Taluk Centre: ಮಹಾಲಿಂಗಪುರ ಪಟ್ಟಣ ತಾಲೂಕು ಕೇಂದ್ರವಾಗಿ ಘೋಷಿಸಿ
ಕಂದಾಯ ಸಚಿವ ಕೃಷ್ಣಬೈರೇಗೌಡರನ್ನು ರಸ್ತೆಯಲ್ಲೇ ತಡೆದು ಮನವಿ ಸಲ್ಲಿಸಿದ ತಾಲೂಕು ಹೋರಾಟಗಾರರು
Team Udayavani, Jul 30, 2024, 8:19 PM IST
ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ) : ಮಹಾಲಿಂಗಪುರ ಪಟ್ಟಣ ತಾಲೂಕು ಕೇಂದ್ರವಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ತಾಲೂಕು ಹೋರಾಟ ವೇದಿಕೆ ಅಧ್ಯಕ್ಷ ಸಂಗಪ್ಪ ಹಲ್ಲಿ ಮನವಿ ಸಲ್ಲಿಸಿದರು.
ಪ್ರವಾಹ ವೀಕ್ಷಣೆಗಾಗಿ ಮುಧೋಳ ತಾಲೂಕಿಗೆ ಆಗಮಿಸಿದ ಸಚಿವ ಕೃಷ್ಣಬೈರೇಗೌಡ ಹಿಪ್ಪರಗಿ ಜಲಾಶಯಕ್ಕೆ ತೆರಳುವ ವೇಳೆ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಮನವಿ ಸಲ್ಲಿಸಿದ ಸಂಗಪ್ಪ ಮಹಾಲಿಂಗಪುರ ಹೋರಾಟಗಾರರು ಕಳೆದ 839 ದಿನಗಳಿಂದ ತಾಲೂಕಿಗಾಗಿ ಹೋರಾಟ ನಡೆಸಲಾಗುತ್ತಿದೆ ಎಂದರು.
ಮನವಿ ಸ್ವೀಕರಿಸಿದ ಸಚಿವರು ಪ್ರತಿಕ್ರಿಯಿಸಿ ನಾನು ಈಗ ಪ್ರವಾಹ ವೀಕ್ಷಣೆಗಾಗಿ ಆಗಮಿಸಿದ್ದು, ತಮ್ಮ ಮನವಿಯ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ . ಸರ್ಕಾರದಿಂದ ಹೊಸ ತಾಲೂಕಿನ ಪ್ರಸ್ತಾವನೆಗಳು ಬಂದಾಗ ಮಹಾಲಿಂಗಪುರ ಪಟ್ಟಣ ಪರಿಗಣಿಸುತ್ತೇವೆ ಎಂದರು. ಚನ್ನಮ್ಮ ವೃತ್ತದಿಂದ ಕೂಗಳತೆಯ ದೂರದಲ್ಲಿರುವ ನಮ್ಮ ವೇದಿಕೆಗೆ ಬಂದು ಸಚಿವರು ಮನವಿ ಸ್ವೀಕರಿಸಲಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಹೋರಾಟ ವೇದಿಕೆಯ ಮಹಾಲಿಂಗಪ್ಪ ಅವರಾದಿ, ಸಿದ್ದು ಶಿರೋಳ, ರಫೀಕ ಮಾಲದಾರ, ಅರ್ಜನ ಹಲಗಿಗೌಡರ, ಸಿ.ಎಂ.ಹುರಕಡ್ಲಿ, ಮಹ್ಮದ ಹೂಲಿಕಟ್ಟಿ, ಈಶ್ವರ ಮುರಗೋಡ, ದುಂಡಪ್ಪ ಇಟ್ನಾಳ, ಸಿದ್ದು ಬೆನ್ನೂರ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.