![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 7, 2020, 9:17 AM IST
ಬೆಂಗಳೂರು: ಉಸಿರಾಟ ಸಮಸ್ಯೆ ಕಾಣಿಸಿಕೊಳ್ಳುವ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 18,145 ಆಕ್ಸಿಜನ್ ಸೌಲಭ್ಯದ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 9,094 ಹಾಸಿಗೆ, ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ 8,490 ಹಾಸಿಗೆ ಸೇರಿ ಒಟ್ಟು 18,145 ಹಾಸಿಗೆಗಳಿಗೆ ಆಕ್ಸಿಜನ್ ಸೌಲಭ್ಯ ಕಲ್ಪಿಸಲಾಗಿದೆ. ಉಸಿರಾಟದ ಸಮಸ್ಯೆ ಉಂಟಾಗುವ ಕೋವಿಡ್ ಸೋಂಕಿತರಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಜುಲೈನಿಂದ ಸೋಂಕಿತರ ಸಂಖ್ಯೆಹೆಚ್ಚಾಗುತ್ತಿದ್ದರೂ ಸಾವಿನ ಪ್ರಮಾಣ ದೇಶದ ಇತರೆ ರಾಜ್ಯಗಳಿಗಿಂತ ಬಹಳಷ್ಟು ಕಡಿಮೆ ಇದೆ. ಸೋಂಕಿತರ ಪೈಕಿ ದೆಹಲಿಯಲ್ಲಿ ಪ್ರತಿ 10 ಲಕ್ಷ ಜನರಿಗೆ 204 ಮಂದಿ ಸಾವನ್ನಪ್ಪಿದ್ದರೆ, ಮಹಾರಾಷ್ಟ್ರದಲ್ಲಿ 134, ತಮಿಳುನಾಡಿನಲ್ಲಿ 58, ಪಾಂಡಿಚರಿಯಲ್ಲಿ 43 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಆದರೆ, ಕರ್ನಾಟಕದಲ್ಲಿ ಪ್ರತಿ 10 ಲಕ್ಷ ಜನರಿಗೆ 42 ಮಂದಿ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.
ವಾರದಲ್ಲಿ ಶೇ.11 ರಷ್ಟು ಗುಣಮುಖ ದರ ಹೆಚ್ಚಳ: ಜು.30 ರಂದು ರಾಜ್ಯದ ಗುಣಮುಖರ ಪ್ರಮಾಣ ಶೇ.39.36 ಮತ್ತು ಬೆಂಗಳೂರಿನಲ್ಲಿ ಶೇ.29.51 ರಷ್ಟಿತ್ತು. ಒಂದೇ ವಾರದಲ್ಲಿ ರಾಜ್ಯದಲ್ಲಿ ಶೇ.11.37 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ.20.75 ರಷ್ಟು ಹೆಚ್ಚಳವಾಗಿದೆ ಸಚಿವರು ಮಾಹಿತಿ ನೀಡಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.