ಬೇಡಿಕೆ ಈಡೇರಿಕೆಗೆ ಕೂಲಿ ಕಾರ್ಮಿಕರ ಪ್ರತಿಭಟನೆ

ನರೇಗಾದಲ್ಲಿ ಎನ್‌ಎಂಎಂಎಸ್‌ ಪದ್ಧತಿ ಅವೈಜ್ಞಾನಿಕ

Team Udayavani, Apr 12, 2022, 5:07 PM IST

19

ಹುನಗುಂದ: ಗ್ರಾಮೀಣ ಕೂಲಿ ಕಾರ್ಮಿಕರಿಗೆ ಜಾಬ್‌ ಕಾರ್ಡ್‌ ನೀಡುವುದು ಮತ್ತು ಎನ್‌ಎಂಆರ್‌ ಜೀರೋ ಮಾಡಿ ಕಾರ್ಮಿಕರನ್ನು ಸತಾಯಿಸುವ ಕಾರ್ಯ ಪ್ರತಿಯೊಂದು ಗ್ರಾಪಂ ಪಿಡಿಒಗಳು ಮತ್ತು ಅಲ್ಲಿನ ಸಿಬ್ಬಂದಿಯಿಂದ ನಡೆಯುತ್ತಿದೆ. ಅದನ್ನು ಸರಿಪಡಿಸುವಂತೆ ಒತ್ತಾಯಿಸಿ ಸೋಮವಾರ ತಾಪಂ ಆವರಣದ ಮುಂಭಾಗದಲ್ಲಿ ಗ್ರಾಕೂಸ್‌ ಸಂಘಟನೆ ಪ್ರತಿಭಟನೆ ನಡೆಸಿತು.

ತಾಪಂ ಇಒ ಸಿ.ಬಿ.ಮೇಗೇರಿ ಮತ್ತು ಎಡಿ ಮಹಾಂತೇಶ ಕೋಟಿ ಅವರನ್ನು ಗ್ರಾಮೀಣ ಕೂಲಿ ಕಾರ್ಮಿಕರು ತರಾಟೆಗೆ ತಗೆದುಕೊಂಡರು. ನರೇಗಾದಲ್ಲಿ ಎನ್‌ಎಂಎಂಎಸ್‌ ಪದ್ಧತಿ ಸರ್ಕಾರ ಜಾರಿಗೆ ತಂದಿರುವುದು ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಪದ್ದತಿ ನಿಲ್ಲಿಸಬೇಕು. ಇನ್ನು ಜಾತಿ ಆಧಾರದ ಮೇಲೆ ನರೇಗಾದ ಕಾರ್ಮಿಕರ ಬಿಲ್‌ ಮಾಡುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ಎಂದು ಹೇಳುತ್ತಿರುವ ಸರ್ಕಾರ ಏಕೆ ಜಾತಿ ಆಧಾರ ಮೇಲೆ ವೇತನ ಮಾಡುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಹಾಗೂ ಇತರೆ ಎಂದು ಏಕೆ ತಾರತಮ್ಯ ಮಾಡುತ್ತಿದೆ. ಇದರಿಂದ ತಾಲೂಕಿನ ನೂರಾರು ಕಾರ್ಮಿಕರ ಒಂದು ವರ್ಷದ ಬಿಲ್‌ ಆಗಿಲ್ಲ. ಒಂದೇ ಬಾರಿ ವೇತನ ಮಾಡುವಂತೆ ತಿಳಿಸಬೇಕೆಂದು ಗ್ರಾಮೀಣ ಕೂಲಿ ಕಾರ್ಮಿಕರು ಸ್ಥಳೀಯ ಪಿಡಿಒಗಳಿಗೆ ಲಿಖೀತವಾಗಿ ಮತ್ತು ತಾಪಂ ಇಒ ಅವರಿಗೆ ಮೌಖೀಕವಾಗಿ ಹೇಳಿದರೂ ಸರ್ಕಾರಕ್ಕೆ ಈ ವಿಷಯದ ಕುರಿತು ಪತ್ರ ವ್ಯವಹಾರ ಸಹ ಮಾಡಿಲ್ಲ. ಗ್ರಾಕೂಸ್‌ ಮುಖಂಡ ಮಹಾಂತೇಶ ಹೊಸಮನಿ ಮಾತನಾಡಿದರು.

