ದತ್ತು ಸ್ವೀಕಾರ ಸರಳಗೊಳಿಸಲು ಸಲಹೆ


Team Udayavani, Nov 26, 2018, 12:26 PM IST

datthu.jpg

ಬೆಂಗಳೂರು: ಭಾರತದಲ್ಲಿ ದತ್ತು ಸ್ವೀಕಾರದ ಪ್ರಕ್ರಿಯೆಗಿರುವ ಕಾನೂನನ್ನು ಸರಳಗೊಳಿಸಿದರೆ ಹಲವು ಅನಾಥ ಮಕ್ಕಳಿಗೆ ತಂದೆ ತಾಯಿಯ ಪ್ರೀತಿ, ವಾತ್ಸಲ್ಯ ಸಿಗಲಿದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಪಾರ್ಥಸಾರಥಿ ತಿಳಿಸಿದರು.

ನಗರದ ಬಸವನಗುಡಿಯ ಬಿಎಂಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಭಾನುವಾರ ನಡೆದ ಅನಾಥ ಶಿಶು ನಿವಾಸದ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಭಾರತದಲ್ಲಿ ಒಟ್ಟು 30 ದಶಲಕ್ಷ ಅನಾಥ ಮಕ್ಕಳಿದ್ದಾರೆ. ಅವರನ್ನು ದತ್ತು ತೆಗೆದುಕೊಳ್ಳಲು ಪೋಷಕರು ಆಸಕ್ತಿ ತೋರುತ್ತಿಲ್ಲ. ಕಾನೂನಿನ ಕ್ಲಿಷ್ಟತೆಯನ್ನು ನಿವಾರಿಸಿ ಸರಳಗೊಳಿಸಿದರೆ ಅನಾಥ ಮಕ್ಕಳಿಗೂ ಪೋಷಕರ ಪ್ರೀತಿ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಭಾರತ‌ ಎಲ್ಲ ಕ್ಷೇತ್ರಗಳಲ್ಲೂಅಗಾಧ ಸಾಧನೆ ಮಾಡುತ್ತಿದೆ. ತನ್ನದೇ ಆದ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯಿಂದ ಜಗತ್ತಿನಲ್ಲಿ ವಿಶೇಷವಾದ ಸ್ಥಾನಮಾನ ಹೊಂದಿರುವ ಭಾರತದ ಸಾಧನೆ ದೊಡ್ಡದು. ವಿಜ್ಞಾನ, ಸಂಶೋಧನೆ, ಕಲೆ, ಪರಂಪರೆಯಲ್ಲಿ ಮಹತ್ತರ ಸಂಶೋಧನೆ ನಡೆಸುತ್ತ ನಮ್ಮ ರಾಷ್ಟ್ರ ಮುಂದುವರಿಯುತ್ತಿದೆ. ಭಾರತದಲ್ಲಿ ಕೆಳಮಟ್ಟದಲ್ಲಿರುವ ವ್ಯಕ್ತಿಯೂ ಉನ್ನತ ಮಟ್ಟ ತಲುಪಬಹುದು. ಅಂತಹ ಅವಕಾಶಗಳನ್ನು ಈ ದೇಶ ನಮಗೆ ನೀಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರ ಸಹಕಾರ್ಯವಾಹ ನಾ.ತಿಪ್ಪೇಸ್ವಾಮಿ ಮಾತನಾಡಿ, ಹಳ್ಳಿಯಲ್ಲಿ ಅನಕ್ಷರಸ್ಥರಾಗಿದ್ದ ತಾಯಂದಿರೂ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ತುಂಬಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವಗಳನ್ನು ನಿರ್ಮಿಸುತ್ತಿದ್ದರು. ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡುವ ಜವಾಬ್ದಾರಿ ತಾಯಂದಿರ ಮೇಲಿರುತ್ತದೆ. ಹೀಗಾಗಿಯೇ ಭಾರತದಲ್ಲಿ ತಾಯಂದಿರಿಗೆ ಉನ್ನತ ಸ್ಥಾನ ಮತ್ತು ಗೌರವ ನೀಡಲಾಗುತ್ತದೆ ಎಂದು ಹೇಳಿದರು.

ಪ್ರಕೃತಿ ತನಗಾಗಿ ಬದುಕುವುದಿಲ್ಲ. ಇತರಿಗಾಗಿಯೇ ಜೀವನ ಮುಡಿಪಾಗಿಡುತ್ತದೆ. ಅಂತೆಯೇ ಮನುಷ್ಯರು ಕೂಡ ತಮ್ಮ ಜೀವನವನ್ನು ಅನ್ಯರಿಗಾಗಿ ಮೀಸಲಿಟ್ಟರೆ ಅವರ ಬದುಕು ಸುಂದರವಾಗಿರಲಿದೆ. ಅವಕಾಶ ವಂಚಿತರು, ಸೌಲಭ್ಯಗಳಿಂದ ದೂರ ಉಳಿದವರನ್ನು ಗುರುತಿಸಿ ಅವರಿಗೆ ನೆರವಾಗುವುದರ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಧನ್ಯತೆಗಾಗಿ ಕೆಲಸ ಮಾಡಿದರೆ ಶ್ರೇಷ್ಠವಾಗಿರುತ್ತದೆ ಎಂದು ತಿಳಿಸಿದರು.

ಅನಾಥ ಶಿಶುನಿವಾಸದ ಅಧ್ಯಕ್ಷ ಸಿ.ವಿ.ವೆಂಕಟಕೃಷ್ಣ ಮಾತನಾಡಿ, ಅನಾಥ ಶಿಶುನಿವಾಸದ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ. ಅನಾಥ ಬದಲಿಗೆ ಅಮೃತ ಶಿಶುನಿವಾಸ ಎಂದು ಹೆಸರಿಡಲು ಕಾರ್ಯಕಾರಿ ಮಂಡಳಿ ತೀರ್ಮಾನಿಸಿದೆ ಎಂದು ತಿಳಿಸಿದರು. ಕಳೆದ 16 ವರ್ಷಗಳಿಂದ ಅನಾಥ ಶಿಶುನಿವಾಸದ ಮಕ್ಕಳಿಗೆ ಉಚಿತವಾಗಿ ಕೌರ ಮಾಡುತ್ತಿರುವ ಗಿರೀಶ್‌ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.