ವರ್ಷದಲ್ಲಿ 189 ಕೋಟಿ ಜಪ್ತಿ; 7,563 ಕೋಟಿ ನಗದು ಪತ್ತೆ


Team Udayavani, Jul 25, 2019, 3:04 AM IST

varshadalli

ಬೆಂಗಳೂರು: 2018-19ನೇ ಸಾಲಿನಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೆರಿಗೆ ಇಲಾಖೆ (ಕರ್ನಾಟಕ ಮತ್ತು ಗೋವಾ ವಲಯ)ಯು ವಿವಿಧೆಡೆ ನಡೆಸಿದ ಶೋಧ ಕಾರ್ಯದಲ್ಲಿ ಸುಮಾರು 189 ಕೋಟಿ ರೂ. ಜಪ್ತಿ ಮಾಡಿದ್ದು, ಅಲ್ಲಲ್ಲಿ ಬಚ್ಚಿಡಲಾಗಿದ್ದ 7,563 ಕೋಟಿ ನಗದು ಪತ್ತೆಹಚ್ಚಿದೆ. ಇದರಲ್ಲಿ ಪ್ರಮುಖ ರಾಜಕೀಯ ನಾಯಕರಿಗೆ ಸೇರಿದ ಹಣವೂ ಸೇರಿದೆ.

ಕರ್ನಾಟಕ ಮತ್ತು ಗೋವಾ ವಲಯದಲ್ಲಿ ಲೋಕಸಭಾ ಚುನಾವಣೆ ವೇಳೆ ಅತ್ಯಧಿಕ ಮೊತ್ತದ ಬೇನಾಮಿ (ಲೆಕ್ಕಕ್ಕೆ ಸಿಗದ) ಹಣ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಈ ಅವಧಿಯಲ್ಲಿ 35 ಕೋಟಿ ರೂ. ಜಪ್ತಿ ಮಾಡಲಾಗಿದೆ. ಒಟ್ಟಾರೆ 2018-19ರಲ್ಲಿ 158 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ 189 ಕೋಟಿ ರೂ. ಜಪ್ತಿ ಮಾಡಲಾಗಿದೆ. ಅಲ್ಲದೆ, ಬಚ್ಚಿಡಲಾಗಿದ್ದ 7,563 ಕೋಟಿ ನಗದನ್ನು ಕೂಡ ಪತ್ತೆ ಮಾಡಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಧಾನ ಮುಖ್ಯ ಆಯುಕ್ತ (ಕರ್ನಾಟಕ-ಗೋವಾ ವಲಯ) ಬಿ.ಆರ್‌. ಬಾಲಕೃಷ್ಣನ್‌ ತಿಳಿಸಿದರು.

ನಗರದ ಇನ್‌ಫ್ಯಾಂಟ್ರಿ ರಸ್ತೆಯ ಪ್ರಸ್ತಾಪಿತ ಹೊಸ ಆಯಕಾರ್‌ ಭವನದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 159ನೇ ಆದಾಯ ತೆರಿಗೆ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜತೆಗೆ ಇದೇ ಅವಧಿಯಲ್ಲಿ ತೆರಿಗೆ ವಂಚಕರ ವಿರುದ್ಧದ 355 ಪ್ರಕರಣಗಳು ದಾಖಲಾಗಿದ್ದು, ಅದರ ಮೊತ್ತ 4,830 ಕೋಟಿ ಆಗುತ್ತದೆ. ಇದಲ್ಲದೆ, ಬೇನಾಮಿ ವಹಿವಾಟುಗಳ (ನಿಷೇಧ) ತಿದ್ದುಪಡಿ ಕಾಯ್ದೆ-2016ರಡಿ 87 ಬೇನಾಮಿ ಆಸ್ತಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಆಸ್ತಿಗಳ ಮೊತ್ತ 573 ಕೋಟಿ ಆಗಿದೆ. ಈ ಸಂಬಂಧ ದಾಖಲಾದ ಪ್ರಕರಣಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರೂ ಸೇರಿದ್ದಾರೆ. ಆದರೆ, ಪಕ್ಷವಾರು ಮಾಹಿತಿ ನೀಡುವುದು ಹಾಗೂ ಆ ನಾಯಕರ ಹೆಸರು ಬಹಿರಂಗಪಡಿಸಲಾಗದು ಎಂದು ತಿಳಿಸಿದರು.

2008-09ರಲ್ಲಿ ತೆರಿಗೆ ಸಂಗ್ರಹ ಮೊತ್ತ ಕೇವಲ 30 ಸಾವಿರ ಕೋಟಿ ರೂ.ನಷ್ಟಿತ್ತು. ಕಳೆದ ವರ್ಷ ನಮ್ಮ ವಲಯದಿಂದ 1.21 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಪ್ರಸಕ್ತ ವರ್ಷ 1.51 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಿದೆ. ಇನ್ನು 2013-14ರಲ್ಲಿ 12.73 ಲಕ್ಷದಷ್ಟಿದ್ದ ಐಟಿ ರಿಟರ್ನ್ಸ್ ಅರ್ಜಿಗಳ ಸಂಖ್ಯೆ 2018-19ರಲ್ಲಿ 41.26 ಲಕ್ಷಕ್ಕೆ ಏರಿಕೆಯಾಗಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆ ವೇಳೆ 3 ಕೋಟಿ ರೂ. ಜಪ್ತಿ ಮಾಡಲಾಗಿತ್ತು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಂಡ ಮೊತ್ತ ಸುಮಾರು 35 ಕೋಟಿ ರೂ. ಆಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.