
ಮಣ್ಣಿಗೆ ಹೋದವರೇ ಹೆಣವಾಗಿ ಬಂದರು
Team Udayavani, May 19, 2019, 10:54 AM IST

ಗುಳೇದಗುಡ್ಡ: ಹಳದೂರ ಗ್ರಾಮದಲ್ಲಿ ಸಾಧನಿಯವರ ಮನೆ ಮುಂದೆ ನೆರೆದ ಜನ.
ಗುಳೇದಗುಡ್ಡ: ಒಂದು-ಒಂದೂವರೆ ಗಂಟೆಯ ಪ್ರಯಾಣ. ಆ ಪ್ರಯಾಣ ಮುಗಿದು ಬಿಟ್ಟಿದ್ದರೆ ಎಲ್ಲರೂ ಊರು ತಲುಪಿ, ಗ್ರಾಮದ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಆ ದೇವರ ಲಿಖೀತವೇ ಬೇರೆಯಾಗಿತ್ತು. ಮಣ್ಣು ಕೊಟ್ಟು ಬರುವವರಿಗೆ ಆ ದೇವರು ಮಣ್ಣು ಕೊಡುವಂತಹ ಸ್ಥಿತಿ ತಂದೊಡ್ಡಿದ.
ಮುದ್ದೇಬಿಹಾಳ ತಾಲೂಕು ಕಂದಗನೂರ ಗ್ರಾಮಕ್ಕೆ ಸಂಬಂಧಿಕರು ತೀರಿ ಹೋಗಿದ್ದಾರೆಂದು ಹೋದ ಸಮೀಪದ ಹಳದೂರ ಗ್ರಾಮದ ಸಾಧನಿ ಕುಟುಂಬದ ಇಬ್ಬರು, ರಕ್ಕಸಗಿ ಕುಟುಂಬದ ಒಬ್ಬರು ಮೃತಪಟ್ಟಿದ್ದು, ಮೃತರ ಮನೆಗಳ ಮುಂದೆ ಸೂತಕದ ಛಾಯೆ ಆವರಿಸಿದೆ. ಅಂತ್ಯಕ್ರಿಯೆಗೆ ಸಾಧನಿಯವರ ಕುಟುಂಬ, ಸಂಬಂಧಿಕರು, ಗ್ರಾಮಸ್ಥರು ತೆರಳಿದ್ದರು.
ಮಕ್ಕಳ ಅಳುವಿನ ಆಕ್ರಂದನ, ತಂದೆಯನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದ ಮಕ್ಕಳನ್ನು ನೋಡಿ ಸಮಾಧಾನ ಪಡಿಸಲು ಬಂದವರ ಕಣ್ಣುಗಳು ಸಹ ಒದ್ದೆಯಾಗಿದವು. ಸಾಧನಿಯವರ ಮನೆಯಲ್ಲಿ ಮಕ್ಕಳಷ್ಟೇ ಇದ್ದು, ಆ ಮಕ್ಕಳ ಅಳು ನೋಡಲಾಗುತ್ತಿಲ್ಲ.
ಗ್ರಾಮದಲ್ಲಿ ಜಾತ್ರೆ: ಹಳದೂರ ಗ್ರಾಮದಲ್ಲಿ ಕಳೆದ ಒಂಬತ್ತು ದಿನಗಳಿಂದ ದುರ್ಗಾದೇವಿ ಹಾಗೂ ದ್ಯಾಮವ್ವ ದೇವಿ ಜಾತ್ರೆ ನಡೆಯುತ್ತಿದ್ದು, ಇಂದು ನಡೆದ ರಸ್ತೆ ಅಪಘಾತ ಜಾತ್ರೆಯ ಖುಷಿಯಲ್ಲಿದ್ದ ಗ್ರಾಮಸ್ಥರಿಗೆ ಆಘಾತ ನೀಡಿದೆ.
ಪರಿಹಾರಕ್ಕೆ ಸಿದ್ದು ಮನವಿ: ಅಪಘಾತದಲ್ಲಿ ಮೃತರಾದವರಿಗೆ ಸರಕಾರದಿಂದ ಪರಿಹಾರ ನೀಡಬೇಕೆಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದಾರೆ. ಹಳದೂರ ಗ್ರಾಮ ಬಾದಾಮಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸ್ವತಃ ಸಿದ್ದರಾಮಯ್ಯನವರು ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಗಾಯಾಳುಗಳಿಗೆ ಚಿಕಿತ್ಸೆ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ಗಮನ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೂ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.