ಮುಕ್ತ ವಿವಿ ಉಳಿವಿಗೆ ಎಬಿವಿಪಿ ಪಾದಯಾತ್ರೆ
Team Udayavani, Oct 10, 2017, 11:20 AM IST
ಬೆಂಗಳೂರು: ನಿತ್ಯ ತರಗತಿಗೆ ಹೋಗಿ ಪದವಿ ಪಡೆಯಲು ಸಾಧ್ಯವಾಗದವರಿಗೂ ಪದವಿ, ಸ್ನಾತಕೋತ್ತರ ಪದವಿ ಪೂರೈಸಲು ಅನುಕೂಲವಾಗಿದ್ದ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ(ಕೆಎಸ್ಒಯು) ಈಗ ಅನೇಕ ಸಮಸ್ಯೆ ಎದುರಿಸುತ್ತಿದೆ. ಯುಜಿಸಿ ಮಾನ್ಯತೆ ಇಲ್ಲದೇ ವಿದ್ಯಾರ್ಥಿಗಳ ದಾಖಲಾತಿ ಕೂಡ ನಡೆಯುತ್ತಿಲ್ಲ.
ಮೈಸೂರಿನಲ್ಲಿರುವ ಕೆಎಸ್ಒಯು ಉಳಿಸಲು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಆರ್ಥಿಕ ಸಮಸ್ಯೆ, ಮಾನ್ಯತೆ ವಿವಾದ ಸೇರಿದಂತೆ ಹತ್ತಾರು ಕಾರಣಗಳಿಂದಾಗಿ ಕೆಎಸ್ಒಯು ಆಡಳಿತ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ.
ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಡೊಲಾಯಮಾನವಾಗಿದೆ ಮತ್ತು ಅರ್ಹರಿಗೆ ಪದವಿ, ಸ್ನಾತಕೋತ್ತರ ಪದವಿಗೆ ಸೇರಿಕೊಳ್ಳಲು ಆಗುತ್ತಿಲ್ಲ. ಅಲ್ಲಿನ ಸಿಬ್ಬಂದಿ ವರ್ಗಕ್ಕೆ ವೇತನವೂ ಸಿಗುತ್ತಿಲ್ಲ. ಈ ಮಧ್ಯೆ ಸರ್ಕಾರ ಕೆಎಸ್ಒಯು ಮುಚ್ಚಲು ಮುಂದಾಗುತ್ತಿದೆ. ಇದನ್ನೆಲ್ಲ ವಿರೋಧಿಸಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ಕಾರ್ಯದರ್ಶಿ ರಾಜೇಶ್ ಗುರಾಣಿ ಹೇಳಿದ್ದಾರೆ.
ಪಾದಯಾತ್ರೆ ಮೈಸೂರು, ಶ್ರೀರಂಗಪಟ್ಟಣ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ ಮಾರ್ಗವಾಗಿ ಬೆಂಗಳೂರಿಗೆ ಬರಲಿದೆ. ಅ.9ರ ಮಧ್ಯಾಹ್ನ ಮೈಸೂರಿನಲ್ಲಿ ಕೆಎಸ್ಒಯು ವಿಶ್ರಾಂತ ಕುಲಪತಿ ಪ್ರೊ.ರಾಮೇಗೌಡ ಪಾದಯಾತ್ರೆಗೆ ಚಾಲನೆ ನೀಡಿದರು. ಅ.13ರಂದು ಬೆಂಗಳೂರಿಗೆ ತಲುಪಲಿದ್ದು, ಫ್ರೀಡಂ ಪಾರ್ಕ್ನಲ್ಲಿ ದೊಡ್ಡ ಮಟ್ಟದ ಸಭೆ ನಡೆಯಲಿದೆ. ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಪಾದಯಾತ್ರೆಯಲ್ಲಿದ್ದಾರೆ ಎಂಬ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.