Channapatna toys: ಅಫ್ಘಾನಿಸ್ತಾನ ಮಕ್ಕಳ ಕೈ ಸೇರಿತು ಚನ್ನಪಟ್ಟಣ ಗೊಂಬೆ!


Team Udayavani, Dec 17, 2023, 12:00 PM IST

Channapatna toys: ಅಫ್ಘಾನಿಸ್ತಾನ ಮಕ್ಕಳ ಕೈ ಸೇರಿತು ಚನ್ನಪಟ್ಟಣ ಗೊಂಬೆ!

ಬೆಂಗಳೂರು: ಮಗುವಿನ ಬೇಕು ಬೇಡಗಳನ್ನು ಒಬ್ಬ ತಾಯಿಯಿಂದ ಮಾತ್ರ ಅರಿಯಲು ಸಾಧ್ಯ. ಆದರೆ ತಾಯಿಯೇ ಇಲ್ಲದ ಮಕ್ಕಳ ಪರಿಸ್ಥಿತಿ ಒಮ್ಮೆ ಯೋಚಿಸಿ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾಗಿ ಪಾಲಕರನ್ನು ಕಳೆದುಕೊಂಡ ಮಕ್ಕಳ ಮೊಗದಲ್ಲಿ ಕರ್ನಾಟಕದ ತಾಯಂದಿರು ಪ್ರೀತಿಯಿಂದ ಕಳುಹಿಸಿದ ಆಟಿಕೆಗಳು ನಗುವು ಮೂಡಿಸಿದೆ.

ಸಾಮಾನ್ಯವಾಗಿ ಯಾವುದೇ ಒಂದು ದೇಶವು ಯುದ್ಧ, ಭಯೋತ್ಪಾದನೆ ದಾಳಿಗಳಿಗೆ ತುತ್ತಾದ ಸಂದರ್ಭದಲ್ಲಿ ಅಲ್ಲಿನ ಜನರ ಸಹಾಯಕ್ಕಾಗಿ ಯುನೈಟೆಡ್‌ ನೇಷನ್ಸ್‌ ಆಫೀಸ್‌ ಡ್ರಗ್ಸ್‌ ಆ್ಯಂಡ್‌ ಕ್ರೈಮ್‌ ಮೂಲಕ ಹಲವು ರಾಷ್ಟ್ರಗಳು ನೊಂದವರಿಗೆ ಸಹಾಯ ಮಾಡಲು ಮುಂದಾಗುತ್ತವೆ. ಈ ಬಾರಿ ಭಯೋತ್ಪಾದಕ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ ಅಫ್ಘಾನಿಸ್ತಾನದ ಮಕ್ಕಳ ಮೊಗದಲ್ಲಿ ನಗು ಮೂಡಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎನ್ನುವು ಭರವಸೆ ನೀಡಲು ಭಾರತವು ಕೈ ಜೋಡಿಸಿದೆ.

ಏಕೈಕ ರಾಜ್ಯದ ಹೆಗ್ಗಳಿಕೆ!: ಅಫ್ಘಾನಿಸ್ತಾನದ ಮಕ್ಕಳಿಗೆ ಮಾನವೀಯ ನೆಲೆಯಲ್ಲಿ ಆಟಿಕೆಗಳ ರಫ್ತುಗೆ ಆಯ್ಕೆ ಮಾಡಿದ ಏಕೈಕ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸಂಜೀವಿನಿ-ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ಇದರ ಜವಾಬ್ದಾರಿ ವಹಿಸಿಕೊಂಡು ಮರದ ಆಟಿಕೆಗಳಿಗೆ ವಿಶೇಷ ಮನ್ನಣೆ ಗಳಿಸಿದ ರಾಮನಗರ ಚನ್ನಪಟ್ಟಣದ ಗೊಂಬೆಗಳನ್ನು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಯೋಗದಲ್ಲಿ ನ.9ರಂದು ವಿದೇಶಕ್ಕೆ ರವಾನೆಯಾಗಿದೆ.

ಚನ್ನಪಟ್ಟಣ ಗೊಂಬೆ ಯಾಕೆ?: ಮರದ ಆಟಿಕೆಗಳಿಗೆ ಕರ್ನಾಟಕದ ಚನ್ನಪಟ್ಟಣದ ಮರದ ಗೊಂಬೆಗಳನ್ನು ಆಯ್ಕೆ ಮಾಡಲಾಗಿದೆ. ಇವುಗಳು ಜಿಐ ಟ್ಯಾಗ್‌ ಹೊಂದಿದ್ದು, ನೈಸರ್ಗಿಕ ಬಣ್ಣಗಳಿಂದ ತಯಾರಿಸಲಾಗುತ್ತದೆ. ಇದು ಮಕ್ಕಳ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜತೆಗೆ ಅಂತಾರಾಷ್ಟ್ರೀಯ ರಫ್ತಿಗೆ ಅಡೆತಡೆಗಳಿಲ್ಲದೇ ಕಸ್ಟಮ್‌ ಕ್ಲೀಯರ್ ಪಡೆಯಲು ಸಹಾಯಕವಾಗಿದೆ.

