ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ


Team Udayavani, Oct 15, 2024, 9:05 PM IST

11-mudhol

ಮುಧೋಳ: ಜನರು ನನಗೆ ಆಶೀರ್ವಾದ ಮಾಡಿರುವ ಪರಿಣಾಮ‌‌ ಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ನಿಮ್ಮ ಸೇವೆಗೆ ಸದಾ ಸಿದ್ದನಿದ್ದು ನನ್ನ ಆಡಳಿತಾವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಶಕ್ತಿ ಮೀರಿ‌‌ ಪ್ರಯತ್ನಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಮುಧೋಳ ನಗರದ ರನ್ನ ಕ್ರೀಡಾಂಗಣದಲ್ಲಿ ನಿರ್ಮಾಣಗೊಳ್ಳಲಿರುವ ರನ್ನಿಂಗ್ ಟ್ರ್ಯಾಕ್ (ಮಡ್ ಟ್ರ್ಯಾಕ್) ಕಾಮಗಾರಿಗೆ ಅ.15ರ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾನಡಿದ ಅವರು, ಮೊದಲ ಬಾರಿಗೆ ಶಾಸಕನಾದಾಗ ಹಲವು ಕಠಿಣ ನಿರ್ಧಾರ ತೆಗೆದುಕೊಂಡ ಪರಿಣಾಮ ನಮಗೆ ಸೋಲಾಯಿತು. ಒಳ್ಳೆಯ ಕೆಲಸ ಮಾಡುವಾಗ ನನ್ನ ಜೊತೆಗೆ ನೀವು ನಿಲ್ಲದಿದ್ದರೆ ರಾಜಕಾರಣ ಜೀವನದಲ್ಲಿ‌‌ ನನಗೂ ಕಷ್ಟವಾಗಲಿದೆ ಎಂದು ತಮ್ಮ ರಾಜಕೀಯ ಏಳು-ಬೀಳುಗಳ ಮೆಲುಕು ಹಾಕಿದರು.

ಮುಧೋಳ ನಗರಕ್ಕೆ ಹೆಚ್ಚಿನ ಕೆಲಸಗಳಾಗಬೇಕಿದೆ. ಉದ್ಯಾನವನಗಳ ಸ್ವಚ್ಛತೆ, 24*7 ಕುಡಿಯುವ ನೀರು, ವೈಜ್ಞಾನಿಕ ವ್ಯಾಯಾಮ ಶಾಲೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲಿಯೇ ಕಾರ್ಯ ಯೋಜನೆ ಹಾಕಿಕೊಳ್ಳಲಾಗುವುದು ಎಂದರು.

ತಾಲೂಕಿನ 20-50 ಶಾಲೆಗಳಿಗೆ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಮೈಸೂರು ದಸರಾದಲ್ಲಿ ನಮ್ಮ ಊರಿನ ಕುಸ್ತಿಪಟುಗಳು ಮುಧೋಳದ‌ ಹೆಸರನ್ನು ಉತ್ತುಂಗಕ್ಕೇರಿಸಿದ್ದಾರೆ ಅವರೆಲ್ಲರಿಗೂ ಧನ್ಯವಾದವನ್ನು ಹೇಳಿದರು.

ನಮ್ಮ‌ ಭಾಗದಲ್ಲಿ ಕುಸ್ತಿಗೆ ಬೇಕಾದ ಎಲ್ಲ ವ್ಯವಸ್ಥೆ ಕಲ್ಪಿಸಲು ನಾನು ಬದ್ದ‌ ಎಂದು ಭರವಸೆ ನೀಡಿ, ನಿಮ್ಮ ಸೇವಕನಾಗಿ ನಿಮ್ಮ ಕೆಲಸ‌ ಕಾರ್ಯಗಳನ್ನು ಮಾಡುತ್ತೇನೆ ಎಂದು ವಾಗ್ದಾನ ಮಾಡಿದರು.

