನಡೆದ 1340ನೇ ಮದ್ಯವರ್ಜನ ಶಿಬಿರದಲ್ಲಿ ವಿವಿಧ ತರಬೇತಿ ನೀಡಲಾಯಿತು.

ಜಿಲ್ಲೆಯ ವಿವಿಧ ಪ್ರದೇಶಗಳಿಂದ ಆಗಮಿಸಿದ ಸುಮಾರು 80ಕ್ಕೂ ಅಧಿಕ ಮದ್ಯವ್ಯಸನ ಶಿಬಿರಾರ್ಥಿಗಳಿಗೆ ಒಂದು ವಾರ ಕಾಲ ತರಬೇತಿ ನೀಡಿದ್ದು, ಬೆಳ್ಳಗೆ 5 ಗಂಟೆಯಿಂದ ರಾತ್ರಿಯವರೆಗೆ ಶಿಬಿರವನ್ನು ನಡೆಸಲಾಯಿತು. ವ್ಯಾಯಾಮ, ಯೋಗ, ವಠಾರ ಸ್ವಚ್ಛತೆ, ಶ್ರಮದಾನ, ಸಂಪನ್ಮೂಲ ವ್ಯಕ್ತಿಗಳ ಮಾಹಿತಿ ಹಾಗೂ ಕೌಟುಂಬಿಕ ಸಲಹೆ ಸೇರಿದಂತೆ ಕೆಲ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವ್ಯಸನ ಮುಕ್ತರಾಗಲು ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು.

ಕೊನೆಯ ದಿನವಾದ ಸೋಮವಾರ ಧರ್ಮಸ್ಥಳದ ಮಂಜುನಾಥ ದೇವರ ಮಂಗಳ್ಳೋತ್ಸವ, ಶಿಬಿರಾಗ್ನಿ ಸಮಾರಂಭ ಗಮನ ಸೆಳೆಯಿತು. ಮದ್ಯ ವ್ಯಸನ ಶಿಬಿರಾರ್ಥಿಗಳಿಗೆ ಮಂಜುನಾಥ ದೇವರ ಭಾವಚಿತ್ರವನ್ನು ಇಟ್ಟು ಅಲಂಕಾರ ಮಾಡಿ, ಪೂಜೆ ಪುನಸ್ಕಾರ ನೆರವೇರಿಸಿದರು. ಅಲ್ಲದೇ ಓಂಕಾರ, ಪ್ರಾರ್ಥನೆ ಸಲ್ಲಿಸುವ ಮೂಲಕ ನೂತನ ಜೀವನದ ಮಾರ್ಗದರ್ಶನ ನೀಡಲಾಯಿತು. ಶಿಬಿರಾಗ್ನಿ ಎಂದು ಸರಾಯಿ, ತಂಬಾಕು, ಸಿಗರೇಟು, ಗುಟಕಾದಿಂದ ಮಾಡಿದ್ದ ಕೃತಕ ಗೊಂಬೆಯನ್ನು ಇಟ್ಟು ಸುತ್ತಲೂ ಬೆಂಕಿಯ ಜ್ವಾಲೆಯಲ್ಲಿ ಹಿಡಿದು ಸುತ್ತು ಹಾಕುವ ಮೂಲಕ ತಮ್ಮಲ್ಲಿನ ದುಶ್ಚಟವನ್ನು ಬೆಂಕಿಯಿಂದ ಸುಟ್ಟು, ಹೊಸ ಜೀವನ ಪ್ರಾರಂಭಿಸುವುದಾಗಿ ಶಿಬಿರಾರ್ಥಿಗಳಿಂದ ಪ್ರತಿಜ್ಞೆ ಮಾಡಿಸಲಾಯಿತು.

ಒಟ್ಟಾರೆ ನಗರದಲ್ಲಿ ನಡೆದ ಮದ್ಯವ್ಯರ್ಜನ ಶಿಬಿರ ಈ ಬಾರಿ ಎಲ್ಲರ ಗಮನ ಸೆಳೆಯಿತು. ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನಪರಿಷತ್‌ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕ ಪಿ.ಎಚ್. ಪೂಜಾರಿ, ಜಿ.ಪಂ. ಸದಸ್ಯ ಹೂವಪ್ಪ ರಾಠೊಡ ಸೇರಿದಂತೆ ಧರ್ಮಸ್ಥಳ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು, ನಗರದ ಹಲವು ಪ್ರಮುಖರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.