ಪೌರತ್ವ ನೀಡುವುದೇ ಕಾಯ್ದೆ ಉದ್ದೇಶ


Team Udayavani, Mar 6, 2020, 12:42 PM IST

ಪೌರತ್ವ ನೀಡುವುದೇ ಕಾಯ್ದೆ ಉದ್ದೇಶ

ಇಳಕಲ್ಲ: ಪೌರತ್ವ ನೀಡುವುದೇ ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶವಾಗಿದೆ ಹೊರತು ಕಿತ್ತುಕೊಳ್ಳುವುದಕ್ಕಲ್ಲ. ಕಾಂಗ್ರೆಸ್‌ನ ಒಡಕು ಮಾತುಗಳಿಗೆ ಕಿವಿಗೊಡದೇ ಕಾಯ್ದೆ ಬೆಂಬಲಿಸಬೇಕು ಎಂದು ಹಿದೂ ಜಾಗರಣ ವೇದಿಕೆಯ ಶ್ರೀಶೈಲಗೌಡ ಪಾಟೀಲ ಹೇಳಿದರು.

ಇಲ್ಲಿಯ ಎಸ್‌.ಆರ್‌. ಕಂಠಿ ವೃತ್ತದಲ್ಲಿ ಇಳಕಲ್ಲ ಹಾಗೂ ಹುನಗುಂದ ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಮನಮೋಹನಸಿಂಗ್‌ ಪ್ರಧಾನಿಗಳಾಗಿದ್ದಾಗ ಸೃಷ್ಟಿಗೊಂಡಿದ್ದೇ ಹೊರತು ಬಿಜೆಪಿಯವರಿಂದಲ್ಲ. ಅಂದು ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಎದೆಗಾರಿಕೆ ಪ್ರಧಾನಿಯವರಿಗೆ ಇಲ್ಲದ್ದರಿಂದ ಅದು ಜಾರಿಗೊಳ್ಳಲಿಲ್ಲ ಎಂದು ಹೇಳಿದರು.

ಕಾನೂನು ಸಂಚಾಲಕ ವಿವೇಕ ರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ ಆಡಳಿತ, ತೆಗೆದುಕೊಳ್ಳುತ್ತಿರುವ ದಿಟ್ಟ ನಿರ್ಧಾರಗಳನ್ನು ಇಡೀ ಜಗತ್ತೇ ಭಾರತದತ್ತ ನೋಡುವಂತಾಗಿದೆ. ಕೆಲವು ಮುಸ್ಲಿಂ ರಾಷ್ಟಗಳು ಸಹಿತ ಇವರ ಆಡಳಿತ ಮೆಚ್ಚಿಕೊಂಡಿದ್ದಾರೆ. ಇದರಿಂದ ನಮ್ಮ ದೇಶದ ಮುಸ್ಲಿಂರು ನಮ್ಮನ್ನು ಕೈಬಿಟ್ಟು ಹೋಗುವರೋ ಎಂಬ ಭಯ ಕಾಂಗ್ರೆಸ್‌ನವರಿಗೆ ಶುರುವಾಗಿದೆ. ಮುಸ್ಲಿಂರಲ್ಲಿ ಭಯದ ವಾತಾವರಣ ಸೃಷ್ಟಿಸಿ ದೇಶ ಒಡೆಯುವಂತ ಕಾರ್ಯ ಮಾಡುತ್ತಿದ್ದಾರೆ. ಮುಸ್ಲಿಂರು ಕಾಂಗ್ರೆಸ್‌ನ ಬಣ್ಣದ ಮಾತಿಗೆ ಮರುಳಾಗಬೇಡಿ. ದೇಶದ ಭದ್ರತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಎಂದು ವಿನಂತಿಸಿದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಪೌರತ ಕಾಯ್ದೆಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಧರ್ಮದ ಆಧಾರದ ಮೇಲೆ ಅಂದು ದೇಶವನ್ನು ವಿಭಜಿಸದಿದ್ದರೇ ಈ ಕಾಯ್ದೆಯ ಅವಶ್ಯಕತೆಯೇ ಇರಲಿಲ್ಲ ಎಂದರು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ನನ್ನ ಬಗ್ಗೆ ಮಾತನಾಡಿರುವುದನ್ನು ಖಂಡಿಸಿ, ಅವರ ನಾಲಿಗೆಯಿಂದಲೇ ಅವರ ಸಂಸ್ಕೃತಿ ಸಂಸ್ಕಾರ ತಿಳಿಯುತ್ತದೆ ಎಂದರು.

ವಿಧಾನಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ, ಗ್ರಾಮೀಣ ಬಿಜೆಪಿ ಘಟಕ ಅಧ್ಯಕ್ಷ ಮಹಾಂತಗೌಡ ಪಾಟೀಲ, ಜಿ.ಪಿ. ಪಾಟೀಲ, ಲಕ್ಷ್ಮಣ ಗುರಂ, ಸಿದ್ದಣ್ಣ ಆಮದಿಹಾಳ ಉಪಸ್ಥಿತರಿದ್ದರು. ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರ ಸ್ವಾಗತಿಸಿದರು. ಶ್ಯಾಮಸುಂದರ ಕರವಾ ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.