ಕಾಂಗ್ರೆಸ್‌ ಗಟ್ಟಿಗೊಳಿಸುವರೇ ಸಿದ್ದರಾಮಯ್ಯ?

•ಲೋಕ ಚುನಾವಣೆ ಬಳಿಕ ನಡೆಯದ ಅವಲೋಕನ•ಪಕ್ಷಕ್ಕೆ ಗಟ್ಟಿ ಸಂಘಟಕರ ಅವಶ್ಯಕತೆ

Team Udayavani, Jun 28, 2019, 9:44 AM IST

bk-tdy-1

ಬಾಗಲಕೋಟೆ: ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಮುಗ್ಗರಿಸಿರುವ ಕಾಂಗ್ರೆಸ್‌ ಪಕ್ಷಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪುನಶ್ಚೇತನ ಕೊಡುವರೇ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ.

ಹೌದು, ಲೋಕಸಭೆ ಚುನಾವಣೆಯ ಬಳಿಕ ಸೋಲಿನ ಅವಲೋಕನ ಹಾಗೂ ಮುಂದೆ ಪಕ್ಷ ಸಂಘಟನೆಯ ಜವಾಬ್ದಾರಿ, ಕರ್ತವ್ಯಗಳ ಕುರಿತು ಮಹತ್ವದ ಸಭೆ ನಡೆಯಲಿದೆ ಎಂಬ ಆಶಾಭಾವನೆ ಪಕ್ಷದ ಹಲವು ಇಟ್ಟುಕೊಂಡಿದ್ದರು. ಚುನಾವಣೆ ಮುಗಿದು ತಿಂಗಳಾದರೂ ಯಾವುದೇ ಸಭೆ ನಡೆದಿಲ್ಲ. ಪಕ್ಷ ಸೋಲಲು ಎಲ್ಲಿ, ಏನು ಕಾರಣ ಎಂಬ ಅವಲೋಕನ ಮಾಡಿಲ್ಲ. ಯಾರೂ, ಪಕ್ಷದ ಕೆಲಸ- ಕಾರ್ಯಗಳನ್ನು ಜವಾಬ್ದಾರಿಯಿಂದ ಮಾಡುತ್ತಿಲ್ಲ ಎಂಬ ಅಸಮಾಧಾನ ಹಲವರಲ್ಲಿ ಮನೆ ಮಾಡಿದೆ.

ವಿಜಿಟಿಂಗ್‌ ಕಾರ್ಡ್‌ಗೆ ಸೀಮಿತ !: ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಹಿತ ಇಬ್ಬರು ಶಾಸಕರು ಮಾತ್ರ ಕಾಂಗ್ರೆಸ್‌ನಲ್ಲಿದ್ದಾರೆ. ಎರಡು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲೂ ಕಾಂಗ್ರೆಸ್‌ನ ಎಂಎಲ್ಸಿಗಳಿದ್ದಾರೆ. ಇನ್ನು ನಾಮ ನಿರ್ದೇಶಿತ ಎಂಎಲ್ಸಿ ಸಕ್ಕರೆ ಸಚಿವರಾಗಿದ್ದಾರೆ. ಪಕ್ಕದ ವಿಜಯಪುರ ಜಿಲ್ಲೆಯ ಶಿವಾನಂದ ಪಾಟೀಲ, ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಮಾಜಿ ಸಚಿವ ಎಚ್.ವೈ. ಮೇಟಿ, ಬಿಟಿಡಿಎ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪಕ್ಷದಲ್ಲಿ ಪ್ರಮುಖ ಕಾರ್ಯಕರ್ತರಿಗಿಂತ ಹಲವು ನಾಯಕರೇ ಇದ್ದಾರೆ. ಆದರೆ, ಎಲ್ಲರೂ ಒಟ್ಟಿಗೆ ಕುಳಿತು, ಪಕ್ಷ ಸಂಘಟನೆ ಬಗ್ಗೆ ಗಂಭೀರ ಚರ್ಚೆ- ಚಿಂತನೆ ಮಾಡುತ್ತಿಲ್ಲ. ಪದಾಧಿಕಾರಿಗಳ ನೇಮಕಕ್ಕಾಗಿ ಪೈಪೋಟಿ ನಡೆಸುವವರು, ಕೇವಲ ವಿಜಿಟಿಂಗ್‌ ಕಾರ್ಡ್‌ ಮಾಡಿಕೊಂಡಿದ್ದಾರೆ ಹೊರತು, ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ. ಪಕ್ಷಕ್ಕಾಗಿ ದುಡಿಯುವವರಿಗೆ ಜವಾಬ್ದಾರಿ ಸಿಗುತ್ತಿಲ್ಲ ಎಂಬ ಅಸಮಾಧಾನ ಬಹುತೇಕ ಕಾಂಗ್ರೆಸ್ಸಿಗರಲ್ಲಿದೆ.

ಇಂತಹ ಹಲವು ಕಾರಣಗಳಿಂದ ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 1.60 ಲಕ್ಷ ಮತಗಳ ಅಂತರದಿಂದ ಸೋಲಬೇಕಾಯಿತು. ಉಸ್ತುವಾರಿ ಸಚಿವರು, ಲೋಕಸಭೆಚುನಾವಣೆ ವೇಳೆ ತೋರಿದ ಕಾಳಜಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೂ ತೋರಬೇಕೆಂಬ ಒತ್ತಾಯ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ.

