ಗೌರವಯುತ ಜೀವನಕ್ಕೆ ವೃದ್ಧಾಶ್ರಮಗಳು ಅನಿವಾರ್ಯ
Team Udayavani, Jun 7, 2017, 1:31 PM IST
ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳು ಬದಲಾಗುತ್ತಿರುವ ಸನ್ನಿವೇಶದಲ್ಲಿ ಬದುಕಿನ ಮುಸ್ಸಂಜೆಯಲ್ಲಿರುವ ವೃದ್ಧರಿಗೆ ಗೌರವಯುತ ಜೀವನ ನಡೆಸಲು ವೃದ್ಧಾಶ್ರಮಗಳು ಅನಿವಾರ್ಯವಾಗಿವೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.
ಅವರು ನಿರ್ಮಾಣ್ ಶೆಲ್ಟರ್ಸ್ ಆಶ್ರಯದ ವಿಎಲ್ಎನ್ ಪ್ರಬುದ್ಧಾಲಯದ 9ನೇ ವಾರ್ಷಿಕೋತ್ಸವದ ಪ್ರಯುಕ್ತ ನಿಸರ್ಗ ಬಡಾವಣೆಯ ಪ್ರಬುದ್ಧಾಲಯ ನಿವಾಸಿಗಳಿಗೆ 2017ರ “ವಿಎಲ್ಎನ್ ಹಿರಿಯ ನಾಗರಿಕರ ಆಜೀವ ಸಾಧನಾ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.
ವೃದ್ಧಾಶ್ರಮಗಳಿಗೆ ಕುಟುಂಬದ ಹಿರಿಯ ಜೀವಗಳನ್ನು ಕಳುಹಿಸುವುದು ಸರಿ ಅಥವಾ ತಪ್ಪು ಎಂದು ಪರಾಮರ್ಶೆ ಮಾಡುವುದಕ್ಕಿಂತ ಬದುಕಿನ ವಾಸ್ತವಗಳನ್ನು ಅರಿತುಕೊಳ್ಳಬೇಕಾಗಿದೆ. ವೃದ್ಧಾಶ್ರಮಗಳು, ವೃದ್ಧಾಲಯಗಳ ಬಗ್ಗೆ ಚರ್ಚೆ ನಡೆದಾಗಲೆಲ್ಲ “ಕಾಲ ಕೆಟ್ಟು ಹೋಯಿತು ಎಂಬ ಟೀಕೆ ಕೇಳಿ ಬರುತ್ತದೆ. ಆದರೆ, ಕಾಲ ಕೆಟ್ಟು ಹೋಗಿಲ್ಲ ಎಂಬುದಕ್ಕೆ ನಿರ್ಮಾಣ್ ಸಂಸ್ಥೆ ನಿರ್ಮಿಸಿರುವ ಪ್ರಬುದ್ಧಾಲಯವೇ ಉದಾಹರಣೆ ಎಂದರು.
ಪ್ರಶಸ್ತಿ ಪಡೆದ ಹಿರಿಯರಲ್ಲಿ 80, 90 ವರ್ಷ ಮೀರಿದವರು ಇರುವುದು ಹಾಗೂ ಅಷ್ಟೇ ಜೀವನೋತ್ಸಾಹ ಹೊಂದಿರುವುದು ಹೆಮ್ಮೆಯ ಸಂಗತಿ. ಈ ಬದಲಾವಣೆಯನ್ನು ಗೌರವಿಸುವ ಜತೆ ಹಿರಿಯರಿಗೆ ಇಂತಹ ಅವಕಾಶ ಕಲ್ಪಿಸಿದ ವಿ. ಲಕ್ಷಿನಾರಾಯಣ್ ಅವರು ಅಭಿನಂದನೆಗೆ ಅರ್ಹರಷ್ಟೇ ಅಲ್ಲ ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾ ಸಿದರು.
ಈ ವೇಳೆ ಪ್ರಬುದ್ಧಾಲಯ ನಿವಾಸಿಗಳಾದ ಟಿ.ಎಂ. ರಾಮಾಚಾರ್, ಡಾ.ಎನ್. ಬಾಲಸುಬ್ರಮಣಿಯನ್ ದಂಪತಿ, ಎಸ್.ಕೆ. ಅಶ್ವತ್ಥನಾರಾಯಣ್, ಫಿಲಾರ್ ಭವಾನಿಶಂಕರ್ ದಂಪತಿ, ಲಕ್ಷಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಸ್ಕೃತರಿಗೆ ತಲಾ 10 ಸಾವಿರ ರೂ. ನಗದು, ಸ್ಮರಣ ಫಲಕ ನೀಡಲಾಯಿತು.
ಸಮಾರಂಭದಲ್ಲಿ ನಿರ್ಮಾಣ್ ಸಮೂಹ ಸಂಸ್ಥೆ ಸಂಸ್ಥಾಪಕ ವಿ. ಲಕ್ಷಿನಾರಾಯಣ್, ಹಿರಿಯ ವಕೀಲ ಎಸ್.ಎಂ. ಪಾಟೀಲ್, ನಿವೃತ್ತ ಪ್ರಾಂಶುಪಾಲ ಪೊ. ನಾರಾಯಣ ಮಾದಾಪುರ್, ಪ್ರಬುದ್ಧಾಲಯದ ಸಿಇಒ ಸುಷ್ಮಾ ಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.