34 ಐಟಿ ದಾಳಿಗಳಲ್ಲಿ 24 ದಾಳಿ ಖಾಲಿ ಖಾಲಿ!


Team Udayavani, May 3, 2019, 11:00 AM IST

Udayavani Kannada Newspaper

ಬೆಂಗಳೂರು: ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ 34 ದಾಳಿಗಳಲ್ಲಿ 24 ದಾಳಿಗಳಲ್ಲಿ ಯಾವುದೇ ಅಕ್ರಮ ಹಣ ಅಥವಾ ಆಸ್ತಿ ಪತ್ತೆಯಾಗಿಲ್ಲ ಎಂದು ಜೆಡಿಎಸ್‌ ತಿಳಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಜೆಡಿಎಸ್‌ ವಕ್ತಾರ ಹಾಗೂ ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು, ಅಕ್ರಮ ಆಸ್ತಿ ಅನಧಿಕೃತ ಹಣ ವರ್ಗಾವಣೆ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೆರಿದಂತೆ ಇತರೆ ರಾಜಕೀಯ ಮುಖಂಡರು ಹಾಗೂ ಗುತ್ತಿಗೆದಾರರ ನಿವಾಸಗಳು ಕಚೇರಿಗಳಲ್ಲಿ ರಾಜ್ಯದ ವಿವಿಧೆಡೆ 34 ಕಡೆ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಪೈಕಿ ಕಾಂಗ್ರೆಸ್‌ ನಾಯಕರ ಜತೆ ಗುರುತಿಸಿಕೊಂಡಿದ್ದವರಿಗೆ ಸಂಬಂಧಿಸಿದಂತೆ 22 ಕಡೆ, ಜೆಡಿಎಸ್‌ನ ನಾಲ್ಕು, ಬಿಜೆಪಿ ನಾಯಕರು ಆಪ್ತರ ಆರು ನಿವಾಸಗಳ ಮೇಲೆ ದಾಳಿ ನಡೆಸಲಾಗಿತ್ತು.

ದಾಳಿ ನಡೆಸಿದ್ದ 24 ಕಡೆ ಯಾವುದೇ ಆಸ್ತಿ ಹಾಗೂ ಹಣ ಪತ್ತೆಯಾಗಿಲ್ಲ. ಸಂಸದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್ ಪಾಟೀಲ್, ಎಚ್.ಸಿ ಮಹದೇವಪ್ಪ, ಹಾಲಿ ಸಚಿವ ಎಂಟಿಬಿ ನಾಗರಾಜ ಅವರ ಆಪ್ತರು ಬೆಂಬಲಿಗರ ನಿವಾಸಗಳಲ್ಲಿ ನಡೆದ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಹಣ, ಆಸ್ತಿ ಪತ್ತೆಯಾಗಿಲ್ಲ. ಬಿಜೆಪಿಯು ರಾಜಕೀಯ ದುರುದ್ದೇಶದಿಂದ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡಿತ್ತು ಎಂಬುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

ದಾಳಿಯಲ್ಲಿ ಪ್ರಮುಖವಾಗಿ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಒಡೆತನದ ಹೆರಿಟೇಜ್‌ ವಸತಿ ಗೃಹದ ಮೇಲೆ ನಡೆಸಿದ ದಾಳಿಯಲ್ಲಿ ದೊರೆತ 13.80 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದು ಯಾವುದೇ ದಾಖಲೆಗಳಿಲ್ಲ. ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗೋಪಾಲ ಕುಲಕರ್ಣಿ ನಿವಾಸದಲ್ಲಿ 8630 ರೂ. ನಗದು ಹಾಗೂ 2.06 ಲಕ್ಷ ರೂ ಮೌಲ್ಯದ ಚಿನ್ನಾಭರಣ ಜಪ್ತಿಯಾಗಿತ್ತು.ಜತೆಗೆ, ಹುಬ್ಬಳ್ಳಿಯ ಖಾಸಗಿ ವ್ಯಕ್ತಿಯೊಬ್ಬರ ನಿವಾಸದಲ್ಲಿ 25 ಲಕ್ಷ ರೂ. ಹಣ ಹಾಗೂ 25 ಲಕ್ಷ ರೂ. ಆಸ್ತಿ ಬಗ್ಗೆ ಪರಿಶೀಲನೆ ನಡೆದಿದೆ. ಮಾಜಿ ಶಾಸಕ ಚೆಲುವರಾಯಸ್ವಾಮಿ ಮೂವರು ಆಪ್ತರ ನಿವಾಸಗಳಲ್ಲಿ ನಡೆದ ದಾಳಿಯಲ್ಲಿ 30 ಸಾವಿರ ರೂ. ದೊರೆತಿದ್ದು ಸೂಕ್ತ ದಾಖಲೆಗಳಿದ್ದ ಹಿನ್ನೆಲೆಯಲ್ಲಿ ವಾಪಾಸ್‌ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಟಾರ್ಗೆಟ್

‘ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ಐಟಿ ದಾಳಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಆಪ್ತರ ನಿವಾಸಗಳಲ್ಲಿ ಹಣ ಅಥವಾ ಆಸ್ತಿ ದೊರೆತಿಲ್ಲ. ಇದೇ ಕಾರಣಕ್ಕೆ ಐಟಿ ದಾಳಿಯನ್ನು ಕಾಂಗ್ರೆಸ್‌-ಜೆಡಿಎಸ್‌ ಮುಖಂಡರು ವಿರೋಧಿಸಿದ್ದೆವು. 2014ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಆಗ, ಐಟಿ ದಾಳಿ ನಡೆದಿರಲಿಲ್ಲ. 2018ಯ ವಿಧಾನಸಭೆ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗಿತ್ತು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.