ಮನುಕುಲಕ್ಕೆ ಶರಣರ ಕೊಡುಗೆ ಅಪಾರ

ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಮುಂಚೂಣಿಯಲ್ಲಿ

Team Udayavani, Mar 23, 2022, 1:19 PM IST

8

ಗಲಗಲಿ: ನೇರ ನುಡಿಯ ನಿಷ್ಟುರತೆಗೆ ಹೆಸರಾದ ಮೇದಾವಿ ಶರಣರು ಅಂಬಿಗರ ಚೌಡಯ್ಯನವರು, ಇವರ ವಿಚಾರಗಳು, ನುಡಿಗಳು, ನಡವಳಿಕೆಗಳು ಇಂದು ಮಾನವಕುಲಕ್ಕೆ ಮಾರ್ಗದರ್ಶನವಾಗಿವೆ. 12ನೇ ಶತಮಾನದ ಶರಣರ ಕೊಡುಗೆ ಅಪಾರವಾದದ್ದು ಎಂದು ಮಾಜಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಗಲಗಲಿ ಗ್ರಾಮದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದ ಅಂಬಿಗರ ಚೌಡಯ್ಯನವರು ಇಂದಿಗೂ ಇಷ್ಟು ಪ್ರಚಲಿತವಾಗಿದ್ದಾರೆಂದರೆ ಅವರು ಪಡೆದುಕೊಂಡಿರುವ ಜ್ಞಾನ ಸಂಪತ್ತು, ಅವರಲ್ಲಿರುವ ಕಾಯಕ ಶ್ರದ್ಧೆ, ನಿಷ್ಠೆಗಳೆ ಕಾರಣವಾಗಿದೆ. ಸಮಾಜದಲ್ಲಿ ಯಾರು ಶಿಕ್ಷಣವಂತ, ವಿದ್ಯಾವಂತ ಇರುವವರಿಗೆ ಸದಾ ಗೌರವವಿರುತ್ತದೆ. ಎಲ್ಲ ಕ್ಷೇತ್ರದಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ ಎಂದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಖೋತ ಮಾತನಾಡಿ, ಗಂಗಾಮತಸ್ಥರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಬಲರಾಗಬೇಕು. ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡಿ ಒಳ್ಳೆಯ ಸಂಸ್ಕಾರ ನೀಡಿ ಅವರನ್ನು ಸಮಾಜದ ಪ್ರಬುದ್ಧರನ್ನಾಗಿ ಮಾಡಬೇಕು. ಗಂಗಾಮತಸ್ಥರು ಮೃದು ಸ್ವಭಾವ ಉಳ್ಳವರು. ಎಲ್ಲ ಸಮುದಾಯಗಳ ಜತೆ ಉತ್ತಮ ಬಾಂಧವ್ಯದೊಂದಿಗೆ ಬೆರೆತು ಬದುಕನ್ನು ಕಟ್ಟಿಕೊಂಡವರು ಎಂದು ಹೇಳಿದರು.

ಬಿಜೆಪಿ ತಾಲೂಕುಕಾರ್ಯದರ್ಶಿ ಹೊಳಬಸು ಬಾಳಶಟ್ಟಿ ಮಾತನಾಡಿ, ಅಂಬಿಗರು ನಂಬಿಗೆಯವರು. ನಿಷ್ಟೆ, ಶ್ರದ್ಧೆ, ಒಳ್ಳೆಯ ಮನೋಭಾವಗಳು ಇವರ ಬೆಳವಣಿಗೆಗೆ ದಾರಿದೀಪವಾಗಿದೆ. ಈ ಸಮುದಾಯಕ್ಕೆ ಆರ್ಥಿಕವಾಗಿ ಸಚಿವ ಮುರುಗೇಶ ನಿರಾಣಿ ಅವರಿಂದ ಸಹಾಯ ಕೊಡಿಸುವ ಭರವಸೆ ನೀಡಿದರು.

ಮರೇಗುದ್ದಿಯ ದಿಗಂಬರೇಶ್ವರ ಸಂಸ್ಥಾನ ಮಠದ ಪ್ರಭು ಶ್ರೀ ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯ ಟ್ರಸ್ಟ್‌ ಅಧ್ಯಕ್ಷ ರಾಮಣ್ಣ ಕಡಾಕಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್‌. ಆರ್‌.ಪಾಟೀಲ್‌ ನೂತನ ಕಟ್ಟಡ ಉದ್ಘಾಟಿಸಿದರು. ಈರಣ್ಣ ಸ್ವಾಮಿಗಳು ಬುಕ್ಕಿಟಗಾರ್‌, ಈಶ್ವರ್‌ ಪುರಾಣಿಕ, ಎಂ.ಎನ್‌. ಪಾಟೀಲ್‌, ಈರಣಗೌಡ ನ್ಯಾಮಗೌಡರ, ನಿಂಗಣ್ಣ ಗೋಳಿಪಲ್ಲೆ, ರೂಪಾ ಹಿರೇಮಠ, ಮಗೆಪ್ಪ ದೇವನಾಳ, ರಾಮಾಚಾರ್ಯ ಕಟ್ಟಿ, ನಾಗಪ್ಪ ಅಂಬಿ, ಗಡ್ಡೆಪ್ಪಣ್ಣ ಬಾರಕೇರ, ಕಲ್ಲಪ್ಪ ಗಡ್ಡಿ, ಪರಸಪ್ಪ ವಾಲಿಕಾರ್‌, ಶಿವಗಿರಿ ದಳವಾಯಿ, ರವಿ ಮಂಟೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.