ನಟ ದುನಿಯಾ ವಿಜಯ್‌ ಬಂಧನ, ಬಿಡುಗಡೆ​​​​​​​


Team Udayavani, Jun 9, 2018, 7:00 AM IST

actor-duniya-vijay.jpg

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್‌ರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು-ಕರ್ನಾಟಕ ಗಡಿ ಭಾಗದ ಬಂಡಿಪುರ ಸಮೀಪದ ರೆಸಾರ್ಟ್‌ ವೊಂದರಲ್ಲಿ ತಂಗಿದ್ದ ವಿಜಯ್‌ರನ್ನು ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ನಿರೀಕ್ಷಣಾ ಜಾಮೀನು ಪಡೆದ ವಿಜಯ್‌ಗೆ ಕಾನೂನು ಪ್ರಕ್ರಿಯೆ ಮುಗಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ವಿಜಯ್‌ ಯಾರ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿದ್ದರು.
ಮತ್ತೂಂದೆಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ತೀರ್ಪನ್ನು ಕೋರ್ಟ್‌ ಶುಕ್ರವಾರಕ್ಕೆ ಕಾಯ್ದಿರಿಸಿತ್ತು. ಕೋರ್ಟ್‌ ತೀರ್ಪಿಗೂ ಮುನ್ನವೇ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯ್‌ರನ್ನು ಬಂಧಿಸಿದ್ದರು.
2016ರಲ್ಲಿ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ “ಮಾಸ್ತಿಗುಡಿ’ ಸಿನಿಮಾ ಚಿತ್ರೀಕರಣದ ವೇಳೆ ಖಳನಟರಾದ ಉದಯ್‌ ಮತ್ತು ಅನಿಲ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ನಿರ್ಮಾಪಕ ಸುಂದರ್‌ ಪಿ.ಗೌಡರ ಮೇಲೆ ರಾಮನಗರ ಜೆಎಂಎಫ್ಸಿ ಕೋರ್ಟ್‌ ವಾರೆಂಟ್‌ ಜಾರಿ ಮಾಡಿತ್ತು. ಹೀಗಾಗಿ ತಾವರೆಕೆರೆ ಪೊಲೀಸರು ನಿರ್ದೇಶಕ
ಸುಂದರ್‌ ಪಿ. ಗೌಡನನ್ನು ಬಂಧಿಸಲು ಮೇ 30ರ ತಡರಾತ್ರಿ ನಗರಕ್ಕೆ ಬಂದಿದ್ದರು. ಆದರೆ,ಈ ವಿಚಾರ ತಿಳಿದ ವಿಜಯ್‌, ಸುಂದರ್‌ ಗೌಡರನ್ನು ಬಂಧಿಸದಂತೆ ಪೊಲೀಸರನ್ನು ತಡೆದಿದ್ದರು. ಆಗ ಸುಂದರ್‌ ಮನೆಯ ಹಿಂಬಾಗಿಲಿಂದ ಪರಾರಿಯಾಗಿದ್ದರು.

ಅಲ್ಲದೆ, ಸುಂದರ್‌ ಗೌಡ ತಾಯಿಗೆ ಅನಾರೋಗ್ಯ ಸಮಸ್ಯೆಯಿದೆ. ಮರುದಿನ ತಾವೇ ಠಾಣೆಗೆ ಕರೆತರುವುದಾಗಿ ವಿಜಯ್‌ ಮಧ್ಯಸ್ಥಿಕೆ ವಹಿಸಿದ್ದರು. ಖುದ್ದು ಠಾಣೆಗೆ ಕರೆತರುವುದಾಗಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದರು.

ಹೀಗಾಗಿ ತಾವರೆಕೆರೆ ಹೆಡ್‌ಕಾನ್‌ಸ್ಟೆಬಲ್‌ ಗೋವಿಂದರಾಜು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟಾಪ್ ನ್ಯೂಸ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.