ಮೊದಲ ದಿನವೇ ಪ್ರವಾಹ ಸಂಕಷ್ಟ ಅನುಭವಿಸಿದ ಕೆಪಿಸಿಸಿ ತಂಡ


Team Udayavani, Aug 10, 2019, 4:03 PM IST

bk-tdy-3

ಬಾಗಲಕೋಟೆ: ಹೊಳೆಆಲೂರಿನಿಂದ ಗದಗ ಶಾಸಕ ಎಚ್.ಕೆ. ಪಾಟೀಲ ಮತ್ತು ಸನದಿ ಅವರು ಬಾಗಲಕೋಟೆಗೆ ಗೂಡ್ಸ್‌ ರೈಲಿನಲ್ಲಿ ಬಂದಿಳಿದರು.

ಬಾಗಲಕೋಟೆ: ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಪ್ರೊ| ಐ.ಜಿ ಸನದಿ ಗೂಡ್ಸ್‌ ರೈಲಿನಲ್ಲಿ ಬಾಗಲಕೋಟೆಗೆ ಆಗಮಿಸಿದ್ದು, ಹೊಳೆಆಲೂರು ಬಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಬಂದಾಗ ಅವರನ್ನು ಸಂಪರ್ಕಿಸಿ ದೂರವಾಣಿ ಯೋಗ ಕ್ಷೇಮವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಚಾರಿಸಿದರು.

ಪ್ರವಾಹ ಅಧ್ಯಯನ ಸಮಿತಿ ಅಧ್ಯಕ್ಷರಾಗಿ ಬಾಗಲಕೋಟೆ, ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಳ್ಳಬೇಕಾಗಿದ್ದ ಎಚ್.ಕೆ. ಪಾಟೀಲ, ಪ್ರೊ| .ಐ.ಜಿ. ಸನದಿ ಅವರು ಶುಕ್ರವಾರ ಬೆಳಗ್ಗೆ ಸ್ವಂತ ಜಿಲ್ಲೆ ಗದಗನ ಕೊಣ್ಣೂರು ಪ್ರವಾಹದಲ್ಲಿದೆ ಎಂಬುವುದು ತಿಳಿದ ತಕ್ಷಣ ಅಲ್ಲಿಗೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆ ಬಗ್ಗೆ ಪರಿಶೀಲನೆ ನಡೆಸಿ, ಹೊರಡುವ ಹೊತ್ತಿಗೆ ಬಾಗಲಕೋಟೆ ಜಿಲ್ಲೆ ಸಂಪರ್ಕದ ಮಾರ್ಗಗಳು ಎಲ್ಲವೂ ಸ್ಥಗಿತಗೊಂಡಿದ್ದವು. ಹೊಳೆಆಲೂರು ವರೆಗೆ ಬಂದು ದೋಣಿ ಮೂಲಕ ದಡ ತಲುಪುವ ಯೋಚನೆ ಸುರಕ್ಷಿತ ಅಲ್ಲ ಎಂದು ಗ್ರಾಮಸ್ಥರು ಹೇಳುತ್ತಿರುವಾಗಲೇ ಅಲ್ಲಿಂದ ಪ್ರವಾಹದ ದಾರಿಯಲ್ಲಿ ಹೊರಟ ಎಚ್.ಕೆ. ಪಾಟೀಲ ಪ್ರವಾಹದಲ್ಲಿ ಅವರು ಸಿಲುಕಿಕೊಳ್ಳಬಹುದು ಎಂಬ ಆತಂಕದಲ್ಲಿ ಕೆಲವರು ಈ ಬಗ್ಗೆ ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ಜತೆ ಪ್ರವಾಸದಲ್ಲಿದ್ದ ಗದ್ದಿಗೌಡರ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಈ ವಿಷಯ ತಿಳಿಸಿದರು. ಕೂಡಲೇ ಕರೆ ಮಾಡಿ ಅವರ ಯೋಗಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದರು. ಹೊಳೆಆಲೂರಿಗೆ ಬಂದಿದ್ದ ಎಚ್.ಕೆ. ಪಾಟೀಲರು ಅಲ್ಲಿಂದ ರೈಲು ನಿಲ್ದಾಣಕ್ಕೆ ಬಂದು ಬಾಗಲಕೋಟೆ ಕಡೆಗೆ ಹೊರಟಿದ್ದ ಗೂಡ್ಸ್‌ ರೈಲನ್ನು ಪ್ರೊ| ಸನದಿ ಅವರೊಂದಿಗೆ ಹತ್ತಿ ಬಾಗಲಕೋಟೆ ತಲುಪಿ, ಪ್ರವಾಹ ಪೀಡಿತ ಸ್ಥಳದ ವೀಕ್ಷಣೆಗೆ ತೆರಳಿದರು. ರೈಲು ಮಾರ್ಗದಲ್ಲಿ ಪ್ರವಾಹವನ್ನು ವೀಕ್ಷಿಸುತ್ತಿದ್ದಾಗ ನೀರಿನಲ್ಲಿ ನಡೆದು ಬಂದ ಅನುಭವವಾಯಿತು. ವಿಸ್ತಾರಗೊಂಡಿದ್ದ ನೀರಿನ ಹರಿವು ಕಂಡು ಆತಂಕ ಮೂಡಿತು ಎಂದು ಸುದ್ದಿಗಾರರೊಂದಿಗೆ ಅನುಭವ ಹಂಚಿಕೊಂಡರು. ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸುರಕ್ಷತೆ ಬಗ್ಗೆ ಸ್ವತಃ ಕರೆ ಮಾಡಿ ವಿಚಾರಿಸಿದಕ್ಕೆ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.