ಮುಖಂಡ ವೆಂಕಣ್ಣ ಗಿಡ್ಡಪ್ಪನವರ ಮಾತನಾಡಿ, 15 ವರ್ಷದಿಂದ ಬೇಡಿಕೆಯಿದ್ದ ಮಡ್ ಟ್ರ್ಯಾಕ್ ಇಂದು‌‌ ನನಸಾಗುವ ಕಾಲ ಸನ್ನಿಹಿತವಾಗಿದೆ. ಇದರಿಂದ ನಗರದ ಕ್ರೀಡಾಪಟುಗಳಿಗೆ, ವಾಯು ವಿಹಾರಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಡಾ. ಶಿವಾನಂದ ಕುಬುಸದ ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ಮಡ್ ಟ್ರ್ಯಾಕ್ ಹೆಚ್ಚು ಅನುಕೂಲ. ಧೂಳು ಇಲ್ಲದ ದಾರಿಯಿಂದ ಜನರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಟ್ರ್ಯಾಕ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವ ತಿಮ್ಮಾಪುರ ಅವರಿಗೆ ಅಭಿನಂದನೆ ಸಲ್ಲಿಸಿದರು.

ನಗರಸಭೆ ಅಧ್ಯಕ್ಷ ಸುನಂದಾ ತೇಲಿ, ಉಪಾಧ್ಯಕ್ಷ ಎಂ.ಎಂ. ಬಾಗವಾನ, ಸದಸ್ಯರಾದ ಡಾ.ಸತೀಶ ಮಲಘಾಣ, ಸಂತೋಷ ಪಾಲೋಜಿ, ಬ್ಲಾಕ್ ಕಾಂಗ್ರೆದ್ ಅಧ್ಯಕ್ಷ ಅಶೋಕ ಕಿವಡಿ, ಬಸವಂತ ಕಾಟೆ, ನ್ಯಾಯವಾದಿ ಎಂ.ಬಿ. ಹಿರೇಮಠ, ವಿ.ಎನ್. ನಾಯಕ, ಗೋವಿಂದಪ್ಪ ಗುಜ್ಜನ್ನವರ, ಬಿಡಿಸಿಸಿ ಮಾಜಿ ಉಪಾಧ್ಯಕ್ಷ ಶಿವಾನಂದ ಉದುಪುಡಿ, ಡಾ. ಉದಯ ನಾಯಕ, ಶಿವಾನಂದ ಕತ್ತಿ, ರಾಘವೇಂದ್ರ‌‌ ಮೊಕಾಶಿ, ಉದಯಸಿಂಗ್ ಪಡತಾರೆ, ಶಿವಾನಂದ ಕುಬುಸದ, ಶಫಿಕ ಬೇಪಾರಿ, ಮಲ್ಲಿಕಾರ್ಜುನ ಅಂಬಿಗೇರ, ರಜಮಾ ಬೇಪಾರಿ, ತಹಸೀಲ್ದಾರ್ ಮಹಾದೇವ ಸಣಮುರಿ, ತಾಪಂ ಇಒ ಉಮೇಶ ಸಿದ್ನಾಳ, ಸಹಾಯಕ‌‌ ನಿರ್ದೇಶಕ‌ ಗುರುಪಾದ ಡೋಗಿ, ಲೋಕೋಪಯೋಗಿ ಇಲಾಖೆ ಎಇಇ ಚನ್ನಬಸು ಮಾಚನವರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ‌ ಮೋಹನ ಕೋರಡ್ಡಿ ಸೇರದಂತೆ ಇತರರಿದ್ದರು.

ಟಾಪ್ ನ್ಯೂಸ್

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

Jaishankar reaches Pakistan: Indian Foreign Minister visits after 9 years

Jaishankar: ಪಾಕ್‌ ತಲುಪಿದ ಜೈಶಂಕರ್‌: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

2-mudhol

Mudhol: ಸಾಂಸ್ಕೃತಿಕ ಸೇವೆಯಲ್ಲೂ ಗಣನೀಯ ಸಾಧನೆ- ಮೈಸೂರು ದಸರಾದಲ್ಲಿ ಮುಧೋಳ ಮಲ್ಲರ ಕಮಾಲ್

2-ratan-tata

Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Untitled-1

Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

Jaishankar reaches Pakistan: Indian Foreign Minister visits after 9 years

Jaishankar: ಪಾಕ್‌ ತಲುಪಿದ ಜೈಶಂಕರ್‌: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.