ತಾಲೂಕಿನ ಹಿರೇಮಳಗಾವಿ, ಮೂಗನೂರ, ಹೂವಿನಹಳ್ಳಿ, ಹಾವರಗಿ ಸೇರಿದಂತೆ ಪ್ರತಿಯೊಂದು ಗ್ರಾಪಂಯಲ್ಲಿ ಹೊಸದಾಗಿ ಜಾಬ್‌ ಕಾರ್ಡ್‌ ಪಡೆಯಬೇಕಾದರೇ ಪಂಚಾಯಿತಿ ಸಿಬ್ಬಂದಿಗೆ ಹಣ ನೀಡಿದರೇ ಮಾತ್ರ ಜಾಬ್‌ ಕಾಡ್‌ ನೀಡುತ್ತಾರೆ. ಇನ್ನು ಮೂಗನೂರ ಗ್ರಾ.ಪಂಯಲ್ಲಿ ಕಾನೂನುಬಾಹಿರವಾಗಿ ಜಾಬ್‌ ಕಾರ್ಡ್‌ ವಿತರಣೆ ಮಾಡಿದ್ದಾರೆಂದು ಆರೋಪಿಸಿದರು.

ಹಿರೇಮಳಗಾವಿ, ಮೂಗನೂರ, ಹೂವಿನಹಳ್ಳಿ, ರಕ್ಕಸಗಿ, ಹಿರೇಬಾದವಾಡಗಿ, ಬಿಂಜವಾಡಗಿ, ಹಾವರಗಿ, ಧನ್ನೂರ, ಬೆಳಗಲ್ಲ, ಐಹೊಳೆ ಸೇರಿದಂತೆ ಅನೇಕ ಗ್ರಾಪಂನಲ್ಲಿ ಕೂಲಿ ನೀಡದೇ ಇರೋದು ಮತ್ತು ಮಾಡಿದ ಕೆಲಸಕ್ಕೆ ಕೂಲಿ ನೀಡಿಲ್ಲ, ಇನ್ನು ಕೃಷಿ ಹೊಂಡ ಕೂಲಿ ಬಾಕಿ ಉಳಿದಿದೆ. ಬೇಡಿಕೆ ಈಡೇರುವರಿಗೂ ಪ್ರತಿಭಟನೆ ಮುಂದುವರಿಸಲು ಗ್ರಾಮೀಣ ಕೂಲಿ ಕಾರ್ಮಿಕರು ಬಿಗಿ ಪಟ್ಟು ಹಿಡಿದರು.

ಗ್ರಾಕೂಸ್‌ ಸಂಘಟನೆಯ ಮುಖಂಡರಾದ ಮಹಾಂತೇಶ ಹೊಸಮನಿ, ಯಮನೂರ ಮಾದರ, ಮಹಾದೇವಿ ಹಡಪದ, ರೇಣುಕಾ ತುಪ್ಪದ, ಎಸ್‌ .ಬಿ.ವಟವಟಿ, ವಿ.ವಿ.ಜಾಲಿಹಾಳ, ಅನುಸೂಯಾ ನಾಗರಾಳ, ಎನ್‌.ಎನ್‌.ಕಟ್ಟಿಮನಿ, ಎಸ್‌. ಎಂ.ಭದ್ರಶೆಟ್ಟಿ, ಎಸ್‌.ಬಿ.ಪರನಗೌಡ್ರ, ಅಮರೇಶ ಕುಂಬಾರ, ಕಲ್ಲಪ್ಪ ಆನೇಹೊಸೂರ, ಗ್ಯಾನಪ್ಪ ತಳಗೇರಿ, ಗ್ಯಾನಪ್ಪ ಬೂದಗೂಳಿ, ನಿರ್ಮಲಾ ಬೆಳಗಲ್ಲ, ಮಹಾಂತಪ್ಪ ಚೆಳ್ಳಿಕಟ್ಟಿ, ಪ್ರಭು ಹಳ್ಳೂರ, ಸಂಗನಬಸಮ್ಮ ಪಾಟೀಲ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಪಂ ಇಒ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕಾರ್ಮಿಕರು: ಗ್ರಾಮೀಣ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರು ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದನ್ನು ಅರಿತು ಮಹಿಳಾ ಕಾರ್ಮಿಕರು ಇಒ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.