ಅಲ್ಪಸಂಖ್ಯಾತ ಮಕ್ಕಳಿಗೆ ಮಾಹಿತಿ ಕೊರತೆ

ಸರ್ಕಾರಿ ಸೌಲಭ್ಯದ ಮಾಹಿತಿ ಕಾರ್ಯಕ್ರಮದಲ್ಲಿ ಶಾಸಕ ರಾಜೇಗೌಡ ಬೇಸರ

Team Udayavani, Oct 4, 2019, 5:44 PM IST

4-October-25

ಬಾಳೆಹೊನ್ನೂರು: ಮಾಹಿತಿ ಕೊರತೆಯಿಂದಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಬೇಸರ ವ್ಯಕ್ತಪಡಿಸಿದರು.

ಪಿಸಿಬಿ ಆವರಣದಲ್ಲಿ ಇಮಾಮ್‌ ಎ-ಅಝಮ್‌ ಎಜುಕೇಷನ್‌ ಮತ್ತು ಚಾರಿಟೇಬಲ್‌ ಫಂಡ್‌ ಟ್ರಸ್ಟ್‌ ವತಿಯಿಂದ ಮಾಹಿತಿ ಸೇವಾ ಕೇಂದ್ರ ಹಾಗೂ ಅಲ್ಪಸಂಖ್ಯಾತರ ಸರ್ಕಾರಿ ಸೌಲಭ್ಯದ ಮಾಹಿತಿ ಮತ್ತು ಆನ್‌ ಲೈನ್‌ ಅಪ್ಲಿಕೇಶನ್‌ ಸೇವೆಗಳ ಬಗ್ಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಲ್ಪಸಂಖ್ಯಾತರಿಗಾಗಿ ಶಾದಿ ಮಹಲ್‌, ಜೈನ ಬಸದಿ, ಚರ್ಚ್‌, ಉನ್ನತ ಶಿಕ್ಷಣ ಸ್ವ ಉದ್ಯೋಗ, ಶಾದಿ ಭಾಗ್ಯ ಸೇರಿದಂತೆ ಹಲವಾರು ಯೋಜನೆಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದ್ದು, ಎಲ್ಲರೂ ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ವಿಜಯ ಮಾತೆ ದೇಗುಲದ ಧರ್ಮಗುರು ಲ್ಯಾನ್ಸಿ ಪಿಂಟೋ ಮಾತನಾಡಿ, ಧರ್ಮದ ತಳಹದಿಯಲ್ಲಿ ಶಿಕ್ಷಣ ಪಡೆದಲ್ಲಿ ವಿಶೇಷ ಜ್ಞಾನವಂತರಾಗಿ ಸಾಧನೆ ಮಾಡಬಹುದಾಗಿದೆ.

ಸೇವಾ ಕೇಂದ್ರದ ಅವಶ್ಯಕತೆ ಅನಿವಾರ್ಯವಾಗಿದ್ದು, ಮಾಹಿತಿ ಪಡೆದು ಯೋಜನೆಗಳ ಫಲವನ್ನು ಪಡೆಯುತ್ತಾರೆ. ಎಲ್ಲರೂ ಸಮಾಜಮುಖೀ ಚಿಂತನೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದು ಸೇವಾ ಕೇಂದ್ರದವರಿಗೆ ಸಲಹೆ ನೀಡಿದರು. ಅಲ್ಪಸಂಖ್ಯಾತರ ಕಚೇರಿ ವಿಸ್ತರಣಾಧಿಕಾರಿ ರಾಕೇಶ್‌ ಮಾತನಾಡಿ, ಸರ್ಕಾರದಿಂದ ಲಭ್ಯವಾಗುವ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಸಿ.ಗೀತಾ ಮಾತನಾಡಿ, ಸರ್ಕಾರಿ ಯೋಜನೆಗಳು
ತ್ವರಿತವಾಗಿ ವಿದ್ಯಾರ್ಥಿ ಸಮುದಾಯಕ್ಕೆ ತಲುಪುತ್ತಿಲ್ಲ. ಕೆಲವೆಡೆ ದಾಖಲೆ ಕಡಿತ ವಿಲೇವಾರಿ ಆಗುವುದು ವಿಳಂಬವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಟಿ.ಎಂ.ಉಮೇಶ್‌ ಕಲ್ಮಕ್ಕಿ, ತಾಲೂಕು ಬಿಜೆಪಿ ಅಧ್ಯಕ್ಷ ವೆನಿಲ್ಲಾ ಭಾಸ್ಕರ್‌ ಮಾತನಾಡಿದರು. ಜಾಮಿಯಾ ಮಸೀದಿಯ ಮೌಲಾನಖಾರಿ
ಗುಲಾಮ್‌ ಜೀಲಾನಿ, ಕಡ್ಲೆಮಕ್ಕಿ ಶರೀಯತ್‌ ಕಾಲೇಜಿನ ಹಾಮಿಂ ಶಿಹಾಬ್‌ ತಂಜ್ಞಾಲ್‌, ಶೌಖತ್‌ ಸಖಾಫಿ, ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್‌ ಇಬ್ರಾಹಿಂ, ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್‌.ಚನ್ನಕೇಶವ್‌, ತಾಲೂಕು ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಮುಕ್ತರ ಅಹಮ್ಮದ್‌, ಜಿ.ಎಂ.ಶಬೀರ್‌, ಜಿಪಂ ಸದಸ್ಯೆ ಚಂದ್ರಮ್ಮ, ತಾಪಂ ಸದಸ್ಯ ಟಿ.ಎಂ.ನಾಗೇಶ್‌ ಸೇರಿದಂತೆ ಅಲ್ಪಸಂಖ್ಯಾತ ಸೇವಾ ಸಮಿತಿ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಪಿಸಿಬಿ ಮಾಲಿಕ ಹಾಗೂ ಸೇವಾ ಸಂಸ್ಥೆ ಅಧ್ಯಕ್ಷ ಎಚ್‌.ಎಂ.ಸಲೀಮ್‌ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಜಾನ್‌ ವಿಲೆಧೀಡ್‌ ಡಿಸೋಜಾ ಸ್ವಾಗತಿಸಿದರು. ಗ್ರಾಪಂ ಅಧ್ಯಕ್ಷ ಮಹಮ್ಮದ್‌ ಹನೀಫ್‌ ಪ್ರಸ್ತಾವಿಕವಾಗಿ ಮಾತನಾಡಿದರು. ಇಬ್ರಾಹಿಂ ಶಫಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.