ಕೃಷಿ ಮೇಳಕ್ಕೆ 7.16 ಲಕ್ಷ ಜನರ ಭೇಟಿ


Team Udayavani, Nov 6, 2022, 1:54 PM IST

ಕೃಷಿ ಮೇಳಕ್ಕೆ 7.16 ಲಕ್ಷ ಜನರ ಭೇಟಿ

ಬೆಂಗಳೂರು: ಕೃಷಿ ಮೇಳಕ್ಕೆ ಶನಿವಾರ 7.16 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿದ್ದು, ಮೇಳದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಜನರು ಭೇಟಿ ನೀಡಿದ್ದು ಇದೇ ಮೊದಲ ಬಾರಿಯಾಗಿದೆ.

ಕೊರೊನಾ ಕಾರಣದಿಂದಾಗಿ ಕಳೆದ ಕೆಲ ವರ್ಷಗಳಿಂದ ಕಳೆಗುಂದಿದ್ದ ಕೃಷಿ ಮೇಳ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಿದೆ. ನಾಲ್ಕು ದಿನಗಳ ಕೃಷಿ ಮೇಳದ ಮೂರನೇ ದಿನವಾದ ಶನಿವಾರ 7.16 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿ ದಾಖಲೆ ನಿರ್ಮಾಣವಾಗಿದೆ. ಅದರ ಜತೆಗೆ 2.85 ಕೋಟಿ ರೂ. ವಹಿವಾಟು ನಡೆದಿದೆ. 684 ರೈತರು ಸಲಹಾ ಕೇಂದ್ರದಲ್ಲಿ ಕೃಷಿ ಚಟುವಟಿಕೆ ಸೇರಿ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆ ದರು. ಈ ಬಾರಿಯ ಕೃಷಿ ಮೇಳದಲ್ಲಿ ನವೋದ್ಯಮ (ಸ್ಟಾರ್ಟ್‌ಅಪ್‌)ಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಕೃಷಿ ಚಟುವಟಿಕೆಗೆ ಅನುಕೂಲವಾಗುವಂತಹ ಹಲವು ಉದ್ಯಮಗಳು ತಮ್ಮ ತಂತ್ರಜ್ಞಾನ ಮತ್ತು ಉತ್ಪನ್ನಗಳ ಪ್ರದರ್ಶನ ಮಾಡಿದವು. ಜಾಗ ಉಳಿಸುವ ಬಸಿಗಾಲುವೆ: ಕೃಷಿ ಮೇಳದಲ್ಲಿ ಈ ಬಾರಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತಹ ಹಾಗೂ ಕೃಷಿ ಭೂಮಿ ಯಲ್ಲಿನ ಸಮಸ್ಯೆಯನ್ನು ನಿವಾರಿಸುವಂತಹ ಕ್ರಮಗಳು ಪ್ರದರ್ಶನಗೊಳ್ಳುತ್ತಿದೆ.

ಅದರಲ್ಲೊಂದೆನ್ನುವಂತೆ ನೀರು ಹೆಚ್ಚಾಗಿ ಜೌಗು, ಲವಣ ಪೀಡಿತ ಮತ್ತು ಹುಳಿಮಣ್ಣಿನ ಕೃಷಿ ಭೂಮಿಯಲ್ಲಿ ಯಾವುದೇ ಜಾಗವನ್ನು ನಷ್ಟ ಮಾಡದೆ ಬಸಿಗಾಲುವೆ ನಿರ್ಮಿಸಿ ನೀರನ್ನು ಹೊರಹಾಕುವ ವಿಧಾನವನ್ನು ಪ್ರದರ್ಶಿಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯದ ಮಣ್ಣು ಪರೀಕ್ಷೆ ಮತ್ತು ಬೆಳೆ ಸ್ಪಂದನೆ ಪ್ರಾಯೋಜನೆ ಹಾಗೂ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನ ಶಾಸ್ತ್ರ ವಿಭಾಗದಿಂದ ಅಭಿವೃದ್ಧಿಪಡಿಸಲಾಗಿರುವ ಸಮಸ್ಯಾತ್ಮಕ ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಫ‌ಲವತ್ತತೆ ಹೆಚಿಸಲು ಪ್ಲಾಸ್ಟಿಕ್‌ ಪೈಪ್‌ನ ಬಸಿಗಾಲುವೆ ನಿರ್ಮಾಣದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ.

