ಫಲಿತಾಂಶದ ನಂತರ ದೂರವಾಗಲಿದೆ ಬಿಜೆಪಿ ಭ್ರಮೆ
Team Udayavani, Apr 10, 2017, 11:59 AM IST
ಕೆ.ಆರ್.ಪುರ: ಉತ್ತರಪ್ರದೇಶ ಚುನಾವಣೆಯಲ್ಲಿ ಗೆದ್ದಂತೆ ರಾಜ್ಯದಲ್ಲೂ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ಯ ಸಚಿವ ಎಚ್.ಕೆ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಕೆಆರ್ ಪುರ ಕ್ಷೇತ್ರದ ಚೇಳಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ “ನಾರ್ತ್ ಬೆಂಗಳೂರು’ ಅಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, “ಬಿಜೆಪಿ ನಾಯಕರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಎತ್ತರದ ಧ್ವನಿಯಲ್ಲಿ ಗುಟುರು ಹಾಕುತ್ತಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಸೋಲುವ ಮೂಲಕ ಬಿಜೆಪಿ ಭ್ರಮೆಯಿಂದ ಹೊರಬರಲಿದೆ,’ ಎಂದು ಕುಟುಕಿದರು.
“ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲವು ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ವಿಶೇಷ ಒತ್ತುನೀಡಿ ಕಾರ್ಯರೂಪಕ್ಕೆ ತಂದಿರುವ ಹಲವು ಜನರಪರ ಯೋಜನೆಗಳು ಜನರ ಮನ್ನಣೆ ಗಳಿಸಿವೆ. ಜನರು ಕಾಂಗ್ರೆಸ್ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಬಿಜೆಪಿ ನಾಯಕರ ಅಪಪ್ರಚಾರದ ಮಾತುಗಳನ್ನು ಜನತೆ ತಿರಸ್ಕರಿಸಿದ್ದಾರೆ,’ ಎಂದರು.
ಚೇಳಕೆರೆಯಲ್ಲಿ ಸ್ಥಾಪನೆಯಾಗಿರುವ “ನಾರ್ತ್ ಬೆಂಗಳೂರು’ ಅಸ್ಪತ್ರೆ ಅತ್ಯಾಧುನಿಕ ತಂತ್ರಜಾnನ ಹಾಗೂ ಸುಸುಜ್ಜಿತ ವ್ಯವಸ್ಥೆಯಿಂದ ಕೂಡಿದೆ. ಅಸ್ಪತ್ರೆಯಲ್ಲಿ ಮಕ್ಕಳ ಘಟಕ, ಡಯಾಲಿಸಿಸ್ ಕೇಂದ್ರ ಸೇರಿದಂತೆ ನಾನಾ ಸವಲತ್ತುಗಳಿದ್ದು, ನಾಗರಿಕರಿಗೆ ನೆರವಾಗಲಿದೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.