Bengaluru: 7 ತಿಂಗಳಲ್ಲಿ 8362 ಫ್ಲೆಕ್ಸ್ ತೆರವು
Team Udayavani, Jul 23, 2024, 11:12 AM IST
ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವು ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ ಈ ವರ್ಷದಲ್ಲಿ(7 ತಿಂಗಳ ಅವಧಿಯಲ್ಲಿ) 8362ಕ್ಕೂ ಅಧಿಕ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಿದೆ. ಜತೆಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 267 ದೂರುಗಳನ್ನು ದಾಖಲಿಸಿದೆ. ಜೂನ್ ತಿಂಗಳ ಆರಂಭದಿಂದ ಈವರೆಗೂ 1.03 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಜಾಹೀರಾತು ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅನಧಿಕೃತವಾಗಿ ಜಾಹೀರಾತುಗಳನ್ನು ಅಳವಡಿಸುವುದರಿಂದ ನಾಗರಿಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದರಿಂದ ಪ್ರಾಣಿಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಈ ಸಂಬಂಧ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರಮುಖ ರಸ್ತೆಗಳ ಬದಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳ ಫ್ಲೆಕ್ಸ್ಗಳನ್ನು ಹೆಚ್ಚು ಅಳವಡಿಸಲಾಗುತ್ತಿದೆ. ಯಾವುದೇ ಶುಭಾಶಯಗಳ ಕುರಿತ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸದಂತೆ ಪಾಲಿಕೆಯು ನಾಗರಿಕರಲ್ಲಿ ಮನವಿ ಮಾಡಿದೆ. ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಜಂಕ್ಷನ್ಗಳು, ಮೇಲುಸೇತುವೆಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅನಧಿಕೃತ ಜಾಹೀರಾತುಗಳ ತೆರವು ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಸಹ ಪಾಲಿಕೆಯ ಜೊತೆ ಕೈ ಜೋಡಿಸಿದ್ದು ಸಹಕಾರ ನೀಡುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸ್ಆ್ಯಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವಿಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.