BBMP: ತೆರಿಗೆ ಸಂಗ್ರಹಿಸದ ಅಧಿಕಾರಿಗಳ ಮೇಲೆ “ಶಿಸ್ತು ಕ್ರಮದ ಅಸ್ತ್ರ”


Team Udayavani, Feb 4, 2024, 8:37 AM IST

BBMP: ತೆರಿಗೆ ಸಂಗ್ರಹಿಸದ ಅಧಿಕಾರಿಗಳ ಮೇಲೆ “ಶಿಸ್ತು ಕ್ರಮದ ಅಸ್ತ್ರ”

ಬೆಂಗಳೂರು: ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಆಸಕ್ತಿ ತೋರದ ಕಂದಾಯ ವಿಭಾಗದ ಅಧಿಕಾರಿಗಳ ವಿರುದ್ಧ “ಶಿಸ್ತು ಕ್ರಮದ ಅಸ್ತ್ರ’ ಪ್ರಯೋಗಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ವಿಫ‌ಲರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಪಾಲಿಕೆ ವಿಶೇಷ ಆಯುಕ್ತ ಮನೀಶ್‌ ಮೌದ್ಗಿಲ್‌ ಅವರು ಜ.30ರಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ಗೆ ವರದಿ ನೀಡಿದ್ದು, ಅದರಲ್ಲಿ ಬೊಮ್ಮನಹಳ್ಳಿ ವಲಯದ ಆರು ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಆಸ್ತಿ ತೆರಿಗೆ ಪಾವತಿಸದವರು ಹೆಚ್ಚಿನ ಸಂಖ್ಯೆಯಲ್ಲಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿದ್ದಾರೆ. ತೆರಿಗೆ ಕಟ್ಟದ ಟಾಪ್‌-50 ಗೃಹೇತರ ಕಟ್ಟಡಗಳಲ್ಲಿ ಒಂದೇ ಒಂದು ಕಟ್ಟಡವನ್ನು ಕಂದಾಯ ಅಧಿಕಾರಿಗಳು ಸೀಲ್‌ ಮಾಡಿಲ್ಲ. ಜತೆಗೆ ಮಾಲೀಕರಿಂದ ಆಸ್ತಿ ತೆರಿಗೆ ಸಂಗ್ರಹಕ್ಕೆ ಯಾವುದೇ ಕ್ರಮ ವಹಿಸಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸೆಗಿರುವ ಆರು ಅಧಿಕಾರಿಗಳಿಗೆ ಪಾಲಿಕೆ “ಅಮಾನತು ಅಸ್ತ್ರ’ ಪ್ರಯೋಗ ಮಾಡಿ ಇಲಾಖೆ ವಿಚಾರಣೆಗೆ ಆದೇಶಿಸುವಂತೆ ಮೌದ್ಗಿಲ್‌ ಅವರು ಪಾಲಿಕೆ ಮುಖ್ಯ ಆಯುಕ್ತರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎಂದು ಹೇಳಿವೆ.

ಬೇಗೂರು, ಯಲಚೇನಹಳ್ಳಿ ಅಧಿಕಾರಿಗಳ ವಿರುದ್ಧ ಕ್ರಮ: ಈ ಮಧ್ಯೆ, ಆಸ್ತಿ ತೆರಿಗೆ ಸಂಗ್ರಹದಲ್ಲಿ ಬೇಗೂರು, ಬೊಮ್ಮನಹಳ್ಳಿ, ಯಲಚೇನಹಳ್ಳಿ, ಉತ್ತರಹಳ್ಳಿ, ಎಚ್‌.ಎಸ್‌.ಆರ್‌.ಲೇ ಔಟ್‌ ಮತ್ತು ಅರಕೆರೆ ಪಾಲಿಕೆ ವಲಯ ಕಂದಾಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸಕ್ತಿ ತೋರಿಲ್ಲ. ಈ ಹಿನ್ನೆಲೆಯಲ್ಲಿ ಆ ಅಧಿಕಾರಿಗಳನ್ನೂ ಅಮಾನತು ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಪಾಲಿಕೆ ಮೂಲಗಳು ಹೇಳಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಆಯುಕ್ತೆ ರಮ್ಯಾ, ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಕುಂಟಿತವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸರಿಪಡಿಸಿಕೊಳ್ಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.

ತೆರಿಗೆ ಸಂಗ್ರಹಕ್ಕೆ ವಲಯಅಧಿಕಾರಿಗಳ ನಿರಾಸಕ್ತಿ? : ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಪಾಲಿಕೆ ಕಂದಾಯ ವಿಭಾಗ ಹಲವು ರೀತಿಯ ಕಾರ್ಯ ಯೋಜನೆ ರೂಪಿಸಿದೆ. ಇದರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿ ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕುವುದು ಕೂಡ ಸೇರಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ಎಂಟೂ ವಲಯಗಳಲ್ಲಿ ಬಿಬಿಎಂಪಿ ವಲಯ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಕಟ್ಟದ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ, ಬೊಮ್ಮನಹಳ್ಳಿ ವಲಯ, ಬೇಗೂರು, ಯಲಚೇನಹಳ್ಳಿ, ಉತ್ತರಹಳ್ಳಿ, ಎಚ್‌.ಎಸ್‌. ಆರ್‌.ಲೇ ಔಟ್‌ ಮತ್ತು ಅರಕೆರೆ ಸೇರಿ ಮತ್ತಿತರ ಪ್ರದೇಶಗಳಲ್ಲಿ ಹಲವು ಮಾಲೀಕರು 20 ಲಕ್ಷ ರೂ.ಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಅಂತವರ ವಿರುದ್ಧ ಕಂದಾಯ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ ಎಂಬ ಮಾತುಗಳು ಪಾಲಿಕೆಯಲ್ಲಿ ಕೇಳಿಬಂದಿವೆ.

ಟಾಪ್ ನ್ಯೂಸ್

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.