ನಿರುಪಯುಕ್ತ ಜಾಗ ಈಗ ಉದ್ಯಾನ
ಹಸಿರು ಕಂಗೊಳಿಸುವ ಉದ್ಯಾನ ನಿರ್ಮಾಣ•ಖಾಸಗಿ ವಾಹನಗಳ ಮಾಲೀಕರ ಕಾರ್ಯ
Team Udayavani, May 15, 2019, 11:18 AM IST
ತೇರದಾಳ: ಪಟ್ಟಣದ ಬಸ್ ನಿಲ್ದಾಣ ಬಳಿ ಖಾಸಗಿ ವಾಹನಗಳ ಚಾಲಕರು ಹಾಗೂ ಮಾಲೀಕರು ನಿರ್ಮಿಸಿದ ಉದ್ಯಾನವನ.
ತೇರದಾಳ: ಪಟ್ಟಣದ ಬಸ್ ನಿಲ್ದಾಣ ಬಳಿಯ ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಂಪೌಂಡ್ಗೆ ಹೊಂದಿಕೊಂಡಿದ್ದ ನಿರುಪಯುಕ್ತ ಜಾಗ ಈಗ ಉದ್ಯಾನವನವಾಗಿ ಮಾರ್ಪಟ್ಟಿದೆ.
ಖಾಸಗಿ ವಾಹನಗಳ ಚಾಲಕರು ಉದ್ಯಾನವನ ನಿರ್ಮಿಸಿ ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ. ಮೂತ್ರವಿಸರ್ಜನೆ, ಸತ್ತ ಪ್ರಾಣಿ ಸೇರಿದಂತೆ ಗಲೀಜು ತಂದು ಹಾಕಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತು. ಇದನ್ನು ಕಂಡ ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದವರು ಪರಿಸರ ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ತಮ್ಮ ಸ್ವಂತ ಹಣದಲ್ಲಿಯೇ ಸುಮಾರು ಅರ್ಧ ಕಿ.ಮೀ ದೂರದವರೆಗೆ ಪೈಪ್ಲೈನ್ ಅಳವಡಿಸಿ ನೀರಿನ ಅನುಕೂಲ ಮಾಡಿಕೊಂಡ ಚಾಲಕರು ಹಾಗೂ ಮಾಲೀಕರು ಶ್ರಮದಾನದಿಂದ ಸ್ಥಳ ಶುಚಿಗೊಳಿಸಿದರು. ಸಸಿ ನೆಡಲು ಗುಂಡಿತೋಡಿ, ಗೊಬ್ಬರ ಹಾಕಿ ಭೂಮಿ ಸಿದ್ಧಪಡಿಸಿಕೊಂಡರು. ಗೋವಾ, ಬೆಂಗಳೂರು, ಸಾಂಗಲಿ ಸೇರಿದಂತೆ ವಿವಿಧ ಕಡೆಗಳಿಂದ ಮಾವು, ತೆಂಗು, ತುಳಸಿ, ಬೇವು, ಬದಾಮ, ಸಾಗವಾನಿ, ವಿವಿಧ ತೆರನಾದ ಹೂ-ಬಳ್ಳಿ ಸೇರಿದಂತೆ ಅನೇಕ ಸಸಿಗಳನ್ನು ತಂದು ನಾಟಿ ಮಾಡಿದ್ದಾರೆ. ದಿನಂಪ್ರತಿ ಎಲ್ಲರೂ ಸರದಿಯಂತೆ ನೀರುಣಿಸಿದ್ದಾರೆ. ಬೇಸಿಗೆಯಾಗಿದ್ದರಿಂದ ಕೆರೆಯಿಂದ ನೀರು ತಂದು ಹಾಕಿ, ಸಸಿಗಳ ರಕ್ಷಣೆಗೆ ಸ್ವಂತ ಖರ್ಚಿನಿಂದ ತಂತಿ ಜಾಳಿಗೆ ಅಳವಡಿಸಿ ಪೋಷಣೆ ಮಾಡುತ್ತಿದ್ದಾರೆ. ಆಗಾಗ್ಗೆ ಕಳೆ-ಕಸ ತೆಗೆದು ಸ್ವಚ್ಛ ಕಾರ್ಯ ಕೈಗೊಂಡಿದ್ದಾರೆ. ಅನೇಕ ಹೂ, ಗಿಡ, ಬಳ್ಳಿಗಳು ಬೆಳೆದು ನೋಡುಗರನ್ನು ಕೈಬೀಸಿ ಕರೆಯುತ್ತಿವೆ. ಕಲ್ಲಿನ ಆಸನ ನಿರ್ಮಿಸಿದ್ದು, ಬಿಸಿಲಿನ ತಾಪಕ್ಕೆ ಬಸವಳಿದವರಿಗೆ ವಿಶ್ರಾಂತಿಗೆ ಆಹ್ವಾನಿಸುವ ಸುಂದರ ತಾಣವಾಗಿದೆ.
ಚಾಲಕರು ಹಾಗೂ ಮಾಲೀಕರು ಪುರಸಭೆಯವರಿಂದ ನಲ್ಲಿ ಜೋಡಣೆ ಪಡೆದು ವಿವಿಧ ಕಡೆ ಹೋಗಿ ಅನೇಕ ಸಸಿಗಳನ್ನು ಹಾಗೂ ಮಾರ್ಗದರ್ಶನ ಪಡೆದು ಕೈ ದೋಟ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ
Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ
ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ
ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ
ಭೈರನಹಟ್ಟಿ: ಕಾರ್ಗಿಲ್ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.