Bengaluru: ಬರ್ತ್ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ
Team Udayavani, Oct 3, 2024, 11:05 AM IST
ಬೆಂಗಳೂರು: ಸ್ನೇಹಿತನ ಜನ್ಮದಿನ ಸಮಾರಂಭದಲ್ಲಿ ಸುತ್ತಲೂ ಜನರಿದ್ದರೂ ಪಿಸ್ತೂಲ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿ (ಏರ್ಫೈಯರ್) ಪುಂಡಾಟ ಮೆರೆದ ಆರೋಪಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸೈಯ್ಯದ್ ಅಲ್ತಾಫ್ ಅಹಮದ್ (59) ಬಂಧಿತ ಆರೋಪಿ.
ಈತನಿಂದ ಪಿಸ್ತೂಲ್ ಹಾಗೂ 6 ಜೀವಂತಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಸೆ.22ರಂದು ಬನ್ನೇರುಘಟ್ಟ ರಸ್ತೆಯ ಗುಜುರಿ ಗೋದಾಮಿನಲ್ಲಿ ಮೊಯೀನ್ ಖಾನ್ ಎಂಬಾತನ ಜನ್ಮದಿನ ಸಂಭ್ರಮಾಚರಣೆ ನಡೆದಿತ್ತು. ಆ ಸಂದರ್ಭದಲ್ಲಿ ಆತನ ಸ್ನೇಹಿತನಾಗಿದ್ದ ಆರೋಪಿ ಸೈಯ್ಯದ್ ಅಲ್ತಾಫ್ ಅಹಮದ ಸಹ ಅಲ್ಲಿಗೆ ಬಂದಿದ್ದ. ಸುತ್ತಲೂ ಸಾಕಷ್ಟು ಜನರಿದ್ದರೂ ಏಕಾಏಕಿ ತನ್ನ ಬಳಿಯಿದ್ದ ಪರವಾನಗಿ ಹೊಂದಿರುವ ಪಿಸ್ತೂಲ್ ತೆಗೆದು ಮೇಲಕ್ಕೆ 6 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ.
ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸ್ ಸಾಮಾಜಿಕ ಜಾಲತಾಣ ವಿಭಾಗ ಕೂಡಲೇ ಸಿಸಿಬಿ ಪೊಲೀಸರಿಗೆ ಮಾಹಿತಿ ರವಾನಿಸಿತ್ತು. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದೆ.
ಆರೋಪಿಯ ಗನ್ ಪರವಾನಗಿ ರದ್ದತಿಗೆ ಪೊಲೀಸರು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಜಾಸ್ತಿ ಬಾಡಿಗೆ ಕೊಡಲ್ಲಎಂದಿದ್ದಕ್ಕೆ ಯುವತಿಗೆ ಆಟೋ ಡ್ರೈವರ್ ನಿಂದನೆ
ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್ ಕೇಸ್: ಮೂವರು ಸಿಸಿಬಿ ವಶಕ್ಕೆ
Bengaluru: ಮ್ಯಾನೇಜರ್ಗೆ ಇರಿಯಲು ಬಂದು ಕಂಡಕ್ಟರ್ಗೆ ಇರಿದ
Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ
Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!
ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.