ಅನುಕಂಪದ ನೌಕರಿಗೆ ನಕಲಿ ದಾಖಲೆ
Team Udayavani, Sep 20, 2017, 11:43 AM IST
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಬಿಎಂಪಿಯಲ್ಲಿ ಉದ್ಯೋಗ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಎಫ್ ಪೊಲೀಸರು, “ಡಿ’ ಗ್ರೂಪ್ ನೌಕರ ಅಶೋಕ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ನಕಲಿ ದಾಖಲೆಗಳನ್ನು ನೀಡಿ ಬಿಬಿಎಂಪಿಯಲ್ಲಿ ಅನುಕಂಪದ ಆಧಾರದಲ್ಲಿ ಅಶೋಕ ಕುಮಾರ್ ಉದ್ಯೋಗ ಪಡೆದಿದ್ದಾರೆ ಎಂದು ಅಮರೇಶ್ಗೌಡ ಎಂಬುವವರು ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಅಶೋಕ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬಿಎಂಟಿಎಫ್ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸಬ್ಇನ್ಸ್ಪೆಕ್ಟರ್ ಶಿವಕುಮಾರ್ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿದ್ದ ನಾರಿ ಎಂಬುವರು ಕರ್ತವ್ಯದ ವೇಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪುತ್ರ ಬಾಬುಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲು ನಿರ್ಧರಿಸಲಾಗಿತ್ತು. ಆದರೆ, ನಾರಿ ಅವರ ಮಗ ಬಾಬು ಕೂಡ ಅದಾಗಲೇ ಮೃತಪಟ್ಟಿದ್ದರು. ಇದನ್ನು ದುರುಪಯೋಗಪಡಿಸಿಕೊಂಡ ಅಶೋಕಕುಮಾರ್ ಎಂಬಾತ ತಾನೇ ಬಾಬು ಎಂದು ನಕಲಿ ದಾಖಲೆ ಸೃಷ್ಟಿಸಿ ಬಿಬಿಎಂಪಿಯಲ್ಲಿ “ಡಿ’ ಗ್ರೂಪ್ ನೌಕರನಾಗಿ ಕೆಲಸ ಗಿಟ್ಟಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರಕರಣದ ಹಿನ್ನೆಲೆ
ನ್ಯಾಯಾಲಯದ ನಿರ್ದೇಶನದಂತೆ ಈಗಾಗಲೇ ತನಿಖೆ ನಡೆಸುತ್ತಿರುವ ಬಿಎಂಟಿಎಫ್ ಪೊಲೀಸರು, ಪ್ರಾಥಮಿಕ ವರದಿ ಸಿದ್ಧಪಡಿಸುತ್ತಿದೆ. ಅಶೋಕ್ ಕುಮಾರ್ ಬಿಬಿಎಂಪಿಯಲ್ಲೇ ಪೌರಕಾರ್ಮಿಕರಾಗಿದ್ದ ಟಿ.ಎಂ. ವೇಲು ಎಂಬುವರ ಪುತ್ರನಾಗಿದ್ದು, ವೇಲು ಕೂಡ ಕರ್ತವ್ಯದ ಸಮಯದಲ್ಲಿಯೇ ಮೃತಪಟ್ಟಿದ್ದರು. ಆಗ ತಂದೆ ಕೆಲಸವನ್ನು ಹಿರಿಯ ಮಗ ಅಶೋಕ ಕುಮಾರ್ಗೆ ನೀಡಬೇಕಿತ್ತು.
ಆದರೆ, ಅಷ್ಟರಲ್ಲಾಗಲ್ಲೇ ಅಶೋಕ ಕುಮಾರ್ ಬಾಬು ಎಂಬ ಹೆಸರಿನಲ್ಲಿ ನೌಕರಿಯಲ್ಲಿರುವುದು ಗೊತ್ತಾಗಿದೆ ಎಂದು ಬಿಎಂಟಿಎಫ್ ಮೂಲಗಳು ತಿಳಿಸಿವೆ. ಈ ಮಧ್ಯೆ ಬಿಎಂಟಿಎಫ್ ಪೊಲೀಸರು ಹೆಚ್ಚಿನ ತನಿಖೆಗಾಗಿ ನಾರಿ ಮತ್ತು ಟಿ.ಎಂ. ವೇಲು ಅವರ ಸೇವಾ ಪುಸ್ತಕ ಸಲ್ಲಿಸುವಂತೆ ಬಿಬಿಎಂಪಿ ಆಡಳಿತ ವಿಭಾಗದ ಅಪರ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.