ಮಹಾ ಮಳೆಗೆ ಪ್ರವಾಹ


Team Udayavani, Aug 3, 2019, 10:18 AM IST

bk-tdy-1

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿಯಿಂದ 19 ಸಾವಿರ ಕ್ಯೂಸೆಕ್‌ ನೀರು ದುಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಮತ್ತು ಹಿಡಕಲ್ ಜಲಾಶಯದಿಂದ ಬಿಟ್ಟ 2 ಸಾವಿರ ಕ್ಯೂಸೆಕ್‌ ನೀರು ಸೇರಿ ಭಾರಿ ಪ್ರಮಾಣದಲ್ಲಿ ಘಟಪ್ರಭಾ ನೀರು ಹರಿದು ಬರುತ್ತಿರುವುದರಿಂದ ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ, ನಂದಗಾಂವ, ಮುಧೋಳ ತಾಲೂಕಿನ ಮಿರ್ಜಿ, ಚನ್ನಾಳ, ಜಾಲಿಬೇರಿ ಹಾಗೂ ಮುಧೋಳ ಕೆಳಭಾಗದಲ್ಲಿರುವ ಸೇತುವೆಗಳು ಜಲಾವೃತವಾಗಿವೆ.

ಗುರುವಾರ ಮಧ್ಯಾಹ್ನದವರೆಗೆ ಘಟಪ್ರಭಾ ನದಿಗೆ ಬರುವ ನೀರಿನ ಪ್ರಮಾಣ ಹೆಚ್ಚಾಗಿತ್ತು. ಗುರುವಾರ ಮಧ್ಯಾಹ್ನದಿಂದ ಶುಕ್ರವಾರ ಸಂಜೆವರೆಗೆ ನದಿಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಯಾವುದೇ ರೀತಿಯಲ್ಲೂ ಏರಿಕೆ ಕಂಡುಬಂದಿಲ್ಲ. ಎರಡು ದಿನಗಳಿಂದ ಢವಳೇಶ್ವರ ಸೇತುವೆ ಮತ್ತು ನಾಲ್ಕು ದಿನಗಳಿಂದ ನಂದಗಾಂವ-ಅವರಾದಿ, ಅಕ್ಕಿಮರಡಿ-ಮಿರ್ಜಿ ಸೇತುವೆಗಳು ಜಲಾವೃತವಾಗಿವೆ. ಇದರಿಂದಾಗಿ ನೆರೆಯ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಉಭಯ ಸೇತುವೆಗಳ ಮೇಲೆ ಸುಮಾರು 10ರಿಂದ 12 ಅಡಿಗಳಷ್ಟು ನೀರು ಹರಿಯುತ್ತಿದೆ. ಅಲ್ಲದೇ ಉಭಯ ಸೇತುವೆಗಳ ಹತ್ತಿರ ನದಿಯ ಗಾತ್ರ ಚಿಕ್ಕದಾಗಿರುವುದರಿಂದ ಅಕ್ಕಪಕ್ಕದ ಹೊಲಗಳಿಗೂ ನದಿಯ ನೀರು ನುಗ್ಗಿದೆ.

ಸೂಚನಾ ಫಲಕಗಳ ಅಳವಡಿಕೆ: ಘಟಪ್ರಭಾ ನದಿಯು ಅಪಾಯಮಟ್ಟದಲ್ಲಿ ಹರಿಯುತ್ತಿರುವದರಿಂದ ಜಲಾವೃತವಾಗಿರುವ ಢವಳೇಶ್ವರ ಮತ್ತು ನಂದಗಾಂವ ಸೇತುವೆಗಳ ಹತ್ತಿರ ತಾಲೂಕಾಡಳಿತದಿಂದ ಪ್ರವೇಶ ನಿಷೇಧಿಸಿರುವ ಸೂಚನಾ ಫಲಕಗಳನ್ನು ಶುಕ್ರವಾರ ಅಳವಡಿಸಿದ್ದಾರೆ.

ಅಧಿಕಾರಿಗಳ ನೇಮಕ: ಪ್ರವಾಹ ಪರಿಸ್ಥಿತಿ ಎದುರಿಸುವ ಸಲುವಾಗಿ ಢವಳೇಶ್ವರ, ನಂದಗಂವ ಮತ್ತು ಮಳಲಿ ಗ್ರಾಮಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೋರಡ್ಡಿ (9742437714), ಮಲ್ಲಾಪೂರ ಪಿ.ಜಿ., ಮಿರ್ಜಿ, ಒಂಟಗೋಡಿ, ಚನ್ನಾಳ ಗ್ರಾಮಗಳಿಗೆ ಲೋಕೋಪಯೋಗಿ ಇಲಾಖೆಯ ಪಿ.ಎಚ್.ಗಾಯಕವಾಡ (9448036182) ಅವರನ್ನು ನೇಮಿಸಲಾಗಿದೆ. ಜೊತೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ, ಕಂದಾಯ ಇಲಾಖೆ, ಪೊಲೀಸ್‌, ಕೃಷಿ, ಆರೋಗ್ಯ, ಪಶು, ಅಗ್ನಿ ಶಾಮಕ ಇಲಾಖೆಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಸದರಿ ತಂಡವು ಪ್ರವಾಹದ ಮುಂಜಾಗ್ರತಾ ಕ್ರಮ ಕೈಗೊಳ್ಳಲಿದೆ. ಈ ಕುರಿತು ತುರ್ತು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಇಲ್ಲಿ ದಿನದ 24 ಗಂಟೆ ಸಿಬ್ಬಂದಿ ಸಂಖ್ಯೆ 08350-280051 ರಲ್ಲಿ ಇರುತ್ತಾರೆ ಎಂದು ಮುಧೋಳ ತಹಶೀಲ್ದಾರ್‌ ಸಂಜಯ ಇಂಗಳೆ ಪತ್ರಿಕೆಗೆ ತಿಳಿಸಿದ್ದಾರೆ.

ಜಮಖಂಡಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಮಖಂಡಿ ತಾಲೂಕಿನಲ್ಲಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ತಾಲೂಕಾಡಳಿತ ನದಿ ತೀರದ ಗ್ರಾಮಗಳ ಗ್ರಾಮಸ್ಥರಿಗೆ ತುಂಬಿದ ನದಿ ತೀರಕ್ಕೆ ಹೋಗದಂತೆ ಡಂಗುರದ ಮೂಲಕ ಎಚ್ಚರಿಕೆ ನೀಡಿದೆ.

ಕಳೆದೊಂದು ವಾರದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಇದರಿಂದ ನದಿ ದಡದ ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಕೃಷ್ಣೆ ಮೈದುಂಬಿಕೊಂಡಿದ್ದನ್ನು ವಿಕ್ಷೀಸಿದ ತಾಲೂಕಾಡಳಿತ ರಕ್ಷಣಾ ಕಾರ್ಯದ ಸಿದ್ಧತೆ ನಡೆಸುತ್ತಿದೆ. ಮಹಾರಾಷ್ಟ್ರ ರಾಜ್ಯಕ್ಕೆ ಸಂಪರ್ಕ ಸೇತುವೆ ಕುಡಚಿಯ ಸೇತುವೆ ಮೇಲೆ 10 ಅಡಿ ನೀರು ನಿಂತಿದ್ದರಿಂದ ಮಹಾರಾಷ್ಟ್ರಕ್ಕೆ ತೆರಳುವ ಜಮಖಂಡಿ-ಅಥಣಿ ತಾಲೂಕಿನ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಹಿಪ್ಪರಗಿ ಬ್ಯಾರೇಜ್‌ ಮುಖಾಂತರ ಮಹಾರಾಷ್ಟ್ರಕ್ಕೆ ಸಂಚಾರ ಆರಂಭಗೊಂಡಿದೆ.

ಪ್ರವಾಹ ಭೀತಿ ಮುನ್ನಚ್ಚರಿಕೆ ಕ್ರಮವಾಗಿ ರಕ್ಷಣಾ ಬೋಟ್‌ಗಳನ್ನು, ಹಾವುಹಿಡಿ ಯುವ ತಂಡ, ಉತ್ತರ ಕನ್ನಡ-ಕಾರವಾರ ಜಿಲ್ಲೆಗಳಿಂದ ಈಜುಗಾರರನ್ನು ಕರೆಯಿಸಲಾಗಿದೆ. ತಾಲೂಕಿನ ಮುತ್ತೂರು-ಕಂಕನವಾಡಿ ಗ್ರಾಮಗಳು ಪ್ರವಾಹಕ್ಕೆ ಬೇಗ ತುತ್ತಾಗುವ ಸಾಧ್ಯತೆ ಇದ್ದು, ಮುತ್ತೂರು-ತುಬಚಿ ಗ್ರಾಮಗಳ ಮಧ್ಯದ ರಸ್ತೆ ಸಂಪೂರ್ಣ ಮುಳುಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ಬೋಟ್‌ಗಳನ್ನು ನೀಡಲಾಗಿದ್ದು, ಬೋಟ್ ಚಾಲನೆಗೆ ಸಾಕಷ್ಟು ಪ್ರಮಾಣದ ಸೀಮೆಎಣ್ಣೆ ನೀಡಲಾಗಿದೆ. ತಾಲೂಕಿನ ಯಾವ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗಿಲ್ಲ. ಗ್ರಾಮದ ಜನತೆಗೆ ನದಿ ತೀರದಲ್ಲಿ ಬಟ್ಟೆ ತೊಳೆಯುವುದಾಗಲೀ, ಮಕ್ಕಳನ್ನು ನದಿ ಕಡೆ ಬಿಡುವುದಾಗಲಿ ಮಾಡಬಾರದು ಎಂದು ಪ್ರಕಟಣೆ ನೀಡಲಾಗಿದೆ. ಶುದ್ದ ಕುಡಿವ ನೀರನ್ನು ಬಳಸುವಂತೆ ಸೂಚಿಸಲಾಗಿದೆ. ಈಗಾಗಲೇ ತಾಲೂಕಿನ 27 ನೋಡೆಲ್ ಹಿರಿಯ ಅಧಿಕಾರಿಗಳನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.