Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್!
Team Udayavani, Oct 7, 2024, 12:09 PM IST
ಬೆಂಗಳೂರು: ಭಾರತೀಯ ಅಂಚೆ ಕಚೇರಿಗೆ ವಿದೇಶಗಳಿಂದ ಮಾದಕ ವಸ್ತುಗಳು ತುಂಬಿರುವ ಪಾರ್ಸೆಲ್ಗಳು ಬರುತ್ತಿವೆ ಎಂಬ ಮಾಹಿತಿ ಮೇರೆಗೆ ನಗರದ ಎಲ್ಲಾ ಅಂಚೆ ಕಚೇರಿಗಳಲ್ಲಿ ತಪಾಸಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರಿಗೆ, ಚಾಮರಾಜಪೇಟೆಯ ವಿದೇಶಿ ಪೋಸ್ಟ್ ಕಚೇರಿಯಲ್ಲಿ 626 ಮಾದಕ ವಸ್ತುಗಳ ಪಾರ್ಸೆಲ್ಗಳು ಪತ್ತೆಯಾಗಿವೆ.
ಅಪರಿಚಿತ ವ್ಯಕ್ತಿಗಳ ವಿಳಾಸಕ್ಕೆ ವಿದೇಶಗಳಿಂದ ಮಾದಕ ವಸ್ತುಗಳು ಬರುತ್ತಿದ್ದು, ಅದೇ ರೀತಿ ಅ.1 ರಂದು ಸಿಸಿಬಿ ಅಧಿಕಾರಿಗಳಿಗೆ ಚಾಮರಾಜಪೇಟೆಯ ವಿದೇಶಿ ಪೋಸ್ಟ್ ಆಫೀಸ್ನಿಂದ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶ್ವಾನ ದಳ ಸಮೇತ ಸಿಸಿಬಿಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಶ್ವಾನಗಳು ಕೆಲ ಪಾರ್ಸೆಲ್ ಗಳ ಮೇಲೆ ಅನುಮಾನಾಸ್ವದವಾಗಿ ವರ್ತಿಸಿವೆ.
ಕೂಡಲೇ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಮಾದಕ ವಸ್ತು ಇರುವುದು ಪತ್ತೆಯಾಗಿದೆ. ಪ್ರಮುಖವಾಗಿ ಎಂಡಿಎಂ, ಕೊಕೇನ್ ಹಾಗೂ ಬ್ರೌನ್ಶುಗರ್ ಇರುವುದು ಪತ್ತೆಯಾಗಿದೆ. ಆರೋಪಿಗಳು ಕೊರಿಯರ್ ಮೂಲಕ ವಿದೇಶಗಳಿಂದ ಮಾದಕವಸ್ತು ಕಳುಹಿಸುತ್ತಿದ್ದಾರೆ. 2018ರಿಂದಲೂ ಇದೇ ರೀತಿಯಾಗಿ ಕೃತ್ಯ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. 626 ಕೊರಿಯರ್ಗಳಲ್ಲಿ ಮಾದಕ ವಸ್ತುಗಳು ಕಂಡು ಬಂದಿವೆ. ಅಷ್ಟು ಪಾರ್ಸೆಲ್ಗಳು ಯಾರಿಗೆ ಬಂದಿದೆ ಎಂಬುವುದು ಪತ್ತೆಯಾಗಿಲ್ಲ. ಅಪರಿಚಿತ ವ್ಯಕ್ತಿಗಳ ಹೆಸರಲ್ಲಿ ಆರೋಪಿಗಳು ಪಾರ್ಸೆಲ್ ಕಳುಹಿಸಿದ್ದಾರೆ. ಸದ್ಯ ಸಿಸಿಬಿ ಅಧಿಕಾರಿಗಳು ಎಲ್ಲವನ್ನೂ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ
BBMP: ಇನ್ಮುಂದೆ ಸಿಗರೇಟ್ ತುಂಡುಗಳ ಪ್ರತ್ಯೇಕ ಸಂಗ್ರಹ
Fraud: ಪಾರ್ಟ್ಟೈಮ್ ಜಾಬ್ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು
Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.