Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!


Team Udayavani, Oct 16, 2024, 11:02 AM IST

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

ಬೆಂಗಳೂರು: ಉದ್ಯಮಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿದ್ದ ಖಾಸಗಿ ಬ್ಯಾಂಕ್‌ನ ಮ್ಯಾನೇಜರ್‌ ಮತ್ತು ಖಾತೆದಾರರು ಸೇರಿ 8 ಮಂದಿಯನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ನಾಗರಬಾವಿಯ ಆಕ್ಸಿಸ್‌ ಬ್ಯಾಂಕ್‌ನ ಮ್ಯಾನೇಜರ್‌ ಕಿಶೋರ್‌ ಸಾಹು (32), ಸೇಲ್ಸ್‌ ಮ್ಯಾನೇಜರ್‌ ಮನೋಹರ್‌(32), ಸೇಲ್ಸ್‌ ಎಕ್ಸಿಕ್ಯೂಟಿವ್‌ಗಳಾದ ಕಾರ್ತಿಕ್‌(30) ಮತ್ತು ರಾಕೇಶ್‌ (30) ಮತ್ತು ಚಿಕ್ಕಮಗಳೂರು ಮೂಲದ ಲಕ್ಷ್ಮೀಕಾಂತ್‌ (40), ರಾಘುರಾಜು (32), ಕೆಂಗೆಗೌಡ (33) ಹಾಗೂ ಮಾಲಾ(32) ಬಂಧಿತರು. ಆರೋಪಿಗಳಿಂದ 28 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಪ್ರಕರಣ ಮಾಸ್ಟರ್‌ ಮೈಂಡ್‌ ಸೇರಿ 9 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿಗಳ ಪೈಕಿ ಮನೋಹರ್‌ ಚಿಕ್ಕಮಗಳೂರು ಮೂಲದವನಾಗಿದ್ದು, ಈತನ ಬಾಲ್ಯ ಸ್ನೇಹಿತ ದುಬೈನಲ್ಲಿ ವಾಸವಾಗಿದ್ದಾನೆ. ಆತನ ಸೂಚನೆ ಮೇರೆಗೆ ಮನೋಹರ್‌, ತನ್ನ ಊರಿನ ಮಾಲಾ ಸೇರಿ ನಾಲ್ವರಿಂದ ಆಧಾರ್‌ ಕಾರ್ಡ್‌ ಹಾಗೂ ಇತರೆ ಗುರುತಿನ ಚೀಟಿ ಪಡೆದುಕೊಂಡು, ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲಿ ಖಾತೆಗಳ ತೆರೆದಿದ್ದ. ಬೆಂಗಳೂರು ಸೇರಿ ದೇಶಾದ್ಯಂತ ಸೈಬರ್‌ ವಂಚನೆ ಮಾಡುತ್ತಿದ್ದ ಹಣವನ್ನು ಈ ಖಾತೆಗಳಿಗೆ ಹಾಕಿಸಿಕೊಳ್ಳುತ್ತಿದ್ದರು. ಖಾತೆದಾರರಿಗೆ ಇಂತಿಷ್ಟು ಕಮಿಷನ್‌ ನೀಡುತ್ತಿದ್ದರು. ಇನ್ನು ಒಂದು ವಹಿವಾಟಿಗೆ ಮ್ಯಾನೇಜರ್‌, ಸೇಲ್ಸ್‌ ಎಕ್ಸಿಕ್ಯೂಟಿವ್‌ಗಳಿಗೆ ಇಂತಿಷ್ಟು  ಕಮಿಷನ್‌ ನೀಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ ಎಂದು ಆಯುಕ್ತರು ತಿಳಿಸಿದರು.

