ಯುಕೆಪಿಗೆ ಈಗಲಾದರೂ ಸಿಗುತ್ತಾ ವೇಗ!

•ನೀರಾವರಿಗೆ ಹೆಚ್ಚು ಒತ್ತು ಕೊಡಬೇಕಿದೆ ಬಿಎಸ್‌ವೈ•ನೀರಾವರಿ ಹೋರಾಟಗಾರರು-ರೈತರ ಕಾತರ

Team Udayavani, Jul 31, 2019, 11:35 AM IST

bk-tdy-3

ಬಾಗಲಕೋಟೆ: ಮೈತ್ರಿ ಸರ್ಕಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಬಿಜೆಪಿ ಸರ್ಕಾರದಲ್ಲಾದರೂ ವೇಗ ಸಿಗುತ್ತದೆಯಾ ಎಂದು ಈ ಭಾಗದ ರೈತರು, ನೀರಾವರಿ ಹೋರಾಟಗಾರರು ಕಾತರರಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ನೀರಾವರಿ ಯೋಜನೆ ಕಾಲುವೆ ನಿರ್ಮಾಣದಲ್ಲಿ ಒಂದಷ್ಟು ವೇಗ ಕಂಡಿದ್ದ ಈ ಯೋಜನೆ, ಭೂ ಸ್ವಾಧೀನ ವಿಷಯದಲ್ಲಿ ಭಾರಿ ಹಿನ್ನಡೆ ಅನುಭವಿಸಿತ್ತು. ಅದಕ್ಕೆ ಹೊಸ ಭೂ ಸ್ವಾಧೀನ ಕಾಯ್ದೆ ಸಹಿತ ಹಲವು ಕಾರಣಗಳನ್ನು ನೀಡಲಾಗಿತ್ತು. ಸರ್ಕಾರದ ವಿಳಂಬ ನೀತಿಯಿಂದ 3ನೇ ಹಂತದಲ್ಲಿ ಸ್ವಾಧೀನಗೊಳ್ಳಲಿದ್ದ ಭೂಮಿ ವಶಪಡಿಸಿಕೊಳ್ಳಲು ನಡೆಸಿದ ಪ್ರಕ್ರಿಯೆಗಳ ಅಧಿಸೂಚನೆಗಳು ರದ್ದುಗೊಂಡವು. ಹೀಗಾಗಿ ರದ್ದುಗೊಂಡ ಅಧಿಸೂಚನೆಗಳನ್ನು ಪುನಃ ಆರಂಭಿಸಿ, ಸ್ವಾಧೀನ, ಕಾಲುವೆ ನಿರ್ಮಾಣ, ಪುನರ್‌ವಸತಿ, ಪುನರ್‌ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕಿದೆ.

ನೀರು ಕೊಟ್ಟು 9 ವರ್ಷ: ಕೃಷ್ಣಾ ನ್ಯಾಯಾಧಿಕರಣ ಎ ಸ್ಕೀಂ ನಡಿ 173 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, 519.60 ಮೀಟರ್‌ವರೆಗೆ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹಿಸಿ, ಬಳಸಲು ಅನುಮತಿ ಕೊಟ್ಟಿತ್ತು. ಆ ನೀರಿನಲ್ಲೇ ಈವರೆಗೆ ಕರ್ನಾಟಕ ಕೇವಲ 119 ಟಿಎಂಸಿ ಮಾತ್ರ ಸದ್ಭಳಕೆ ಮಾಡಿಕೊಂಡಿದೆ ಎಂಬ ಮಾತಿದೆ. ಅಲ್ಲದೇ ಕಳೆದ 2010ರ ಡಿಸೆಂಬರ್‌ 30ರಂದು ನ್ಯಾಯಾಧಿಕರಣದ ಅಂತಿಮ ತೀರ್ಪು ಬಂದಿದ್ದು, ರಾಜ್ಯಕ್ಕೆ 177 ಟಿಎಂಸಿ ನೀರು ಹಂಚಿಕೆ ಮಾಡಿ, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಲು ಅನುಮತಿ ಕೊಟ್ಟಿದೆ. 177 ಟಿಎಂಸಿ ಅಡಿ ನೀರು ಕೊಟ್ಟು, 9 ವರ್ಷವಾದರೂ ಈ ವರೆಗೆ ನೀರು ಬಳಕೆ ಮಾಡಿಕೊಂಡಿಲ್ಲ. (2010ರಿಂದ 50 ವರ್ಷದೊಳಗೆ ಸಂಪೂರ್ಣ ನೀರು ಬಳಸಿಕೊಳ್ಳಲು ನ್ಯಾಯಾಧಿಕರಣ ಸೂಚನೆ ಕೂಡ ಕೊಟ್ಟಿದೆ) ಬೇಸಿಗೆಯಲ್ಲಿ ಕೊಯ್ನಾದಿಂದ ನೀರು ಬಿಡಿ ಎಂದು ಮಹಾರಾಷ್ಟ್ರದತ್ತ ಬೇಡಿಕೆ ಇಡುವುದು ತಪ್ಪಿಲ್ಲ.

ಯೋಜನಾ ವೆಚ್ಚ ಮೂರು ಪಟ್ಟು ಹೆಚ್ಚಳ: ಇಡೀ ರಾಜ್ಯದಲ್ಲೇ ಅತಿ ದೊಡ್ಡ ನೀರಾವರಿ ಯೋಜನೆ ಎಂಬ ಹೆಸರು ಯುಕೆಪಿಗಿದೆ. 3ನೇ ಹಂತದಲ್ಲಿ 1,23,640 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. 94,640 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾದರೆ, 4,315 ಎಕರೆ ಪುನರ್‌ ವಸತಿ ಕೇಂದ್ರಗಳ ನಿರ್ಮಾಣಕ್ಕಾಗಿ ಅಗತ್ಯವಿದೆ. ಕಾಲುವೆ ನಿರ್ಮಾಣಕ್ಕಾಗಿ 24,685 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಹೀಗೆ 12 ಗ್ರಾಮಗಳು ಪೂರ್ಣ, 10 ಗ್ರಾಮಗಳು ಭಾಗಶಃ ಮುಳುಗಡೆಯಾಗುವ ಜತೆಗೆ 1,23,640 ಎಕರೆ ಭೂಮಿ, ಆಲಮಟ್ಟಿ ಜಲಾಶಯ 524.256 ಮೀಟರ್‌ಗೆ ಎತ್ತರಿಸಿದಾಗ ಕಳೆದುಕೊಳ್ಳಬೇಕಾಗುತ್ತದೆ. ಈ 3ನೇ ಹಂತದ ಯೋಜನೆಗೆ 2012ರ ಜನವರಿ 24ರಂದು 17,206.39 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿಗೆ ಅಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೀಗ ಈ ಯೋಜನಾ ವೆಚ್ಚದ ಮೂರು ಪಟ್ಟು ಹೆಚ್ಚಳವಾಗಿದೆ. ಭೂಸ್ವಾಧೀನಕ್ಕಾಗಿಯೇ 50 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.