ರೇಡಿಯಂ-ಸೂಚನಾ ಫಲಕವಿಲ್ಲದ ರಸ್ತೆ ವಿಭಜಕ!
Team Udayavani, May 12, 2019, 3:04 PM IST
ಬೀಳಗಿ: ತಾಲೂಕಿನ ಬಾಡಗಂಡಿ ಗ್ರಾಮದ ಹತ್ತಿರ ಹಾಗೂ ಬೀಳಗಿ ಕ್ರಾಸ್ ಬಳಿ 218ರ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ರಸ್ತೆ ವಿಭಜಕ (ಡಿವೈಡರ್) ಯಾವುದೇ ಸೂಚನಾ ಫಲಕ, ರೇಡಿಯಂ ಇಲ್ಲದ ಪರಿಣಾಮ, ಹಲವಾರು ಅಪಘಾತಗಳಿಗೆ ಕಾರಣವಾಗುವ ಮೂಲಕ ಜೀವಬಲಿಗಾಗಿ ಕಾಯ್ದುಕುಳಿತಿದೆ.
ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ರಸ್ತೆ ವಿಭಜಕ ನಿರ್ಮಿಸಲಾಗಿದೆ. ಆದರೆ, ಈ ರಸ್ತೆ ವಿಭಜಕಕ್ಕೆ ರೇಡಿಯಂ ಅಳವಡಿಸಿಲ್ಲ. ಅಲ್ಲದೆ, ರಸ್ತೆ ವಿಭಜಕ ಆರಂಭವಾಗುತ್ತದೆ ಎನ್ನುವ ಕುರಿತು ಮುಂಚಿತವಾಗಿ ಯಾವುದೇ ಎಚ್ಚರಿಕೆಯ ನಾಮಫಲಕ ಅಳವಡಿಸಿಲ್ಲ. ಪರಿಣಾಮ, ಕಳೆದೆರಡು ತಿಂಗಳಲ್ಲಿಯೇ ಸುಮಾರು ಹನ್ನೆರಡಕ್ಕೂ ಹೆಚ್ಚು ವಾಹನಗಳು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿರುವ ಘಟನೆಗಳು ನಡೆದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ .
ಬಾಡಗಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿರುವ ಡಿವೈಡರ್ಗೆ ಲಾರಿ ಡಿಕ್ಕಿ ಹೊಡೆದು ವಿಭಜಕದಲ್ಲಿ ಸಿಕ್ಕಿಕೊಂಡಿದೆ. ಘಟನೆ ನಡೆದು ನಾಲ್ಕು ದಿನ ಗತಿಸಿದರೂ ಕೂಡ ಇನ್ನೂ ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿಲ್ಲ. ಪರಿಣಾಮ, ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಡಿವೈಡರ್ಗೆ ಅಪಘಾತಕ್ಕೊಳಗಾಗಿ ನಿಂತಿರುವ ಈ ವಾಹನಕ್ಕೆ ಟಕ್ಕರ್ ಕೊಡುವ ಸಾಧ್ಯತೆ ಹೆಚ್ಚಿದೆ. ಡಿವೈಡರ್ಗೆ ಅಪ್ಪಳಿಸಿದ ಈ ಲಾರಿ ರವುಗೊಳಿಸುವ ಮುನ್ನವೇ ಬಾಡಗಂಡಿ ಗ್ರಾಮದ ಬಳಿ ಹೊಸ ಕಾರು ಡಿವೈಡರ್ಗೆ ಅಪ್ಪಳಿಸಿದ ಘಟನೆ ನಡೆದಿದೆ. ಆದರೆ, ಯಾವುದೇ ಪ್ರಾಣಹಾನಿಯಾಗಿಲ್ಲ. ಪದೆ, ಪದೆ ವಾಹನಗಳು ಡಿವೈಡರ್ಗೆ ಅಪ್ಪಳಿಸುತ್ತಿದ್ದರೂ ಕೂಡ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ಡಿವೈಡರ್ಗೆ ರೇಡಿಯಂ ಅಳವಡಿಸುವುದು ಹಾಗೂ ಸೂಚನಾ ಫಲಕ ಹಾಕುವ ಕುರಿತು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಅಧಿಕಾರಿಗಳು ರಸ್ತೆ ವಿಭಜಕ ಕುರಿತು ರೇಡಿಯಂ, ನಾಮಫಲಕ ಹಾಕಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಅನಾಹುತ ತಡೆಯಲು ಮುಂದಾಗಬೇಕೆಂದು ವಾಹನ ಸವಾರರು, ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ
Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ
ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ
ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ
ಭೈರನಹಟ್ಟಿ: ಕಾರ್ಗಿಲ್ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.