ಶಿರೂರಲ್ಲಿ ನೀರಿಗಾಗಿ ಜಾನುವಾರುಗಳ ಅಲೆದಾಟ

ಸಣ್ಣ ಕೆರೆಯಲ್ಲಿ ನೀರು ಇಳಿಮುಖ

Team Udayavani, May 5, 2022, 1:07 PM IST

13

ಶಿರೂರ: ಈಗಾಗಲೇ ಬೇಸಿಗೆಯ ರಣಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇನ್ನೂ ಎರಡು ತಿಂಗಳು ಕಳೆಯುವುದು ಹೇಗೆ ಎಂಬ ಚಿಂತೆ ಜನರಲ್ಲಿ ಕಾಡುತ್ತಿದೆ. ಬಿಸಿಲಿನ ತಾಪಮಾನಕ್ಕೆ ಜನರು ಬಸವಳಿದಿದ್ದಾರೆ. ಇದರಿಂದ ಪಟ್ಟಣದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲವಾದರೂ ಜಾನುವಾರು ಹಾಗೂ ಕುರಿಗಳು, ಆಡುಗಳಿಗೆ ಸಮಸ್ಯೆ ಆಗುತ್ತಿದೆ.

ಪಟ್ಟಣದ ಐತಿಹಾಸಿಕ ಎರಡು ಕೆರೆಗಳಲ್ಲಿ ಶೇ. 60ರಷ್ಟು ನೀರು ಇದ್ದರೆ, ಸಣ್ಣ ಕೆರೆ (ಪಡಗೇರಿಯಲ್ಲಿ) ಶೇ. 30ರಷ್ಟು ನೀರು ಇಲ್ಲದಂತಾಗಿದೆ. ಇದರಿಂದ ಜಾನುವಾರು, ಕುರಿ, ಆಡುಗಳನ್ನು ಸಾಕಿ ಬದುಕು ಸಾಗಿಸುವ ಕುರಿಗಾಹಿಗಳು ಬೇಸಿಗೆಯಲ್ಲಿ ನೀರು ಸಿಗದೆ ಅಲೆದಾಡುವಂತಾಗಿದೆ.

ಶಿರೂರ ಪಟ್ಟಣದಲ್ಲಿ ಹೆಚ್ಚಾಗಿ ರೈತರು ಜಾನುವಾರುಗಳನ್ನು ಸಾಕಿದ್ದು, ಅಲ್ಲದೇ ಶಿರೂರ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಕುರಿ ಹಿಂಡುಗಳಿದ್ದು, ಗುಡ್ಡಗಾಡು ಪ್ರದೇಶದ ಪ್ರಮುಖ ಉದ್ಯಮವಾಗಿದೆ. ಪಟ್ಟಣದ ಕೆರೆಗಳಲ್ಲಿ ಸದ್ಯದ ಮಟ್ಟಿಗೆ ನೀರಿನ ಕೊರತೆ ಇಲ್ಲ ಆದರೆ, ಕೃಷಿ ಭೂಮಿಯಲ್ಲಿನ ಭೋಸರೆಡ್ಡಿಕೆರೆ, ಶಿವನಕೆರೆ, ಕಕ್ಕಿಹಳ್ಳ, ಗುಡಮೆಂಚಿ ಕೆರೆಗಳಲ್ಲಿ ಸ್ವಲ್ಪ ಪ್ರಮಾಣದ ನೀರಿದ್ದು, ಇದರಿಂದ ಕುರಿಗಳಿಗೆ ನೀರಿನ ದಾಹ ತೀರದಂತಾಗಿದೆ. ಇದರಿಂದ ಆಹಾರ, ನೀರಿಗಾಗಿ ಸುಡು ಬಿಸಿಲಿನಲ್ಲಿ ಅಲೆದಾಡಬೇಕಾಗಿದೆ, ಪಡಗೇರಿಗೆ ಬಂದಿದ್ದೆ ಹಿನ್ನಿರು ಸಹ ಈಗ ಇಲ್ಲದಂತಾಗಿದೆ, ಜನರ ಕುಡಿಯುವ ನೀರಿಗಾಗಿ ಮಿಣಚಮಡ್ಡಿ, ಬೊಸಭಾವಿ, ಅಂಬೇಡ್ಕರ್‌ ನಗರ, ಗಾಳಿದುರ್ಗಮ್ಮ ಗುಡಿ ಹತ್ತಿರ, ಸೇರಿದಂತೆ 8 ಬೋರವೆಲ್‌ಗ‌ಳು ಕಾರ್ಯ ಮಾಡಿದರೆ, ಬಹು ಗ್ರಾಮ ಕುಡಿವ ನೀರು ಯೋಜನೆಯ ನೀರನ್ನು ಸಹ ಪಟ್ಟಣದ ಎರಡು ಓವರ್‌ ಟ್ಯಾಂಕಿಗೆ ಸೇರಿಸಿ ಜನರಿಗೆ ಒದಗಿಸಲಾಗುವುದು. ಇದರಿಂದ ಜನರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದು. ಅಲ್ಲದೇ ಬೇಸಿಗೆಯಲ್ಲಿ ವಿದ್ಯುತ್‌ ಕಡಿತ ಇತರೆ ಸಮಸ್ಯೆಗಳಿಂದ ಸಮಸ್ಯೆಗಳು ಸಹಜ. ಜನರು ಸಹ ತಮ್ಮ ನಲ್ಲಿಗಳ ನೀರು ಪೋಲಾಗದಂತೆ ನೋಡಿ ಮಿತವಾಗಿ ಬಳಿಸಿ ನಮ್ಮೊಂದಿಗೆ ಸಹಕರಿಸಬೇಕೆಂದು ಪಪಂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಜನರಷ್ಟೆ ಜಾನುವಾರುಗಳ ಕುರಿ, ಆಡುಗಳಿಗೂ ಸಹ ಕುಡಿವ ನೀರಿನ ವ್ಯವಸ್ಥೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಪಟ್ಟಣದಲ್ಲಿ ನೀರಿನ ಸಮಸ್ಯೆ ಇಲ್ಲ. ಕೆಲ ಬೋರವೆಲ್‌ಗ‌ಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, 15ನೇ ಹಣಕಾಸು ಯೋಜನೆಯಲ್ಲಿ ನಿಗದಿ ಪಡಿಸಿದ ಎರಡು ಕಡೆ ಬೋರ್‌ವೆಲ್‌ ಕೊರೆಸಲಾಗುವುದು. ಇದಕ್ಕೆ ಜಿಲ್ಲಾ ಧಿಕಾರಿಗಳು ಮಂಜೂರು ನೀಡಿದ್ದು, ಇದು ತ್ವರಿತವಾಗಿ ನಡೆಯುವುದರೊಂದಿಗೆ ಕುರಿ ಜಾನುವಾರುಗಳಿಗೂ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. -ಐ.ಜಿ. ಕೊಣ್ಣೂರ, ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ ಶಿರೂರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.