ಸಿಗರೇಟ್‌ ತಂದು ಕೊಡದ ವ್ಯಕ್ತಿ ಎದೆಗೇ ಚೂರಿ ಇರಿತ


Team Udayavani, Oct 10, 2017, 11:21 AM IST

murder-knief.jpg

ಬೆಂಗಳೂರು: ಮದ್ಯ ಸೇವಿಸುವ ವೇಳೆ ಸಿಗರೇಟ್‌ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೊಲ್ಲಲು ಯತ್ನಿಸಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಅರೇಹಳ್ಳಿ ನಿವಾಸಿ ಅಹ್ಮದ್‌ ಜಾನ್‌ (52) ಹಲ್ಲೆಗೊಳಗಾದ ವ್ಯಕ್ತಿ. ಗಾಯಗೊಂಡಿರುವ ಜಾನ್‌, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ಯದಂಗಡಿಯಲ್ಲಿರುವ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದು, ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರ್‌ಗೆ ಹೋಗಿದ್ದ ಜಾನ್‌,  ಮದ್ಯ ಸೇವಿಸುವಾಗ ಪಕ್ಕದಲ್ಲಿದ್ದ ಅಪರಿಚಿತರು ಸಿಗರೇಟ್‌ ತಂದುಕೊಡುವಂತೆ ಹೇಳಿದ್ದಾರೆ. ಇದಕ್ಕೆ ಆತ ಆಕ್ಷೇಪ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ. ಗಾಯಗೊಂಡು ಬಾರ್‌ ಮುಂದೆ ನರಳುತ್ತಿದ್ದ ಅಹ್ಮದ್‌ ಜಾನ್‌ನನ್ನು, ಯುವ ಬ್ರಿಗೇಡ್‌ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ತಮ್ಮ ಕಾರಿನಲ್ಲೇ ಕರೆದೊಯ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ವೈದ್ಯರ ಸಲಹೆ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.

ಸಿನಿಮಾ ನೋಡಿ ಬರುವಾಗ ನಡೆದ ಘಟನೆ: ಇಟ್ಟುಮಡುವಿನಲ್ಲಿ ವಾಸವಿರುವ ಅಹ್ಮದ್‌ ಜಾನ್‌ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದು, ಭಾನುವಾರ ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಪತ್ನಿಯೊಂದಿಗೆ ದರ್ಶನ್‌ ಅಭಿಯನದ “ತಾರಕ್‌’ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ನೋಡಿಕೊಂಡು ಮನೆಗೆ ಹೋಗುವಾಗ ಪತ್ನಿ ಬಳಿ 100 ರೂ. ಪಡೆದ ಜಾನ್‌, ಉತ್ತರಹಳ್ಳಿಯ ಪೆಟ್ರೋಲ್‌ ಬಂಕ್‌ನಿಂದ ಸ್ವಲ್ಪ ದೂರದಲ್ಲಿರುವ ಬಾಲಾಜಿ ಬಾರ್‌ನಲ್ಲಿ ಮದ್ಯ ಸೇವಿಸಲು ಹೋಗಿದ್ದರು.

ಬಾರ್‌ನ ಕೌಂಟರ್‌ನಲ್ಲಿ ಮದ್ಯ ಸೇವಿಸುವಾಗ ಅಲ್ಲೇ ಇದ್ದ ಇಬ್ಬರು ಅಪರಿಚಿತರು, ಜಾನ್‌ಗೆ ಸಿಗರೇಟ್‌ ತರುವಂತೆ ಸೂಚಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಾನ್‌, “ನಾನೇಕೆ ನಿಮಗೆ ಸಿಗರೇಟ್‌ ತಂದುಕೊಡಬೇಕು’ ಎಂದು ಪ್ರಶ್ನಿಸಿದ್ದಾರೆ. ಇಷ್ಟು ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಒಂದು ಹಂತದಲ್ಲಿ ಜಾನ್‌ ಅಪರಿಚಿತರ ಮೇಲೆ ಕೈ ಮಾಡಿದ್ದಾರೆ.

ಇದರಿಂದ ಆಕ್ರೋಶಗೊಂಡ ಆರೋಪಿಗಳು, ಜಾನ್‌ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಸಿಸಿಟಿವಿಯಲ್ಲಿ ಆರೋಪಿಗಳ ಚಹರೆ ಪತ್ತೆಯಾಗಿದೆ. ಸದ್ಯದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.

ನಿಂತು ತಮಾಷೆ ನೋಡುತ್ತಿದ್ದರು: ತನ್ನ ಕಣ್ಣ ಮುಂದೆಯೇ ಪತಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯುವುದನ್ನು ಕಂಡ ಅಹ್ಮದ್‌ ಜಾನ್‌ ಪತ್ನಿ ಕೂಡಲೇ ಪತಿಯ ನೆರವಿಗೆ ಬಂದಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಪತಿಯನ್ನು ಆಸ್ಪತ್ರೆಗೆ ಕರೆಯೊಯ್ಯಲು ನೆರವಾಗುವಂತೆ ಅಲ್ಲಿ ನೆರೆದಿದ್ದವರನ್ನು ಅಂಗಲಾಚಿದ್ದಾರೆ. ಆದರೆ ಅಲ್ಲಿದ್ದವರ್ಯಾರೂ ಅವರ ನೆರವಿಗೆ ಹೋಗಿಲ್ಲ. ಬದಲಿಗೆ ಸುತ್ತ ನಿಂತು ತಮಾಷೆ ನೋಡುವ ಮೂಲಕ ಅಮಾನವೀಯರಂತೆ ವರ್ತಿಸಿದ್ದಾರೆ.

ಮಾನವೀಯತೆ ಮೆರೆದ ಸೂಲಿಬೆಲೆ: ರಕ್ತದ ಮಡುವಲ್ಲಿ ಬಿದ್ದಿದ್ದ ಅಹ್ಮದ್‌ ಜಾನ್‌ನನ್ನು ರಕ್ಷಿಸಲು ಪತ್ನಿ ಬೇಡಿಕೊಂಡರೂ ಲ್ಲಿದ್ದವರ್ಯಾರೂ ನೆರವಿಗೆ ಬಂದಿಲ್ಲ. ಇದೇ ವೇಳೆ ಘಟನೆ ನಡೆದ ಸ್ಥಳದ ಮಾರ್ಗದಲ್ಲಿ ಹೋಗುತ್ತಿದ್ದ ಯುವ ಬ್ರಿಗೇಡ್‌ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ, ಸಾರ್ವಜನಿಕರು ಗುಂಪು ಸೇರಿರುವುದನ್ನು ಕಂಡು, ಕಾರು ನಿಲ್ಲಿಸಿ ವಿಚಾರಿಸಿದ್ದಾರೆ.

ಬಳಿಕ ಘಟನೆ ಬಗ್ಗೆ ಮಾಹಿತಿ ಪಡೆದು, ಗಾಯಾಳು ಜಾನ್‌ ಮತ್ತು ಪತ್ನಿಯನ್ನು ತಮ್ಮ ಕಾರಿನಲ್ಲಿ ಕಾರಿನಲ್ಲಿ ಕೂರಿಸಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಂತೆ ತಮ್ಮ ಚಾಲಕನಿಗೆ ಸೂಚಿಸಿದ್ದಾರೆ. ನಂತರ ಸ್ನೇಹಿತರ ಬೈಕ್‌ನಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸೂಲಿಬೆಲೆ, ವೈದ್ಯರ ಸಲಹೆ ಮೇರೆಗೆ ಗಾಯಾಳು ಅಹ್ಮದ್‌ ಜಾನ್‌ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ಕೂಡ ನೆರವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.