ಮೆಟ್ರೋದಲ್ಲಿ ಶುಕ್ರವಾರ 4.58 ಲಕ್ಷ ಮಂದಿ ಪ್ರಯಾಣ


Team Udayavani, Sep 1, 2019, 3:09 AM IST

shukravara

ಬೆಂಗಳೂರು: “ನಮ್ಮ ಮೆಟ್ರೋ’ ರೈಲು, ಶುಕ್ರವಾರ ಪ್ರಯಾಣಿಕರ ಸಂಚಾರದಲ್ಲಿ ಹಿಂದಿನ ಎಲ್ಲ ದಾಖಲೆಗಳನ್ನು ಸರಿಗಟ್ಟಿದೆ. ಕೇವಲ ಒಂದು ದಿನದಲ್ಲಿ ಮೆಟ್ರೋದಲ್ಲಿ 4.58 ಲಕ್ಷ ಮಂದಿ ಪ್ರಯಾಣಿಸಿದ್ದು, 1.09 ಕೋಟಿ ರೂ. ಆದಾಯ ಹರಿದುಬಂದಿದೆ. ಇದು ಗೌರಿ-ಗಣೇಶ ಹಬ್ಬಕ್ಕೆ ಬಿಎಂಆರ್‌ಸಿಗೆ ಬಂದ ಗಿಫ್ಟ್!

ವಾರಾಂತ್ಯದ ಜತೆಗೆ ಹಬ್ಬದ ಹಿನ್ನೆಲೆಯಲ್ಲಿ ಸಾಲು ಮೂರು ದಿನಗಳು ರಜೆ ಇದ್ದು, ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಬೇರೆ ಊರುಗಳಿಗೆ ತೆರಳಿದರು. ಇಲ್ಲಿನ ಹತ್ತಿರದ ಬಸ್‌ ನಿಲ್ದಾಣಗಳನ್ನು ತಲುಪಲು ಪ್ರಯಾಣಿಕರು ಮೆಟ್ರೋಗೆ ಮುಗಿಬಿದ್ದರು. ಇದರಿಂದ ಶುಕ್ರವಾರ ರಾತ್ರಿವರೆಗೆ ಒಟ್ಟಾರೆ 4.58 ಲಕ್ಷ ಜನ ಪ್ರಯಾಣಿಸಿದ್ದಾರೆ. ಈ ಪೈಕಿ ನೇರಳೆ ಮಾರ್ಗದಲ್ಲಿ 2,49,162 ಹಾಗೂ ಹಸಿರು ಮಾರ್ಗದಲ್ಲಿ 2,09,076 ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್‌ ತಿಳಿಸಿದ್ದಾರೆ.

ಸಾಮಾನ್ಯವಾಗಿ ಈ ಎರಡೂ ಮಾರ್ಗಗಳಲ್ಲಿ ನಿತ್ಯ ಸರಾಸರಿ 4.20ರಿಂದ 4.30 ಲಕ್ಷ ಜನ ಪ್ರಯಾಣಿಸುತ್ತಾರೆ. ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 25ರಿಂದ 30 ಸಾವಿರ ಪ್ರಯಾಣಿಸಿದ್ದಾರೆ. ಒಟ್ಟಾರೆ ಇಡೀ ದಿನ ನೇರಳೆ ಮಾರ್ಗದಿಂದ 54,25,474 ಹಾಗೂ ಹಸಿರು ಮಾರ್ಗದಿಂದ 54,81,372 ರೂ. ಹರಿದುಬಂದಿದೆ. ಈ ಹಿಂದೆ 2019ರ ಆಗಸ್ಟ್‌ 14ರಂದು 4.53 ಲಕ್ಷ ಜನ ಪ್ರಯಾಣಿಸಿದ್ದರು. ಅಲ್ಲದೆ, ಏಪ್ರಿಲ್‌ 4ರಂದು 4.52 ಲಕ್ಷ ಜನ ಸಂಚರಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು ಎಂದು ಅವರು ಮಾಹಿತಿ ನೀಡಿದರು.

“ಈ ಮೈಲುಗಲ್ಲುಗಳು ನಮ್ಮ ಮೆಟ್ರೋ ಸೇವೆಗೆ ಪ್ರಯಾಣಿಕರು ನೀಡಿದ ಸ್ಪಂದನೆಯಿಂದ ಸಾಧ್ಯವಾಗಿದೆ. ಇದಕ್ಕಾಗಿ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸುವ ಮೂಲಕ ಈ ವಿಶ್ವಾಸವನ್ನು ಉಳಿಸಿಕೊಳ್ಳಲಾಗುವುದು’ ಎಂದು ಯಶವಂತ ಚವಾಣ್‌ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಟ್ವಿಟರ್‌ನಲ್ಲೇ ಕೆಲವರು ಬಿಎಂಆರ್‌ಸಿಎಲ್‍ಗೆ ಪ್ರತಿಕ್ರಿಯೆ ರೂಪದಲ್ಲಿ ಕೆಲವು ಸಲಹೆಗಳನ್ನೂ ನೀಡಿದ್ದಾರೆ.

“ನಮ್ಮ ಮೆಟ್ರೋ’ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸುವ ಅಗತ್ಯವಿದೆ. ಟ್ರಿಪ್‌ಗಳ ಅಂತರವನ್ನು ಕಡಿಮೆ ಮಾಡುವ ಮೂಲಕ ಫ್ರಿಕ್ವೆನ್ಸಿ ಹೆಚ್ಚಿಸಬೇಕು. ಈಗಲೂ ಹಲವು ಮೂರು ಬೋಗಿಗಳ ಮೆಟ್ರೋ ರೈಲುಗಳಿದ್ದು, ಅವುಗಳ ಸಾಮರ್ಥ್ಯ ದುಪ್ಪಟ್ಟುಗೊಳಿಸುವ ಅವಶ್ಯಕತೆ ಇದೆ. ಅಲ್ಲದೆ, ಹಸಿರು ಮಾರ್ಗದಲ್ಲಿ ಮೊದಲ ಮೂರು ನಿಲ್ದಾಣಗಳ ನಡುವಿನ ಪ್ರಯಾಣ ದರ ಕಡಿಮೆ ಮಾಡಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.