ಬಾಗಲಕೋಟೆ: ಕೋವಿಡ್‌ಗೆ ಮತ್ತೆ ಮೂವರು ಬಲಿ ; ಜಿಲ್ಲೆಯಲ್ಲಿ ಒಟ್ಟು 62 ಜನ ಸಾವು


Team Udayavani, Aug 8, 2020, 3:00 AM IST

ಬಾಗಲಕೋಟೆ: ಕೋವಿಡ್‌ಗೆ ಮತ್ತೆ ಮೂವರು ಬಲಿ ; ಜಿಲ್ಲೆಯಲ್ಲಿ ಒಟ್ಟು 62 ಜನ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 19 ಮರಣ ಮೃದಂಗ ಮುಂದುರೆದಿದೆ.

ಶುಕ್ರವಾರ ಒಂದೇ ದಿನ ಮೂವರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಂಬಂಧಿತ ಸಾವಿನ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ಬೇರೆ ಜಿಲ್ಲೆಯಲ್ಲಿ ಸಾವನ್ನಪ್ಪಿದ ಮೂವರು ಸಹಿತ ಒಟ್ಟು 62 ಜನರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.

ತೇರದಾಳದ 63 ವರ್ಷದ ಪುರುಷ ಕಳೆದ ಆ. 2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ನಗರದ 58 ವರ್ಷದ ಪುರುಷ ಕಳೆದ ಆ.1ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧುಮೇಹ, ರಕ್ತ ಹೀನತೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರೂ ಶುಕ್ರವಾರ ಸಾವನ್ನಪ್ಪಿದ್ದಾರೆ.

ಅಲ್ಲದೇ ಬಾದಾಮಿಯ 65 ವರ್ಷದ ಪುರುಷ ಕಳೆದ ಆ.2ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಕೋವಿಡ್ ಜತೆಗೆ ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ಸಮಸ್ಯೆ ಇತ್ತು. ಇವರು ಶುಕ್ರವಾರ ಮೃತಪಟ್ಟಿದ್ದಾರೆ.

ಕೋವಿಡ್‌ನಿಂದ ಜಿಲ್ಲೆಯಲ್ಲಿ ಈ ವರೆಗೆ 59 ಜನ ಮೃತಪಟ್ಟಿದ್ದು, ಬೆಂಗಳೂರು, ವಿಜಯಪುರ ಹಾಗೂ ಗದಗನಲ್ಲಿ ತಲಾ ಒಬ್ಬರು ಸೇರಿ ಒಟ್ಟು 62 ಜನರು ಬಲಿಯಾಗಿದ್ದಾರೆ.

ಒಂದೇ ದಿನ 148 ಜನರಿಗೆ ಸೋಂಕು:
ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರ ನಾಲ್ವರು ಸಿಬ್ಬಂದಿ ಸಹಿತ ಶುಕ್ರವಾರ ಮತ್ತೆ 148 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಬಾಗಲಕೋಟೆ ತಾಲೂಕಿನಲ್ಲಿ 26, ಬಾದಾಮಿ 44, ಬೀಳಗಿ 4, ಹುನಗುಂದ 32, ಮುಧೋಳ 26, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಸಹಿತ ಒಟ್ಟು 148 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಮತ್ತೆ 84 ಜನರು ಕೋವಿಡ್ 19 ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು 2762ಕ್ಕೇ ಏರಿಕೆಯಾಗಿದ್ದು, 1238 ಜನರು ಕೋವಿಡ್‌ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಿಂದ ಕಳುಹಿಸಿದ 157 ಜನರ ಗಂಟಲು ದ್ರವ ಮಾದರಿ ವರದಿ ಇನ್ನೂ ಬರಬೇಕಿದೆ. ಸಧ್ಯ ಜಿಲ್ಲೆಯಲ್ಲಿ 666 ಜನರು ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಈವರೆಗೆ 33,298 ಜನರ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 30,101 ಜನರ ವರದಿ ನೆಗೆಟಿವ್ ಬಂದಿದೆ. 2762 ಜನರಿಗೆ ಪಾಜಿಟಿವ್ ಬಂದಿದ್ದು, 1238 ಜನರು ಗುಣಮುಖರಾಗಿದ್ದಾರೆ. ಸಧ್ಯ 1389 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.