ಎಸಿಬಿ ದಾಳಿ: ಇನ್ನಷ್ಟು ಭ್ರಷ್ಟಾಚಾರ ಬಯಲು


Team Udayavani, Nov 24, 2021, 11:00 AM IST

BDA

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ)ದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾದ ಬೆನ್ನ ಲ್ಲೇ ಅದರ ಇನ್ನಷ್ಟು ಹುಳುಕು ಹೊರ ತೆಗೆಯಲು ಮುಂದಾಗಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ನಗರದ ನಾಲ್ಕು ಕಡೆಗಳಲ್ಲಿರುವ ಬಿಡಿಎ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮುಂದುವರಿಸಿದೆ.

ಶುಕ್ರವಾರ ಮತ್ತು ಶನಿವಾರ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಮಂಗಳವಾರ ವೈಯಾಲಿಕಾವಲ್‌ ನಲ್ಲಿರುವ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ಆರ್‌.ಟಿ.ನಗರಲ್ಲಿನ ಬಿಡಿಎ ಉತ್ತರ ವಿಭಾಗ ಕಚೇರಿ, ವಿಜಯನಗರದಲ್ಲಿ ಪಶ್ಚಿಮ ವಿಭಾಗ ಕಚೇರಿ, ಎಚ್‌ಎಸ್‌ಆರ್‌ ಲೇಔಟ್‌ನ ಪೂರ್ವ ವಿಭಾಗ ಕಚೇರಿ, ಬನಶಂಕರಿಯಲ್ಲಿನ ದಕ್ಷಿಣ ವಿಭಾಗದ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಲಾಯಿತು.

ಈ ವೇಳೆ ಬಿಡಿಎನಲ್ಲಿ ನಡೆಯುತ್ತಿದ್ದ ಇನ್ನಷ್ಟು ಅಕ್ರಮಗಳು ಬಯಲಾಗಿದ್ದು, ನಿವೇಶನ ಹಂಚಿಕೆಯ ಪ್ರತಿ ಹಂತದಲ್ಲೂ ಲಂಚ ಮತ್ತು ಭ್ರಷ್ಟಾಚಾರ ನಡೆದಿ ರುವುದು ಬೆಳಕಿಗೆ ಬಂದಿದೆ. ದಾಳಿಯ ವೇಳೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನರ್ಹ ವ್ಯಕ್ತಿಗಳಿಗೆ ಪರಿಹಾರ ನೀಡಿರುವುದು. ಬಿಡಿಎ ಅನುಮೋದಿತ ನಕ್ಷೆ ರೀತಿಯಲ್ಲಿ ಕಟ್ಟವನ್ನು ನಿರ್ಮಾಣ ಮಾಡದೆ ಇರುವುದು.

ಇದನ್ನೂ ಓದಿ:- ಜಲಿಯನ್ ವಾಲಾಬಾಗ್ ಎಲ್ಲರಿಗೂ ತಲುಪಲೆಂದೇ ಈ ಸಿನಿಮಾ ಮಾಡಿದ್ದು : ಸೂಜಿತ್ ಸರ್ಕಾರ್

