ಸಾಧಾರಣ ಮಳೆಗೆ ಧರೆಗುರುಳಿದ ಮರ
Team Udayavani, May 12, 2019, 3:04 AM IST
ಬೆಂಗಳೂರು: ನಗರದಲ್ಲಿ ಶನಿವಾರ ಸುರಿದ ಸಾಧಾರಣ ಮಳೆಗೆ ಮರವೊಂದು ಧರೆಗುರುಳಿದೆ. ಹಲವೆಡೆ ರೆಂಬೆ-ಕೊಂಬೆಗಳು ಮುರಿದು ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಶನಿವಾರ ಸಂಜೆ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಬಸವನಗುಡಿ, ಲಾಲ್ಬಾಗ್, ಆರ್.ಆರ್.ನಗರ, ಮಲ್ಲೇಶ್ವರ, ವಿಜಯನಗರ, ಯಶವಂತಪುರ, ಕೆ.ಆರ್.ಪುರ, ಮಹದೇವಪುರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಸಾಧಾರಣ ಮಳೆಯಾಯಿತು.
ಈ ವೇಳೆ ಮಹಾಲಕ್ಷ್ಮೀ ಬಡಾವಣೆಯಲ್ಲಿ ಒಂದು ಮರ ಧರೆಗುರುಳಿದೆ. ಇತರೆಡೆ ರೆಂಬೆ ಕೊಂಬೆಗಳು ಮುರಿದಿವೆ ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಎಲ್ಲಿ ಎಷ್ಟು ಮಳೆ: ಎಚ್ಎಎಲ್ ಭಾಗದಲ್ಲಿ 11.5 ಮಿಲಿ ಮೀಟರ್ ಮಳೆಯಾಗಿದ್ದು, ಕೊಟ್ಟಿಗೆಪಾಳ್ಯದಲ್ಲಿ 11 ಮಿ.ಮೀ, ಎಚ್ಎಸ್ಆರ್ ಬಡಾವಣೆ 10.5, ನಂದಿನಿ ಬಡಾವಣೆ, ಹೊಯ್ಸಳ ನಗರ, ಬೊಮ್ಮನಹಳ್ಳಿಯಲ್ಲಿ 10 ಮಿ.ಮೀ, ಅಗ್ರಹಾರ ದಾಸರಹಳ್ಳಿ, ಕೋನೇನ ಅಗ್ರಹಾರ 9.5 ಮಿ.ಮೀ, ದೊಡ್ಡನೆಕ್ಕುಂದಿ 9 ಮಿ.ಮೀ, ವಿಜಯನಗರ, ಪ್ಯಾಲೆಸ್ ಗುಟ್ಟಹಳ್ಳಿ 5 ಮಿ.ಮೀ, ಸಾರಕ್ಕಿ 4.5 ಮಿ.ಮೀ, ಬಸವನಗುಡಿ, ಕಣ್ಣೂರು 4 ಹಾಗೂ ಆರ್.ಆರ್.ನಗರದಲ್ಲಿ 3.5 ಮಿ.ಮೀ. ಮಳೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.