1.50 ಲಕ್ಷ ರೂ. ಮೊತ್ತದ ಆಟಿಕೆ: ಚನ್ನಪಟ್ಟಣದ “ಶ್ರೀ ಸಾಯಿ ಬಾಬಾ ಮಹಿಳಾ’ ಸ್ವಸಹಾಯ ಗುಂಪಿನ ಸುಮಾರು 10 ಮಂದಿ ಮಹಿಳೆಯರು ತಯಾರಿಸಿದ ಮರದ ಆಟಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ. ವಿಶೇಷವಾಗಿ 3 ರಿಂದ 6 ವರ್ಷದೊಳಗಿನ ಮಕ್ಕಳ ಕಲಿಕೆಯ ಜತೆಗೆ ಮನೋರಂಜನೆಗೆ ಅಗತ್ಯವಿರುವ ಇಂಗ್ಲೀಷ್‌ ವರ್ಣ ಮಾಲೆ, ಸಂಖ್ಯೆಗಳು, ಮೆದುಳು ಚುರುಕುಗೊಳಿಸುವ ಆಟಿಕೆ, ಗೊಂಬೆಗಳು, ಮಕ್ಕಳಾಡುವ ಬ್ಲಾಕ್ಸ್‌ಗಳಿವೆ. ಬೆಂಗಳೂರು ಮೂಲಕ ಹೊಸದಿಲ್ಲಿ ಹಾಗೂ ಅಲ್ಲಿಂದ ಅಫ್ಘಾನಿಸ್ತಾನದ ಮಕ್ಕಳ ಕೈ ಸೇರಿವೆ.

“ಇನ್ನಷ್ಟು ರಾಷ್ಟ್ರ ಗಳಿಗೆಸಹಾಯ ಸಿಗಲಿದೆ: ಯುನೈಟೆಡ್‌ ನೇಷನ್ಸ್‌ ಆಫೀಸ್‌ ಡ್ರಗ್ಸ್‌ ಆ್ಯಂಡ್‌ ಕ್ರೈಮ್‌ನ ಅಫ್ಘಾನಿಸ್ತಾನ ತನ್ನ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ಕರ್ನಾಟಕ ಜೀವನೋಪಾಯ ಮಿಶನ್‌ನಿಂದ ಕಳುಹಿಸಿದ ಆಟಿಕೆಗಳು ಪೋಷಕರನ್ನು ಕಳೆದುಕೊಂಡ ಮಕ್ಕಳ ಕೈ ಸೇರಿವೆ. ಇಂತಹ ಸಹಾಯ ಕರ್ನಾಟಕದಿಂದ ಇನ್ನಷ್ಟು ರಾಷ್ಟ್ರಗಳಿಗೆ ಸಿಗಲಿ ಎಂದು ಟ್ವೀಟ್‌ ಮಾಡಿದೆ.

ಇದೇ ಮೊದಲ ಬಾರಿಗೆ ಕರ್ನಾಟಕದಿಂದ ಪೋಷಕರನ್ನು ಕಳೆದುಕೊಂಡ ಅಫ್ಘಾನಿ ಸ್ತಾನದ ಅನಾಥ ಮಕ್ಕಳಿಗೆ ಚನ್ನಪಟ್ಟಣದ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರು ತಯಾರಿಸಿದ ಆಟಿಕೆಗಳನ್ನು ಕಳುಹಿಸಲಾಗಿದೆ. ಒಬ್ಬ ತಾಯಿಯಿಂದಲೇ ಮಗುವಿನ ಮನಸ್ಸು ಅರ್ಥ ಮಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಅಮ್ಮಂದಿರು ತಯಾರಿಸಿದ ಆಟಿಕೆ ಮಕ್ಕಳಿಗೆ ಕಳುಹಿಸಲಾಗಿದೆ. -ಪಿ.ಐ. ಶ್ರೀವಿದ್ಯಾ, ನಿರ್ದೇಶಕಿ ಕೆಎಸ್‌ಆರ್‌ಎಲ್‌ಪಿಎಸ್‌.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.