![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 17, 2023, 12:30 PM IST
ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದ ಕನಕಪುರ ಮೂಲದ ಜಗದೀಶ್ ಎಂಬಾತ ನನ್ನು ಬಂಧಿಸಲಾಗಿದೆ.
ಕನಕಪುರ ಮೂಲದ ಜಗದೀಶ್ ಡಿ.14ರಂದು ಬೆಳಗ್ಗಿನ ಜಾವ ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ಕುಮಾರ್ ಎಂಬಾತನ ಮಧ್ಯೆ ಹಣದ ವರ್ಗಾವಣೆ, ಮೊಬೈಲ್ ಸಂದೇಶ ರವಾನೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಿ, ಗಿರಿನಗರದ ಮೋರ್ ಮಾಲ್ ಬಳಿಯಿರುವ ಅರುಣ್ಕುಮಾರ್ ಮನೆ ಮುಂದೆ ಗಲಾಟೆ ಮಾಡುತ್ತಿದ್ದ. ಅದರಿಂದ ಸಮಸ್ಯೆಯುಂಟಾಗುತ್ತಿದೆ ಎಂದು ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ದೇವರಾಜೇಅರಸು ಮತ್ತು ಸಿಬ್ಬಂದಿ ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿ ಆತನನ್ನು ಕಳುಹಿಸಲು ಯತ್ನಿಸಿದಾಗ ಅವಾಚ್ಯವಾಗಿ ನಿಂದಿಸಿದ್ದಾನೆ. ಈ ಸಂಬಂಧ ಆರೋಪಿ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.