ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆಗಳ್ಳತನ!


Team Udayavani, Oct 15, 2022, 1:13 PM IST

ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆಗಳ್ಳತನ!

ಬೆಂಗಳೂರು: ಹಗಲಿನಲ್ಲಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆ ಕಳವು ಮಾಡುತ್ತಿದ್ದ ಸಹೋದರರು ಸೇರಿ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರದ ಭುವನೇಶ್ವರಿ ಲೇಔಟ್‌ ನಿವಾಸಿಗಳಾದ ಗುಣಶೇಖರ್‌ ಅಲಿಯಾಸ್‌ ಕೊರಂಗು (21), ಆತನ ಸಹೋದರ ಅಜಿತ್‌ (22), ತಮಿಳುನಾಡಿನ ಧರ್ಮಪುರಿಯ ಮುತ್ತುಕುಮಾರ್‌ (27) ಬಂಧಿತರು. ಆರೋಪಿಗಳಿಂದ 49.17 ಲಕ್ಷ ರೂ. ಮೌಲ್ಯದ 1 ಕೆ.ಜಿ. 92 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಇವರ ಬಂಧನದಿಂದ ಹೆಣ್ಣೂರು ಪೊಲೀಸ್‌ ಠಾಣೆ 8, ಕೊತ್ತನೂರು 3, ರಾಮಮೂರ್ತಿನಗರ, ಯಲಹಂಕ , ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪಿಳಮೇಡು ಪೊಲೀಸ್‌ ಠಾಣೆಯಲ್ಲಿ ತಲಾ 1 ಸೇರಿದಂತೆ ಒಟ್ಟು 14 ಮನೆಗಳವು ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಪಿಗಳು ಹಗಲಿನಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ನಂತರ ಬೀಗ ಮುರಿದು ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚುತ್ತಿದ್ದರು. ನಂತರ ಕದ್ದ ವಸ್ತುಗಳನ್ನು ತಮಿಳುನಾಡು ಹಾಗೂ ಕೇರಳಕ್ಕೆ ಕೊಂಡೊಯ್ದು ಗಿರಾಕಿಗಳನ್ನು ಹುಡುಕಿ, ಕಡಿಮೆ ಬಲೆಗೆ ಮಾರಾಟ ಮಾಡುತ್ತಿದ್ದರು. ಮಾರಾಟ ಮಾಡಿ ಬಂದ ಹಣದಲ್ಲಿ ಮಾದಕ ವಸ್ತು ಸೇವನೆ, ವೇಶ್ಯೆಯರ ಸಹವಾಸಕ್ಕೆ ದುಂದು ವೆಚ್ಚ ಮಾಡುತ್ತಿದ್ದರು. ಹಣ ಖಾಲಿಯಾದ ಬಳಿಕ ಮತ್ತೆ ಮನೆಗಳ್ಳತನಕ್ಕೆ ಇಳಿಯುತ್ತಿದ್ದರು.

ಕದ್ದ ಮೊಬೈಲ್‌ ಬಳಕೆ: ಪೊಲೀಸರಿಗೆ ತಮ್ಮ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಆರೋಪಿಗಳು ಮನೆಗಳ್ಳತನಕ್ಕೆ ಹೋಗುತ್ತಿದ್ದಾಗ ಕದ್ದ ಮೊಬೈಲ್‌ಗ‌ಳನ್ನೇ ಬಳಕೆ ಮಾಡುತ್ತಿದ್ದರು. ಮನೆಗಳ್ಳತನಕ್ಕೂ ಮುನ್ನ ಮೂವರೂ ಗಾಂಜಾ ಸೇವಿಸುತ್ತಿದ್ದರು. ಬಂಧಿತರ ಪೈಕಿ ಪ್ರಮುಖ ಆರೋಪಿ ಗುಣಶೇಖರ್‌ ತನ್ನ 17ನೇ ವಯಸ್ಸಿನಲ್ಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎರಡು ಬಾರಿ ಬಾಲಮಂದಿರಕ್ಕೆ ಸೇರಿ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸಿದ್ದ. ಆತನ ಕೃತ್ಯಗಳಿಗೆ ಸಹೋದರ ಅಜಿತ್‌ ಹಾಗೂ ಸ್ನೇಹಿತ ಮುತ್ತುಕುಮಾರ್‌ ಸಹಕಾರ ನೀಡುತ್ತಿದ್ದರು. ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.