ಇದರಲ್ಲಿ ಕೃಷಿ ಭೂಮಿ ಯಲ್ಲಿ ಪ್ರತ್ಯೇಕವಾಗಿ ಕಾಲುವೆ ನಿರ್ಮಿಸಿ ನೀರನ್ನು ಕೆರೆ ಅಥವಾ ಬೇರೆಡೆಗೆ ಹರಿಯುವಂತೆ ಮಾಡುವ ಬದಲು ಪ್ಲಾಸ್ಟಿಕ್‌ ಪೈಪ್‌ಗಳಿಗೆ ಸಣ್ಣ ತೂತನ್ನು ಮಾಡಿ ಕೃಷಿ ಭೂಮಿಯಲ್ಲಿ 4ರಿಂದ 6 ಅಡಿ ಕೆಳಭಾಗದಲ್ಲಿ ಅದನ್ನು ಅಳವಡಿಸಬೇಕಿದೆ. 30 ಮೀ. ಅಂತರದಲ್ಲಿ ಈ ರೀತಿ ಪೈಪ್‌ ಅಳವಡಿಸುವುದರಿಂದ ಭೂಮಿಯಲ್ಲಿನ ನೀರಿನ ಪ್ರಮಾಣವನ್ನು ಪೈಪ್‌ನಲ್ಲಿ ಸೆಳೆದು ಹೊರಹಾಕಲು ಅನುಕೂಲವಾಗಲಿದೆ. ಇದರಿಂದ ಬಸಿ ಕಾಲುವೆ ನಿರ್ಮಾಣದ ಜತೆಗೆ, ಅದಕ್ಕಾಗಿ ಪ್ರತ್ಯೇಕ ಭೂಮಿಯನ್ನು ಬಳಸಿಕೊಳ್ಳುವುದು ತಪ್ಪಲಿದೆ.

ಕಚ್ಚದ ಜೇನು ಹುಳ, ಕಡಿಮೆ ವೆಚ್ಚದಲ್ಲಿ ಸಾಕಾಣಿಕೆ: ಸಾಮಾನ್ಯವಾಗಿ ಜೇನು ನೊಣಗಳು ಕಚ್ಚುತ್ತವೆ. ಆದರೆ, ಕೃಷಿ ಮೇಳದಲ್ಲಿ ಪುದ್ಯೋದು ಹನಿ ಬೀ ಫಾರ್ಮ್ ಸಂಸ್ಥೆ ಕಚ್ಚದ ಜೇನು ನೊಣವನ್ನು ಪರಿಚಯಿಸುತ್ತಿದೆ.  ರಾಳ ಜೇನು, ನುಸಿ ಜೇನು ಎಂದು ಕರೆಯಲ್ಪಡುವ ಕಿರು ಜೇನು ಸಾಕಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಈ ಜೇನು ನೊಣವು ಬೇರೆಲ್ಲ ಜೇನಿನಂತೆಯೇ ಪರಾಗಸ್ಪಷ್ಟ ಮಾಡಿ ಜೇನು ಉತ್ಪಾದನೆ ಮಾಡುತ್ತವೆ. ಆದರೆ ತುಡುವೆ ಜೇನಿನಂತೆ ದುಬಾರಿ ಪೆಟ್ಟಿಗೆ, ಜೇನು ತೆಗೆಯುವ ಯಂತ್ರದ ಅವಶ್ಯಕತೆ ಇದಕ್ಕಿಲ್ಲ. ಅಲ್ಲದೆ ಜೇನು ತುಪ್ಪ ಉತ್ಪಾದನೆಯಾಗಿದೆಯೇ ಇಲ್ಲವೇ ಎಂಬುದನ್ನು ಪದೇ ಪದೆ ನೋಡುವ ಅವಶ್ಯಕತೆಯಿಲ್ಲ. ಬದಲಿಗೆ ಜೇನು ಪೆಟ್ಟಿಗೆಯನ್ನು ಎತ್ತಿದರೆ ಅದು ಭಾರವೆನಿಸಿದರೆ ಜೇನುತುಪ್ಪ ಉತ್ಪಾದನೆಯಾಗಿದೆ ಎಂಬುದು ತಿಳಿಯುತ್ತದೆ.

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.