ಬ್ಯಾಂಕ್‌ ಅಧಿಕಾರಿಗಳೇ ಭಾಗಿ: ಯಲಹಂಕ ನಿವಾಸಿಯಾಗಿರುವ ದೂರುದಾರರಿಗೆ ವಿಐಪಿ ಷೇರು ಟ್ರೇಡಿಂಗ್‌ನಲ್ಲಿ ಹಣ ಹೂಡಿದರೆ ದ್ವಿಗುಣ ಮಾಡುವುದಾಗಿ ವಿದೇಶದಲ್ಲಿರುವ ಕೆಲವರು ವಾಟ್ಸ್‌ ಆ್ಯಪ್‌ ಸಂದೇಶ ಕಳುಹಿಸಿದ್ದಾರೆ. ಅದನ್ನು ನಂಬಿದ ದೂರುದಾರ ಮೊದಲಿಗೆ 50 ಸಾವಿರ ರೂ. ಹೂಡಿದ್ದು, ಹಣ ದ್ವಿಗುಣವಾಗಿದೆ ಎಂದು ವಾಟ್ಸ್‌ ಆ್ಯಪ್‌ ಸಂದೇಶ ಕಳುಹಿಸಿದ್ದಾರೆ. ನಂತರ ಹಂತ-ಹಂತವಾಗಿ ಕಳೆದ ಮಾರ್ಚ್‌ನಿಂದ ಜೂನ್‌ವರೆಗೆ 1.50 ಕೋಟಿ ರೂ. ಹೂಡಿಕೆ ಮಾಡಿಕೊಂಡಿದ್ದಾರೆ. ಬಳಿಕ ವಿಐಪಿ ಟ್ರೇಡಿಂಗ್‌ನಲ್ಲಿ ನಿಮ್ಮ ಷೇರು 28 ಕೋಟಿ ರೂ. ಆಗಿದ್ದು, ಅದನ್ನು ಪಡೆಯಲು 75 ಲಕ್ಷ ರೂ. ಪಾವತಿಸಬೇಕೆಂದು ಸಂದೇಶ ಕಳುಹಿಸಿದ್ದಾರೆ. ಅದರಿಂದ ಅನುಮಾನಗೊಂಡ ದೂರುದಾರರು ಕೂಡಲೇ ಸೈಬರ್‌ ಠಾಣೆಗೆ ದೂರು ನೀಡಿದ್ದು,  ಬಳಿಕ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದಾಗ ಬ್ಯಾಂಕ್‌ ಅಧಿಕಾರಿಗಳೇ ವಂಚನೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಆಯುಕ್ತರು ಹೇಳಿದರು.

ವಂಚಕರ ವಿರುದ್ಧ 254 ಕೇಸ್‌, 97 ಕೋಟಿ ರೂ. ವಹಿವಾಟು:

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಸೈಬರ್‌ ಪೊಲೀಸರು, ಹಣ ವರ್ಗಾವಣೆ ಯಾದ ಬ್ಯಾಂಕ್‌ ಖಾತೆಗಳ ಪರಿಶೀಲಿಸಿದಾಗ ಎನ್‌ಸಿಆರ್‌ ಪೋರ್ಟಲ್‌ನಲ್ಲಿ ವಂಚಕರ ವಿರುದ್ಧ 254 ಪ್ರಕರಣ ದಾಖಲಾಗಿದ್ದು, ಸುಮಾರು 97 ಕೋಟಿ ರೂ. ಈ ಖಾತೆಗಳಿಂದಲೇ ವಹಿವಾಟು ನಡೆದಿರುವುದು ಕಂಡುಬಂದಿತ್ತು. ನಾಗರಭಾವಿಯಲ್ಲಿರುವ ಆಕ್ಸಿಸ್‌ ಬ್ಯಾಂಕ್‌ಗೆ ಹೋಗಿ ಪರಿಶೀಲಿಸಿದಾಗ ಆರೋಪಿತ ಖಾತೆದಾರರಿಂದ, ಬೆಂಗಳೂರು ನಗರದಲ್ಲಿ ವಾಸ ಹಾಗೂ ಬಿಸೆನೆಸ್‌ ನಡೆಸುತ್ತಿರುವ ದಾಖಲಾತಿಯನ್ನು ಬ್ಯಾಂಕ್‌ ಸಿಬ್ಬಂದಿ ಪಡೆದುಕೊಂಡಿಲ್ಲ. ಅಲ್ಲದೆ ಇದೇ ಶಾಖೆಯಲ್ಲಿ ಇನ್ನೂ ನಾಲ್ಕು ಖಾತೆಗಳು ಸೇರಿ ಒಟ್ಟು ಆರು ಖಾತೆಗಳಿಂದ ಸುಮಾರು 97 ಕೋಟಿ ರೂ. ವಹಿವಾಟು ನಡೆದಿರುವುದು ಕಂಡುಬಂದಿದೆ. ಬಳಿಕ ತಾಂತ್ರಿಕ ತನಿಖೆ ನಡೆಸಿದಾಗ ಬ್ಯಾಂಕ್‌ ಅಧಿಕಾರಿ-ಸಿಬ್ಬಂದಿ ಭಾಗಿಯಾಗಿರುವುದು ಪತ್ತೆಯಾಗಿದೆ. ಕೂಡಲೇ ಮ್ಯಾನೆಜರ್‌ ಕಿಶೋರ್‌ ಸಾಹು,  ಸೇಲ್ಸ್‌ ಮ್ಯಾನೆಜರ್‌ ಮನೋಹರ್‌, ಸೇಲ್ಸ್‌ ಎಕ್ಸಿಕ್ಯೂಟಿವ್‌ಗಳಾದ ಕಾರ್ತಿಕ್‌ ಮತ್ತು ರಾಕೇಶ್‌ರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇಡೀ ವಂಚನೆಯ ಜಾಲ ಬಯಲಾಗಿದೆ. ತಲೆಮರೆಸಿಕೊಂಡಿರುವ ವಂಚಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದರು.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.