ಹಳಿ ಏರಿದ 8 ಉಪನಗರ ರೈಲು


Team Udayavani, Mar 13, 2018, 12:00 PM IST

hali-arida.jpg

ಬೆಂಗಳೂರು: ನಾಲ್ಕು ದಿನಗಳ ಹಿಂದಷ್ಟೇ ರೈಲ್ವೆ ಸಚಿವರು ಘೋಷಿಸಿದ್ದ ಎಂಟು ಹೊಸ ಉಪನಗರ ರೈಲುಗಳ ಸೇವೆ ಸೋಮವಾರದಿಂದ ಆರಂಭಗೊಂಡಿದೆ. ವಾರದಲ್ಲಿ ಆರು ದಿನ (ಭಾನುವಾರ ಹೊರತುಪಡಿಸಿ) ಸಂಚರಿಸಲಿರುವ ಈ ಹೊಸ ರೈಲುಗಳ ಪೈಕಿ ತಲಾ ನಾಲ್ಕು ಮೆಮು ಮತ್ತು ಡೆಮು ಸೇವೆಗಳಾಗಿವೆ. ಈ ಸಂಬಂಧದ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ.

ನಿತ್ಯ ಪ್ರತಿ ರೈಲಿನಲ್ಲಿ 2 ಸಾವಿರ ಪ್ರಯಾಣಿಕರಂತೆ ಅಂದಾಜು 16 ಸಾವಿರ ಮಂದಿ ಸಂಚರಿಸಬಹುದು ಎಂದು ನಿರೀಕ್ಷಿಸಲಾಗಿದೆ. ಮೊದಲ ದಿನವೇ 12 ಸಾವಿರ ಮಂದಿ ಪ್ರಯಾಣಿಸಿದ್ದಾರೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣ-ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ಮಾರ್ಗದಲ್ಲಿ ಮೆಮು ಮತ್ತು ಬಾಣಸವಾಡಿ-ಬೈಯಪ್ಪನಹಳ್ಳಿ-ಹೊಸೂರು ಮಾರ್ಗವಾಗಿ ಡೆಮು ರೈಲುಗಳು ಸಂಚರಿಸುತ್ತಿವೆ. ಪ್ರತಿ ರೈಲು ಆರು ಬೋಗಿಗಳನ್ನು ಒಳಗೊಂಡಿದ್ದು, 600 ಆಸನಗಳು ಮತ್ತು 1,800 ನಿಲುಗಡೆ (ಸ್ಟಾಂಡಿಂಗ್‌) ಸೇರಿದಂತೆ 2,400 ಜನರನ್ನು ಕೊಂಡೊಯ್ಯುವ ಸಾಮರ್ಥ್ಯ ಹೊಂದಿವೆ.

ಸೋಮವಾರ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ನಡುವೆ ಅತಿ ಕಡಿಮೆ 1,200 ಹಾಗೂ ಸಿಟಿ ರೈಲು ನಿಲ್ದಾಣ-ಬೈಯಪ್ಪನಹಳ್ಳಿ ನಡುವೆ ಅತಿ ಹೆಚ್ಚು 2 ಸಾವಿರಕ್ಕೂ ಅಧಿಕ ಜನ ಪ್ರಯಾಣಿಸಿದ್ದಾರೆ ಎಂದೂ ಅವರು ಹೇಳಿದರು. 

ಬೈಯಪ್ಪನಹಳ್ಳಿಯಲ್ಲಿ ರೈಲು ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣಗಳು ಅಕ್ಕಪಕ್ಕದಲ್ಲಿವೆ. ಮೆಟ್ರೊ ಹಾಗೂ ಸಬ್‌ಅರ್ಬನ್‌ ರೈಲುಗಳನ್ನು ಬಳಸಿಕೊಂಡು ಪ್ರಯಾಣವನ್ನು ಯೋಜಿಸಲು ಈ ಹೊಸ ಸೇವೆಯಿಂದ ಅನುಕೂಲವಾಗಲಿದೆ. ಪ್ರಸ್ತುತ 108 ಉಪನಗರ ರೈಲುಗಳು ಸೇವೆಯಲ್ಲಿದ್ದು, ಹೊಸ ಎಂಟು ರೈಲುಗಳ ಸೇರ್ಪಡೆಯಿಂದ ಈ ಸಂಖ್ಯೆ 116ಕ್ಕೆ ಏರಿದೆ.

ರೈಲುಗಳ ವೇಳಾಪಟ್ಟಿ
ಮೆಮು ರೈಲುಗಳು
ಎಲ್ಲಿಂದ    ಎಲ್ಲಿಗೆ    ನಿರ್ಗಮನ    ಆಗಮನ 
ಬೈಯಪ್ಪನಹಳ್ಳಿ    ವೈಟ್‌ಫೀಲ್ಡ್‌ (06568) ಸಂಜೆ 4.45    ಸಂಜೆ 17.05
ವೈಟ್‌ಫೀಲ್ಡ್‌    ಬೈಯಪ್ಪನಹಳ್ಳಿ (06567)    09.00    09.20
ಬೈಯಪ್ಪನಹಳ್ಳಿ    ಕೆಎಸ್‌ಆರ್‌ (06569)    6.45    7.15
ಕೆಎಸ್‌ಆರ್‌    ಬೈಯಪ್ಪನಹಳ್ಳಿ (06570) 07.50    08.15

ಡೆಮು ರೈಲುಗಳು
ಎಲ್ಲಿಂದ    ಎಲ್ಲಿಗೆ    ನಿರ್ಗಮನ    ಆಗಮನ 
ಬಾಣಸವಾಡಿ    ಹೊಸೂರು (06571)    09.50    11.00
ಹೊಸೂರು    ಬಾಣಸವಾಡಿ (06572)    11.15    12.25
ಬಾಣಸವಾಡಿ    ಹೊಸೂರು (06573)    12.40    1.45
ಹೊಸೂರು    ಬಾಣಸವಾಡಿ (06574)    3.20    4.40

2006ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಮೆಮು ರೈಲುಗಳ ಸಂಚಾರ ಆರಂಭಿಸಿತ್ತು. ರಾಜ್ಯ ಸರ್ಕಾರ ಹಾಗೂ ರೈಲ್ವೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಉಪನಗರ ರೈಲು ಯೊಜನೆ ಜಾರಿಯಾಗುತ್ತಿದೆ.

ಟಾಪ್ ನ್ಯೂಸ್

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

2

Actress Oviya Helen: ನನ್ನ ಖಾಸಗಿ ವಿಡಿಯೋ ಲೀಕ್‌ ಮಾಡಿದ್ದು ಅವನೇ.. ನಟಿ ಓವಿಯಾ

Prajwal Revanna Case: High Court dismisses PIL against Rahul Gandhi

Prajwal Revanna Case: ರಾಹುಲ್‌‌ ಗಾಂಧಿ ವಿರುದ್ದದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.