ಆರು ತಿಂಗಳಲ್ಲಿ ಲೋಕಾಯುಕ್ತಕ್ಕೆ 2952 ದೂರು
Team Udayavani, Oct 4, 2017, 11:44 AM IST
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಲಂಚಗುಳಿತನ, ಅಧಿಕಾರ ದುರ್ಬಳಕೆ ಸೇರಿದಂತೆ ಮತ್ತಿತರ ಆರೋಪಗಳ ಸಂಬಂಧದ ದೂರುಗಳು ಲೋಕಾಯುಕ್ತಕ್ಕೆ ಹರಿದು ಬರುತ್ತಿದ್ದು, ಕಳೆದ ಫೆಬ್ರವರಿಯಿಂದ ಸೆಪ್ಟೆಂಬರ್ 21ರ ನಡುವೆ ಬರೋಬ್ಬರಿ 2952 ದೂರುಗಳು ದಾಖಲಾಗಿವೆ.
ಈ ಮುಂಚೆ ಲೋಕಾಯುಕ್ತದಲ್ಲಿ 7174 ದೂರುಗಳು ಬಾಕಿಯಿದ್ದು, ಈ ವರ್ಷ ಸಾರ್ವಜನಿಕರು ಹಾಗೂ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವುದೂ ಸೇರಿದಂತೆ ದೂರುಗಳು 2952ಕ್ಕೂ ಹೆಚ್ಚಿವೆ. ಈ ಪೈಕಿ 3832 ದೂರುಗಳನ್ನು ಇತ್ಯರ್ಥಪಡಿಸಿದ್ದು, ಇನ್ನೂ 6294 ದೂರುಗಳ ವಿಚಾರಣೆ ಬಾಕಿ ಉಳಿದುಕೊಂಡಿದೆ.
ಅದೇ ರೀತಿ ವಿಚಾರಣಾ ಹಂತದಲ್ಲಿದ್ದ 2695 ಪ್ರಕರಣಗಳಿಗೆ ಈ ಬಾರಿ 860 ಕೇಸ್ಗಳು ಸೇರ್ಪಡೆಗೊಂಡಿವೆ. ಈ ಪ್ರಕರಣಗಳಲ್ಲಿ 370 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು 3185 ಕೇಸ್ಗಳ ವಿಚಾರಣೆ ಪ್ರಗತಿಯಲ್ಲಿವೆ.ಲೋಕಾಯುಕ್ತದಲ್ಲಿ ಬಾಕಿ ಉಳಿದುಕೊಂಡಿರುವ ಕೇಸ್ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದರೂ ವಿಚಾರಣಾಧಿಕಾರಿಗಳ ಕೊರತೆಯಿದೆ.
ಹೀಗಾಗಿ ಜಿಲ್ಲಾನ್ಯಾಯಾಧೀಶರ ಹುದ್ದೆಯ 9 ಮಂದಿಯನ್ನು ವಿಚಾರಣಾಧಿಕಾರಿಗಳು ಹಾಗೂ 3 ಮಂದಿ ರೀಸರ್ಚ್ ಅಸಿಸ್ಟೆಂಟ್ಗಳು, ಅವರಿಗೆ ನೆರವಾಗಲು ಅಗತ್ಯವಾದ ಸಿಬ್ಬಂದಿ ಸೇರಿ ಒಟ್ಟು 36 ಮಂದಿಯನ್ನು ನೇಮಕಗೊಳಿಸುವಂತೆ ಸರ್ಕಾರಕ್ಕೆ ಪತ್ರಬರೆಯಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಲೋಕಾಯುಕ್ತ ಪಿ.ವಿಶ್ವನಾಥಶೆಟ್ಟಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.