ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ: ಶಾಸಕ ಸಿದ್ದು ಸವದಿ ವಿರುದ್ಧ ಲೋಕಾಯಕ್ತಕ್ಕೆ ದೂರು
Team Udayavani, Jan 20, 2023, 8:48 PM IST
ರಬಕವಿ-ಬನಹಟ್ಟಿ: ತೇರದಾಳ ಶಾಸಕ ಸಿದ್ದು ಸವದಿ ಆದಾಯಕ್ಕೂ ಮೀರಿ ಅಕ್ರಮವಾಗಿ 150 ಎಕರೆಗೂ ಅಧಿಕ ಆಸ್ತಿ ಸಂಪಾದಿಸಿದ್ದಾರೆ, ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ಮೋಸ ಮಾಡಿದ್ದಾರೆಂದು ಜ.18 ರಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಶಾಸಕ ಸಿದ್ದು ಸವದಿ ಮತ್ತು ಕುಟುಂಬಸ್ಥರ ವಿರುದ್ಧ ಹಳಿಂಗಳಿ ಗ್ರಾಮದ ರಾಜು ದೇಸಾಯಿ ದೂರು ನೀಡಿದ್ದು, ಮೊದಲ ಆರೋಪಿಯನ್ನಾಗಿಸಿ ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ, ಸಹೋದರ ಏಗಪ್ಪ ಸವದಿ, ಮಕ್ಕಳಾದ ವಿದ್ಯಾಧರ ಸವದಿ ಹಾಗು ರಾಮಣ್ಣ ಸವದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ತಮ್ಮ ಆಪ್ತ ವಲಯದವರ ಹೆಸರಿನಲ್ಲಿ ಬೇನಾಮಿಯಿಂದ ಕೃಷಿ ಹಾಗು ಕೃಷಿಯೇತರ ಭೂಮಿಗಳನ್ನು ಖರೀದಿ ಮಾಡಿಕೊಂಡಿದ್ದರ ಬಗ್ಗೆ ದಾಖಲೆಗಳನ್ನು ಒದಗಿಸಿರುವ ರಾಜು ದೇಸಾಯಿ. ಇದೆಲ್ಲದರ ಕುರಿತು ಸಮಗ್ರ ತನಿಖೆಯೊಂದಿಗೆ ಅಕ್ರಮ ಗಳಿಕೆದಾರರಿಗೆ ಶಿಕ್ಷೆಯಾಗಬೇಕೆಂದು ದೇಸಾಯಿ ತಿಳಿಸಿದರು.
ಹತಾಶೆ ಭಾವನೆಯಲ್ಲಿ ಆರೋಪ-ಸವದಿ ಪ್ರತಿಕ್ರಿಯೆ
ಬೊಗಳೋ ನಾಯಿ ಕಚ್ಚಲ್ಲ, ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದ ನನ್ನ ಮೇಲೆ ಯಾವದೇ ಆರೋಪಗಳನ್ನು ಮಾಡುವ ನೈತಿಕತೆಯಿಲ್ಲದೆ ಹತಾಶೆ ಭಾವನೆಯಲ್ಲಿ ಲೋಕಾಯುಕ್ತ ದೂರು ಸಲ್ಲಿಸಿರುವ ಆರೋಪವನ್ನು ಖಡಾಖಂಡಿತ ತಳ್ಳಿ ಹಾಕುತ್ತೇನೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ಶಾಸಕ ಸವದಿ ವಿರುದ್ಧ ಅಕ್ರಮ ಆಸ್ತಿ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ಕಾಂಗ್ರೆಸ್ ಮುಖಂಡ ರಾಜು ನಂದೆಪ್ಪನವರ(ದೇಸಾಯಿ) ದೂರು ನೀಡಿದ್ದಕ್ಕೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಮಯ ಬಂದಾಗ ಉತ್ತರ ನೀಡುವೆ. ಆರೋಪ ಮಾಡಿರುವ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವ ಯೋಚನೆ ನನ್ನದಾಗಿದೆ ಎಂದು ಸವದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ
Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು
Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ
Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್
Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.