ಪುನಶ್ಚೇತನ ಮಾಡುವರೆ?: ಮಾಜಿ ಸಿಎಂ ಸಿದ್ದರಾಮಯ್ಯ, ಬಾದಾಮಿ ಶಾಸಕರಾಗಿದ್ದಾರೆ. ರಾಜ್ಯ ಮಟ್ಟದ ಹಿರಿಯ ನಾಯಕರೊಬ್ಬರು ಜಿಲ್ಲೆಯ ಶಾಸಕರಾದರೂ, ಜಿಲ್ಲೆಯಲ್ಲಿ ಪಕ್ಷದ ನೆಲೆ ದಿನೇ ದಿನೇ ಕಡಿಮೆಗೊಳ್ಳುತ್ತಿದೆ ವಿನಃ ಗಟ್ಟಿಗೊಳ್ಳುತ್ತಿಲ್ಲ ಎಂಬುದು ಕಾಂಗ್ರೆಸ್ಸಿಗರ ಆತಂಕ. ಹೀಗಾಗಿ ಸಿದ್ದರಾಮಯ್ಯ ಅವರಾದರೂ ಜಿಲ್ಲೆಯಲ್ಲಿ ಪಕ್ಷ ಬಲಗೊಳಿಸಲು ಮುಂದಾಗುತ್ತಾರಾ ಎಂದು ಕಾರ್ಯಕರ್ತರು ಕಾದು ಕುಳಿತಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಕಾಲ, ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಕೇಂದ್ರವಾದ ಬಾಗಲಕೋಟೆಗೆ ಬರುತ್ತಿದ್ದಾರೆ. ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟಿನ್‌ ಉದ್ಘಾಟಿಸಲಿದ್ದಾರೆ. ಅದೇ ದಿನ ಪಕ್ಷದ ಪ್ರಮುಖರ, ಹಿರಿಯ ಕಾರ್ಯಕರ್ತರ ಸಭೆ ನಡೆಸಿ, ಸಂಘಟನೆಗೆ ಸಲಹೆ-ಸೂಚನೆ- ಮಾರ್ಗದರ್ಶನ ನೀಡಲಿದ್ದಾರೆ ಎಂಬ ಮಾತಿದ್ದು, ಇದಕ್ಕಾಗಿ ಈವರೆಗೆ ಸಭೆ ನಿರ್ಧಾರವಾಗಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿಗರ ಸಭೆ ನಡೆಸುತ್ತಾರಾ? ಇಲ್ವಾ ಎಂಬ ಗೊಂದಲವೂ ಕಾಂಗ್ರೆಸ್‌ನಲ್ಲಿದೆ.

ಜಿಲ್ಲಾ ಘಟಕ ಪುನರ್‌ರಚನೆ ಆಗುತ್ತಾ?: ಪಕ್ಷದ ಹಾಲಿ ಅಧ್ಯಕ್ಷ ಎಂ.ಬಿ. ಸೌದಾಗರ, ಕಳೆದ 10 ವರ್ಷಗಳಿಂದ ಪಕ್ಷದ ಕೆಲಸದಲ್ಲಿ ತೊಡಗಿದ್ದು, ಅವರನ್ನು ಬದಲಾಯಿಸಿ, ಬೇರೋಬ್ಬರಿಗೆ ಅವಕಾಶ ಕೊಡಬೇಕು ಎಂಬ ಬೇಡಿಕೆ ಒಂದೆಡೆ ಕೇಳಿ ಬಂದಿದೆ. ಇನ್ನೊಂದೆಡೆ ಅವರು ಅಲ್ಪ ಸಂಖ್ಯಾತರ ಪ್ರಮುಖರಾಗಿದ್ದು, ಅವರಿಗೆ ಬೇರೆ ಜವಾಬ್ದಾರಿ ಅಥವಾ ಹುದ್ದೆ ನೀಡಿ, ಜಿಲ್ಲಾ ಘಟಕ ಪುನರ್‌ರಚನೆ ಮಾಡಬೇಕು ಎಂಬ ಒತ್ತಾಯ, ಸೌದಾಗರರ ಬೆಂಬಲಿಗರಿಂದ ಕೇಳಿ ಬಂದಿದೆ.

ಜಿಲ್ಲಾ ಘಟಕ ಪುನರ್‌ರಚನೆಯಾದರೆ ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ, ಜಿ.ಪಂ. ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಕೈ ಮಗ್ಗ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಕಲಬುರಗಿ, ಡಾ|ದೇವರಾಜ ಪಾಟೀಲ, ಯುವ ಕಾಂಗ್ರೆಸ್‌ನಿಂದಲೂ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿರುವ ಮಂಜುನಾಥ ವಾಸನದ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹದ್ಲಿ, ಅನೀಲಕುಮಾರ ದಡ್ಡಿ ಮುಂತಾದವರ ಹೆಸರು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬರುತ್ತಿವೆ. ಆದರೆ, ಜಿಲ್ಲಾ ಘಟಕದ ಪುನರ್‌ರಚನೆ ಕುರಿತು ಈ ವರೆಗೆ ಯಾವುದೇ ಚರ್ಚೆ ಅಥವಾ ಕೆಪಿಸಿಸಿಯಿಂದ ನಿರ್ದೇಶನ ಬಂದಿಲ್ಲ ಎನ್ನಲಾಗಿದೆ. ಜಿಲ್ಲೆಯಲ್ಲಿ ಬಲ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್‌ಗೆ ಪುನಶ್ಚೇತನ ಯಾವಾಗ ಎಂಬ ನಿರೀಕ್ಷೆ ಕಾಂಗ್ರೆಸಿಗರು ಇಟ್ಟುಕೊಂಡಿದ್ದಾರೆ.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.