ಅಂತರ್ಜಾತಿ ವಿವಾಹಕ್ಕೆ ವಿಶೇಷ ಯೋಜನೆ


Team Udayavani, Jan 30, 2017, 12:12 PM IST

antarjati-vivaHA.jpg

ಬೆಂಗಳೂರು: “ಅಂತರ್ಜಾತಿ ವಿವಾಹಕ್ಕೆ ವಿಶೇಷ ಯೋಜನೆ ರೂಪಿ ಸುವ ಉದ್ದೇಶವಿದ್ದು, ಅದಕ್ಕಾಗಿ ಈಗಿರುವ ನಿಯಮಗಳನ್ನು ಮಾರ್ಪ ಡಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ,” ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಹಾಗೂ ಆರ್‌ಪಿಐನ ರಾಷ್ಟ್ರೀಯ ಅಧ್ಯಕ್ಷ ರಾಮದಾಸ್‌ ಅಠವಾಳೆ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, “ಅಂತರ್ಜಾತಿ ವಿವಾಹವಾದವರಿಗೆ 2.50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಇದನ್ನು 5 ಲಕ್ಷ ರೂ.ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಹಾಗೆಯೇ ಅಂತರ್ಜಾತಿ ವಿವಾಹವಾದವರಿಗೆ ಉದ್ಯೋಗ, ಗ್ರಾಮೀಣ ಪ್ರದೇಶದ ಲ್ಲಿದ್ದರೆ 5 ಎಕರೆ ಜಮೀನು ನೀಡುವ ಸಂಬಂಧ ಕೇಂದ್ರ ಸರ್ಕಾರ ಆಸಕ್ತಿ ತಾಳಲಿದೆ,” ಎಂದರು. 

“ಒಂದೇ ಸಮುದಾಯದ ಬೇರೆ ಬೇರೆ ಉಪಪಂಗಡಗಳು ಮದುವೆ ಯಾದಲ್ಲಿ ಅದನ್ನು ಅಂತರ್ಜಾತಿ ಎಂದು ಪರಿಗಣಿಸುವುದಿಲ್ಲ. ಬೇರೆ ಬೇರೆ ಜಾತಿಯಲ್ಲಿ ಮದುವೆಯಾದಲ್ಲಿ ಮಾತ್ರ ಅದನ್ನು ಅಂತರ್ಜಾತಿ ವಿವಾಹ ಎಂದು ಪರಿಗಣಿಸಿ ಅವರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ರಾಜ್ಯದಲ್ಲಿ ಅಂತರ್ಜಾತಿ ವಿವಾಹಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದನ್ನು ಸ್ವಾಗತಿಸುತ್ತೇನೆ.

ಯಾವುದಾದರೂ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಾತಿ ವಿವಾಹ ನಡೆಯುತ್ತಿದೆ ಎಂದು ತಿಳಿದುಬಂದಲ್ಲಿ ಅಂತಹ ಜಿಲ್ಲೆಗೆ 25 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಈ ಅನುದಾನ ಬಳಕೆ ಮಾಡಿಕೊಂಡು ಉದ್ಯೋಗ, ಜಮೀನು ನೀಡುವುದು ಹಾಗೂ 5 ಲಕ್ಷ ರೂ. ಆರ್ಥಿಕ ನೆರವು ನೀಡುವುದಕ್ಕೆ ಬಳಕೆ ಮಾಡಿಕೊಳ್ಳಬಹುದು,” ಎಂದರು.

ಮೀಸಲು ಪ್ರಮಾಣ ಶೇ. 75ಕ್ಕೆ ಹೆಚ್ಚಿಸಬೇಕು: ಆರ್ಥಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಬಡವರಿಗೆ ಮೀಸಲಾತಿ ಜಾರಿಗೆ ತರಲು ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಹೆಚ್ಚಳ ಮಾಡುವುದು ಮತ್ತು ಆ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಆದ್ಯತೆ ನೀಡುವ ಕುರಿತು ಮುಂದಿನ ಅಧಿವೇಶನದ ವೇಳೆ ಮಸೂದೆ ಮಂಡನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದಾಗಿ ಅವರು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳಿಗೆ ಶೇ. 49.5ರಷ್ಟು ಮೀಸಲಾತಿ ಇದೆ. ಇದನ್ನು ಆರ್ಥಿಕವಾಗಿ ಹಿಂದುಳಿದ ಎಲ್ಲ ಸಮುದಾಯದವರಿಗೆ ವಿಸ್ತರಿಸಲು ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ದೇಶದೆಲ್ಲೆಡೆ ಮೀಸಲಾತಿ ಬೇಕು ಎಂದು ಅನೇಕ ಸಮು­ದಾ­ಯಗಳು ಪ್ರತಿಭಟನೆ ಮಾಡ­ತೊಡಗಿವೆ. ಹರ್ಯಾಣದಲ್ಲಿ ಜಾಟ್‌, ಗುಜರಾತ್‌ನಲ್ಲಿ ಪಟೇಲ್‌ ಸಮು­ದಾಯ, ಆಂಧ್ರದಲ್ಲಿ ಕಾಪು, ರೆಡ್ಡಿ ಜನಾಂಗದವರು ಪ್ರತಿಭಟನೆಗೆ ಇಳಿದಿ­ದ್ದಾರೆ. ಕರ್ನಾಟಕದಲ್ಲಿ ಒಕ್ಕಲಿಗರು ಮೀಸಲಾತಿ ಬೇಕು ಎಂದಿದಾರೆ. ಹೀಗಾಗಿ ಬಡವರನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ನೀಡಲಾಗುವುದು ಎಂದು ಸಚಿವ ಅಠಾವಳೆ ತಿಳಿಸಿದ್ದಾರೆ. 

ನೋಟಿನ ಮೇಲೆ ಅಂಬೇಡ್ಕರ್‌ ಅವರ ಚಿತ್ರ ಹಾಕಿ
ನೋಟು ರದ್ಧತಿಗೆ  ಆರ್‌ಪಿಐ ಬೆಂಬಲ ಇದೆ. ಪ್ರತಿ 10 ವರ್ಷಕ್ಕೊಮ್ಮೆ ನೋಟುಗಳ ಬದ­ಲಾವಣೆ ಮಾಡುವ ಮೂಲಕ ಕಪ್ಪು ಹಣಕ್ಕೆ ಕಡಿ­ವಾಣ ಹಾಕಬೇಕು ಎಂದು ಅಂಬೇಡ್ಕರ್‌ ಕೂಡಾ ಹೇಳಿದ್ದರು. ದೇಶದಲ್ಲಿ ಇರುವ ನೋಟಿನಲ್ಲಿ ಮಹಾತ್ಮ­ಗಾಂಧಿ ಭಾವಚಿತ್ರ ಇದೆ.

ಇದಕ್ಕೆ ಯಾರದೇ ತಕರಾರಿಲ್ಲ. ಆದರೆ, ಸಂವಿಧಾನ ರಚಿಸಿದ ಅಂಬೇಡ್ಕರ್‌ ಅವರ ಆಶಯಗಳು ಸದಾ ಕಾಲ ಇರಬೇಕಾಗುತ್ತದೆ. ಹೀಗಾಗಿ ಇರುವ ಕರೆನ್ಸಿಗಳ ಪೈಕಿ ಯಾವುದಾದರೂ ಒಂದು ನೋಟಿನ ಮೇಲೆ ಅಂಬೇಡ್ಕರ್‌ ಭಾವಚಿತ್ರ ಮುದ್ರಿಸಬೇಕು ಎಂದು ಅಠಾವಳೆ ಆಗ್ರಹಿಸಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.