Bengaluru: ಖಾಕಿ ಕಣ್ತಪ್ಪಿಸಲು ತಾರಸಿಯಿಂದ ಜಿಗಿದ ಕೊಲೆ ಆರೋಪಿ ಸಾವು
Team Udayavani, Aug 8, 2024, 10:48 AM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತ್ನಿಯನ್ನು ಭೀಕರವಾಗಿ ಕೊಲೆಗೈದು ಕೋಲಾರದ ತನ್ನ ಚಿಕ್ಕಮ್ಮನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಪತಿಯೊಬ್ಬ ಬಂಧನ ಭೀತಿಯಿಂದ ಮನೆಯ 12 ಅಡಿ ಎತ್ತರದ ಟೆರೆಸ್ನಿಂದ ಜಿಗಿದು ಮೃತಪಟ್ಟಿದ್ದಾನೆ.
ಬೆಂಗಳೂರಿನ ಸಿದ್ದಾ ಪುರದ ಸೋಮೇಶ್ವರ ನಗರ ನಿವಾಸಿ ತಬ್ರೇಜ್ ಪಾಷಾ(37) ಮೃತ ಆರೋಪಿ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ತಬ್ರೇಜ್ ಪಾಷಾ, ಆ.2ರಂದು ಚಾಮರಾಜಪೇಟೆಯ ತನ್ನ ತವರು ಮನೆಯಲ್ಲಿದ್ದ ಪತ್ನಿ ಸೈಯಿದಾ ಫಾಜೀಯಾ ಫಾತೀಮಾ(34) ಅವರನ್ನು ಚಾಕುವಿನಿಂದ ಹತ್ತಾರು ಬಾರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಕೃತ್ಯ ಎಸಗಿದ ಬಳಿಕ ಆರೋಪಿ ತಬ್ರೇಜ್ ಪಾಷಾ, ಕೋಲಾರದಲ್ಲಿ ತಲೆಮರೆಸಿಕೊಂಡಿದ್ದ. ಇತ್ತ ಚಾಮರಾಜಪೇಟೆ ಪೊಲೀಸರು ಆತನ ಪತ್ತೆಗಾಗಿ ಕೋಲಾರದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಆರೋಪಿ ಕೋಲಾರದ ಹೊರವಲಯದಲ್ಲಿರುವ ದರ್ಗಾದಲ್ಲಿ ಆಶ್ರಯ ಪಡೆದುಕೊಂಡಿದ್ದ ಎಂಬುದು ಗೊತ್ತಾಗಿ, ಪೊಲೀಸರು ಹೋಗುವಷ್ಟರಲ್ಲಿ ಸಮೀಪದಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ಅಡಗಿಕೊಂಡಿದ್ದ. ಬಳಿಕ ಪೊಲೀಸರು, ಆತನ ಚಿಕ್ಕಮ್ಮನ ಮನೆ ಬಳಿ ತೆರಳಿದ್ದರು. ಈ ವಿಚಾರ ತಿಳಿದ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮನೆಯ ಟೆರೆಸ್ ಮೇಲೆ ಏರಿ 12 ಅಡಿ ಎತ್ತರದಿಂದ ಜಿಗಿದಿದ್ದು, ಕೆಳಗೆ ಬಿದ್ದ ಆತ ತೀವ್ರ ಅಸ್ವಸ್ಥಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಅಲ್ಲಿಂದ ವರದಿ ಬಂದ ನಂತರ ಘಟನೆಗೆ ನಿರ್ದಿಷ್ಟ ಕಾರಣ ತಿಳಿದು ಬರಲಿದೆ ಎಂದು ಚಾಮರಾಜಪೇಟೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಸೆಲ್ಫಿ ವಿಡಿಯೋ ಮಾಡಿರುವ ಆರೋಪಿ!:
ಈ ನಡುವೆ ತಬ್ರೇಜ್ ಪಾಷಾ, 7 ನಿಮಿಷಗಳ ಸೆಲ್ಫಿà ವಿಡಿಯೋವೊಂದು ಮಾಡಿ ಹರಿಬಿಟ್ಟಿ ದ್ದಾನೆ. ಅದರಲ್ಲಿ ಸೈಯಿದಾ ಫಾಜೀಯಾ ಫಾತೀಮಾಳನ್ನು ಪ್ರೀತಿಸಿ ಮದುವೆಯಾಗಿದ್ದೆ. ಅದಕ್ಕೆ ನಮ್ಮ ತಂದೆ ವಿರೋಧ ಇತ್ತು. ಆದರೂ ಅವರಿಗೆ ಒಪ್ಪಿಸಿ ಮದುವೆ ಮಾಡಿಕೊಂಡೆ. ಆದರೆ, ಪತ್ನಿ ಮತ್ತು ಆಕೆಯ ಮನೆಯವರು ನನಗೆ ಸಾಕಷ್ಟು ಅವಮಾನ ಮಾಡಿದರು. ಪತ್ನಿ ಕೂಡ ನನ್ನ ಬಿಟ್ಟು ತವರು ಮನೆ ಸೇರಿಕೊಂಡಳು. ಆದರೂ ಆಕೆಗೆ ವಾಪಸ್ ಮನೆಗೆ ಬರುವಂತೆ ಕೇಳಿಕೊಂಡೆ, ಆದರೆ, ಆಕೆ ಬರಲಿಲ್ಲ. ಮನೆಯ ಲ್ಲಿದ್ದ ಚಿನ್ನಾಭರಣವನ್ನು ಆಕೆ ಕೊಂಡೊ ಯ್ದಿದ್ದಾಳೆ. ನಾನು ಮಾಡುತ್ತಿರುವುದು ತಪ್ಪು ಎಂಬುದು ಗೊತ್ತು. ಬದುಕಲು ನನಗೂ ಇಷ್ಟವಿಲ್ಲ ಎಂದು ಹೇಳಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ ತಬ್ರೇಜ್ ಪಾಷಾ, ಆತ್ಮಹತ್ಯೆಗೂ ಮೊದಲು ಈ ವಿಡಿಯೋ ಮಾಡಿರುವ ಸಾಧ್ಯತೆಯಿದೆ. ತನಿಖೆ ನಡೆಯು ತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.