ದಟ್ಟಣೆ ಪರಿಹಾರಕ್ಕೆ 4 ಸುರಂಗ ಮಾರ್ಗ
Team Udayavani, May 13, 2017, 11:23 AM IST
ಬೆಂಗಳೂರು: ನಗರದಲ್ಲಿನ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಗರದ ನಾಲ್ಕು ಕಡೆ ಸುರಂಗ ರಸ್ತೆ ಮಾರ್ಗ ನಿರ್ಮಿಸುವ ಕುರಿತಂತೆ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಹೆಬ್ಟಾಳ, ಯಶವಂತಪುರ, ಕೆ.ಆರ್.ಪುರ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ಗಳಲ್ಲಿ ಸುರಂಗ ನಿರ್ಮಿಸುವ ಚಿಂತನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡಿಎ ಯೋಜನೆಗಳ ಕುರಿತಂತೆ ನಡೆದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದಲ್ಲಿನ ಸಂಚಾರ ದಟ್ಟಣೆ ನಿವಾರಣೆಗೆ ಸರ್ಕಾರ ಕೈಗೆತ್ತಿಕೊಂಡಿರುವ ಹಲವು ಯೋಜನೆಗಳ ಪೈಕಿ ಸುರಂಗ ಮಾರ್ಗ ನಿರ್ಮಾಣವೂ ಒಂದು. ಬಲ್ಗೇರಿಯಾ ಮೂಲದ ಕಂಪೆನಿಯೊಂದು ಯೋಜನೆಗೆ ಪ್ರಾಥಮಿಕ ವರದಿ ಸಲ್ಲಿಕೆ ಮಾಡಿದ್ದು, ಸಾಧ್ಯಾಸಾಧ್ಯಾತೆ ವರದಿ ನೀಡುವಂತೆ ಸಂಸ್ಥೆಗೆ ತಿಳಿಸಲಾಗಿದೆ,’ ಎಂದು ತಿಳಿಸಿದರು.
ನಗರದಿಂದ ವೈಟ್ಫೀಲ್ಡ್ ಭಾಗಕ್ಕೆ “ಪರ್ಸನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ (ಪಿಆರ್ಟಿಎಸ್)’ ಸೇವೆ ನೀಡುವ ಯೋಜನೆಯನ್ನು ಹಲವರು ವಿಮರ್ಶೆ ಮಾಡುತ್ತಿದ್ದಾರೆ. ಆದರೆ ವೈಟ್ಫೀಲ್ಡ್ ಭಾಗಕ್ಕೆ ಪ್ರಾಯೋಗಿಕವಾಗಿ ಸೇವೆಯನ್ನು ಆರಂಭಿಸಲಾಗುವುದು. ಯಶಸ್ವಿಯಾದರೆ ಮಾತ್ರ ಉಳಿದ ಭಾಗಗಳಿಗೆ ಸೇವೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ನಗರದ ಕೇಂದ್ರ ಭಾಗದಿಂದ ಹೊರವಲಯದ ಹೆದ್ದಾರಿಗಳನ್ನು ಸಂಪರ್ಕಿಸುವ ಎಲಿವೇಟೆಡ್ ಕಾರಿಡಾರ್ ನಿರ್ಮಾಣದ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದ್ದು, ವಿದೇಶಗಳಿಂದ ಆರ್ಥಿಕ ನೆರವು ಕೋರಲಾಗಿದೆ. ವಿದೇಶಿ ಸಂಸ್ಥೆಗಳಿಂದ ಹಣಕಾಸು ನೆರವಿನ ಭರವಸೆ ದೊರೆತರೆ ಯೋಜನೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು.
ನಗರದ ನಡುವೆ ಟೋಲ್?
ಸುರಂಗ ಮಾರ್ಗ ನಿರ್ಮಾಣವಾದರೆ ಟೋಲ್ ಸಂಗ್ರಹಿಸುವ ಪ್ರಸ್ತಾವವೂ ಇದೆ. ಚತುಷ್ಪಥದ ಜತೆಗೆ ಎರಡೂ ಕಡೆ ಸರ್ವಿಸಸ್ ರಸ್ತೆ ನಿರ್ಮಾಣವಾಗಲಿದೆ. ಪ್ರತಿ ಕಿ.ಮೀ.ಗೆ 500 ಕೋಟಿ ರೂ. ವೆಚ್ಚವಾಗುವ ಅಂದಾಜು ಇದೆ. ಒಟ್ಟಾರೆ 3,500 ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಇಷ್ಟು ಬೃಹತ್ ಮೊತ್ತದ ಬಂಡವಾಳ ಅಗತ್ಯವಿರುವುದರಿಂದ ಟೋಲ್ ಸಂಗ್ರಹ ಅನಿವಾರ್ಯ. ಈ ಬಗ್ಗೆಯೂ ಚರ್ಚೆ ನಡೆದಿದೆ. ಸಂಸ್ಥೆ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.