ಹರಾಜು ಪ್ರಕ್ರಿಯೆ ನಡೆಸದೆ ಕಾರ್ನರ್‌ (ಮೂಲೆ) ಸೈಟ್‌ಗಳನ್ನು ಹಂಚಿಕೆ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟವನ್ನುಂಟು ಮಾಡಿರುವುದು ಸೇರಿ ಸಾಲು ಸಾಲು ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಎಸಿಬಿ ತಿಳಿಸಿದೆ. ವಿವಾದಿತ ಅರ್ಕಾವತಿ, ಕೆಂಪೇಗೌಡ ಹಾಗೂ ಶಿವರಾಮ್‌ ಕಾರಂತ್‌ ಬಡಾವಣೆಗಳಲ್ಲಿ ಬಿಡಿಎ ಹಂಚಿಕೆ ಮಾಡಿರುವ ನಿವೇ ಶನಗಳು ಹಾಗೂ ಬಡಾವಣೆಗಾಗಿ ಭೂ ಸ್ವಾಧೀನಕ್ಕಾಗಿ ಪಡೆದಿರುವ ಜಾಗಗಳ ದಾಖಲಾತಿಗಳನ್ನು ಈಗಾಗಲೇ ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ಮೂಲ ದಾಖಲಾತಿಗಳ ಶೋಧ ನಡೆಸುತ್ತಿದ್ದು, ಅಸಲಿ ದಾಖಲಾತಿಗಾಗಿ ಕಂದಾಯ ಇಲಾಖೆಯಿಂದ ಪಡೆಯಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಬಿ.ಜೆ.ಪುಟ್ಟಸ್ವಾಮಿ ಅವರಿಂದಲೂ ದೂರು: ವಿಧಾನಪರಿಷತ್‌ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ ನೀಡಿದ ದೂರಿನ ಆಧಾರದ ಮೇಲೆ ಬಿಡಿಎ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್‌ ದಾಳಿ ಮಾಡಿದ್ದಾರೆ. ಬಿಡಿಎ 3,702 ಎಕರೆ ಜಾಗದಲ್ಲಿ ಅನಧಿಕೃತವಾಗಿ ಬಡಾವಣೆಗಳನ್ನು ನಿರ್ಮಾಣ ಮಾಡಿದೆ. ಭ್ರಷ್ಟಚಾರ ಮಾಡಿ ಕೆಲ ಬಿಡಿಎ ಅಧಿಕಾರಿಗಳು ಕೋಟಿÂಧಿ ಪತಿಗಳಾಗಿದ್ದಾರೆ.

ಈ ಸಂಬಂಧ ಎಸಿಬಿ ಹಿರಿಯ ಅಧಿಕಾರಿಯೊಬ್ಬರಿಗೆ 3-4 ದಿನಗಳ ಹಿಂದೆ ದಾಖಲೆ ಸಮೇತ ದೂರು ನೀಡಿದ್ದೇನೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಂಆರ್‌ ಡಿನಲ್ಲಿ 8,456 ಎಕರೆ ಅನಧಿಕೃತ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ ತಿಳಿಸಿ ದ್ದಾರೆ. ಇದುವರೆಗೂ 40ಕ್ಕೂ ಅಧಿಕ ದೂರುಗಳು ಬಂದಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಸಂತ್ರಸ್ತರು ದೂರು ನೀಡಬಹುದು ಬಿಡಿಎ ಕಚೇರಿಯಲ್ಲಿನ ಅವ್ಯವಹಾರದ ಸಂಬಂಧ ಈಗಾಗಲೇ ಹಲವು ದೂರುಗಳು ಬಂದಿವೆ. ವಂಚನೆಗೊಳಗಾಗಿರುವ ಸಾರ್ವಜನಿಕರಿಗೆ ಬಿಡಿಎ ಕಚೇರಿಯಲ್ಲಿನ ಅವ್ಯಹಾರದ ಕುರಿತು ಎಸಿಬಿ ಕಚೇರಿಗೆ ಆಗಮಿಸಿ ಲಿಖೀತ ದೂರನ್ನು ನೀಡಬಹುದು ಎಂದು ಎಸಿಬಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಇಂದು ಮುಂಜಾನೆ ಆದಾಯಕ್ಕೆ ಮೀರಿದ ಆಸ್ತಿಯ ಆರೋಪದಡಿಯಲ್ಲಿ ಹಲವು ಅಧಿಕಾರಿಗಳ ಮತ್ತು ಅವರ ಸಹಚರರ ಮನೆಗಳಿಗೆ ಏಸಿಬಿ ತನ್ನ ಮೆಗಾ ಬೇಟೆ ಆರಂಭಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.