ಒಂದೇ ದಿನದಲ್ಲಿ 230ಕ್ಕೇರಿದ ಪ್ರಶಸ್ತಿ ಪುರಸ್ಕೃತರ ಸಂಖ್ಯೆ


Team Udayavani, Apr 12, 2017, 12:33 PM IST

kempegowdru-awards.jpg

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗಾಜಿನ ಮನೆಯಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಪ್ರಶಸ್ತಿ ಸಮಾರಂಭ ಗೊಂದಲ ಹಾಗೂ ಗದ್ದಲದ ಗೂಡಾಗಿತ್ತು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 158 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿತ್ತಾದರೂ ಕೊನೆ ಗಳಿಗೆಯಲ್ಲಿ  ಪುರಸ್ಕೃತ ಪಟ್ಟಿ ಬೆಳೆಯುತ್ತಾ ಹೋಗಿದ್ದರಿಂದ ಸಮಾರಂಭದಲ್ಲಿ ಅವ್ಯವಸ್ಥೆ ಉಂಟಾಗಲು ಕಾರಣವಾಯಿತು. 

ಶಾಸಕರು, ಸಚಿವರು ಹಾಗೂ ಪಾಲಿಕೆಯ ಸದಸ್ಯರ ಒತ್ತಡದ ಹಿನ್ನೆಲೆಯಲ್ಲಿ ಪುರಸ್ಕೃತರ ಸಂಖ್ಯೆ 158ರಿಂದ 230 ದಾಟಿತ್ತು. ಪರಿಣಾಮ ವೇದಿಕೆಯಲ್ಲಿ ಎಲ್ಲ ಪುರಸ್ಕೃತರಿಗೆ ಕುಳಿತು ಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸುವುದು ಸವಾಲಾ ಗಿತ್ತು. ಜತೆಗೆ ಪ್ರಶಸ್ತಿ ಸ್ವೀಕರಿಸಲು ಬಂದವರಿಗೆ  ಎಲ್ಲಿಗೆ ಹೋಗಬೇಕು? ಎಲ್ಲಿ ಕೂರಬೇಕೆಂಬ ಮಾಹಿತಿ ಇಲ್ಲದೆ ಗೊಂದಲವಾಯಿತು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸುತ್ತಿನಲ್ಲಿ 15 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಿ ಅನ್ಯ ಕಾರ್ಯದ ನಿಮಿತ್ತ ಕಾರ್ಯಕ್ರಮದಿಂದ ಹೊರಟರು. ನಂತರ, ಪ್ರಶಸ್ತಿ ಪುರಸ್ಕೃತರು ಗಣ್ಯರಿಂದಲೇ ಪ್ರಶಸ್ತಿ ಪಡೆಯಬೇಕು ಆಸೆಯಿಂದ ವೇದಿಕೆಗೆ ಬಂದ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಏಕಕಾಲದಲ್ಲಿ 30ಧಿ-40 ಮಂದಿ ಪುರಸ್ಕೃತರು ವೇದಿಕೆಗೆ ಬಂದ ಹಿನ್ನೆಲೆಯಲ್ಲಿ ಪ್ರಶಸ್ತಿ ಯಾರಿಗೆ ನೀಡಬೇಕು ಎಂಬುದು ತಿಳಿಯದೆ ಗಣ್ಯರು ಸಹ ಗಲಿಬಿಲಿಗೊಂಡರು. 

ಮಾಹಿತಿಯಿಲ್ಲ: ಕೆಂಪೇಗೌಡ ಪ್ರಶಸ್ತಿಗೆ ಪುರಸ್ಕೃತರ ಆಯ್ಕೆ ಪ್ರಕ್ರಿಯೆ ಮಂಗಳವಾರ ಸಂಜೆಯವರಿಗೆ ನಡೆದ ಹಿನ್ನೆಲೆಯಲ್ಲಿ ಪ್ರಶಸ್ತಿ ಪಡೆದ ಹಲವರಿಗೆ ತಮಗೆ ಪ್ರಶಸ್ತಿ ಬಂದಿದೆ ಎಂಬ ಮಾಹಿತಿ ಇರಲಿಲ್ಲ. ಜತೆಗೆ ಸೋಮವಾರ ಬಿಬಿಎಂಪಿ ಪ್ರಕಟಿಸಿದ ಪುರಸ್ಕೃತರಿಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲು ಪಾಲಿಕೆ ಯಿಂದ ಕರೆ ಮಾಡಿರಲಿಲ್ಲ ಎನ್ನಲಾಗಿದೆ. 

ಸ್ಮರಣಿಕೆಗಳ ಕೊರತೆ!: ಪುರಸ್ಕೃತರ ಸಂಖ್ಯೆ ಎಷ್ಟಾಗಬಹುದು ಎಂಬ ನಿಖರ ಮಾಹಿತಿ ಪಾಲಿಕೆಯ ಅಧಿಕಾರಿಗಳಿಗೂ ಇರಲಿಲ್ಲ. ಪುರಸ್ಕೃತರಿಗೆ ಕೆಂಪೇಗೌಡ ಪ್ರಶಸ್ತಿಯೊಂದಿಗೆ ನೀಡಲಾಗುವ ಅಶ್ವರೋಢ ಕೆಂಪೇಗೌಡರ ಸ್ಮರಣಿಕೆಗಳ ಕೊರತೆಯಾಯಿತು. ಪಾಲಿಕೆಯ ಅಧಿಕಾರಿಗಳು 200 ಸ್ಮರಣಿಕೆಗಳನ್ನು ತರಿಸಿದ್ದರು. ಆದರೆ, ಪ್ರಶಸ್ತಿ ಪುರಸ್ಕೃತರ ಸಂಖ್ಯೆ ಹೆಚ್ಚಾಗಿದ್ದಧಿಲ್ಲದೆ ಸಮಾರಂಭದಲ್ಲಿಯೇ ಸುಮಾರು ಹೆಸರುಗಳು ಪುರಸ್ಕೃತರ ಪಟ್ಟಿಗೆ ಸೇರಿದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಪುರಸ್ಕೃತರಿಗೆ ಸ್ಮರಣಿಕೆಯನ್ನು ನಂತರ ತಲುಪಿಸುವುದಾಗಿ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ವೇದಿಕೆಯಲ್ಲೇ  ಆಯ್ಕೆ
ಪ್ರಶಸ್ತಿ ಪ್ರದಾನ ಸಮಾರಂಭದ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಸುಮಾರು 10ಕ್ಕೂ ಹೆಚ್ಚು ಮಂದಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು. ಮುಖ್ಯಮಂತ್ರಿಗಳು ಕೆಲವರಿಗೆ ಪ್ರಶಸ್ತಿ ಪ್ರದಾನ ಮಾಡಿ ಹೊರಟ ನಂತರ ವೇದಿಕೆ ಏರಿದ್ದರಿಂದ ಗೊಂದಲ ಉಂಟಾಯಿತು.  ಲಾಭಿ ಮಾಡಿದವರಿಗೆ ಸ್ಥಳದಲ್ಲಿಯೇ ಪ್ರಶಸ್ತಿ ನೀಡಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.