Agarbatti business: ಹೂವಿನ ತ್ಯಾಜ್ಯ ಈಗ “ಪರಿಮಳ ಬೀರುವ ಅಗರಬತ್ತಿ


Team Udayavani, Nov 29, 2023, 11:06 AM IST

Agarbatti business: ಹೂವಿನ ತ್ಯಾಜ್ಯ ಈಗ “ಪರಿಮಳ ಬೀರುವ ಅಗರಬತ್ತಿ

ಬೆಂಗಳೂರು: ಹೂವಿನ ತ್ಯಾಜ್ಯದಲ್ಲಿ ಪರಿಮಳ ಬೀರುವ ಅಗರಬತ್ತಿ ತಯಾರಿಸುವ ಮೂಲಕ ಬೆಳಗಾವಿ ನಗರ ಪಾಲಿಕೆ ಬಿಬಿಎಂಸಿ ಸೇರಿದಂತೆ ಇತರೆ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾದರಿ ಆಗಿದೆ.

ನಗರಾಭಿವೃದ್ಧಿ ಇಲಾಖೆ ಅರಮನೆ ಮೈದಾನ ದಲ್ಲಿ ಆರಂಭಿಸಿರುವ ಮೂರು ದಿನಗಳ “ಮುನಿಸಿ ಪಾಲಿಕಾ-2023′ ಪ್ರದರ್ಶನ ಮೇಳದಲ್ಲಿ ಹೂವಿನ ತ್ಯಾಜ್ಯದಿಂದ ತಯಾರಿಸಿದ್ದ ಸುವಾಸನೆ ಭರಿತ ಅಗರಬತ್ತಿಗಳು ಗಮನ ಸೆಳೆಯುತ್ತಿವೆ. ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರ ಜೊತೆ ತಯಾರಿಸುತ್ತಿರುವ ಈ ಅಗರಬತ್ತಿಗಳು ಸಾರ್ವಜನಿಕರ ಮೆಚ್ಚುಗೆ ಪಡೆದಿವೆ.

ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಹೂ ಮಾರುಕಟ್ಟೆಗಳಲ್ಲಿ ಪ್ರತಿದಿನ ನೂರಾರು ಕೆ.ಜಿ. ಹೂವಿನ ತ್ಯಾಜ್ಯ ಸಂಗ್ರಹವಾಗುತ್ತದೆ. ಅದೆಲ್ಲ ಈಗ ಗೊಬ್ಬರ ಆಗುತ್ತಿದೆ. ಇದನ್ನು ಮನಗಂಡ ಬೆಳಗಾವಿ ಪಾಲಿಕೆ ಪರಿಸರ ಎಂಜಿನಿಯರ್‌ ಹನುಮಂತ್‌ ಕಲಾದಗಿ ಅವರ ಮುಂದಾಲೋಚನೆ ಫ‌ಲವಾಗಿ ನಿತ್ಯ 500 ಕೆ.ಜಿ. ಹೂವಿನ ತ್ಯಾಜ್ಯ ಅಗರಬತ್ತಿಗೆ ಬಳಕೆಯಾಗುತ್ತಿದೆ.

ದಿನಕ್ಕೆ 500 ಕೆ.ಜಿ. ತ್ಯಾಜ್ಯ ಉತ್ಪತ್ತಿ: ಬೆಳಗಾವಿ ಅಶೋಕ ನಗರದಲ್ಲಿರುವ ಸಗಟು ಹೂವಿನ ಮಾರುಕಟ್ಟೆ ಒಂದರಿಂದಲೇ ದಿನಕ್ಕೆ 500 ಕೆ.ಜಿ.ಗೂ ಹೆಚ್ಚು ಹೂವಿನ ತ್ಯಾಜ್ಯ ಉತ್ಪತ್ತಿ ಆಗುತ್ತದೆ. ಅದನ್ನು ಅದೇ ಸ್ಥಳದಲ್ಲಿ ಒಣಗಿಸಿ ಪುಡಿ ಮಾಡಲಾಗುತ್ತದೆ. ನಂತರ, ಇತರೆ ಪದಾರ್ಥ ಸೇರಿಸಿ ಅಗರಬತ್ತಿ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಪಾಲಿಕೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಮೊದಲು ಐದು ಕೆ.ಜಿ. ಹೂವು ಒಣಗಿಸಿ ಕೆಮಿಕಲ್‌ ಬಳಸಿ ಅಗರಬತ್ತಿ ತಯಾರಿಸಿದೆ: ನಾನು ಮೂಲತಃ ಕೆಮಿಕಲ್‌ ಎಂಜಿನಿಯರ್‌. ಮಾರುಕಟ್ಟೆಯಲ್ಲಿ ಪ್ರತಿ ದಿನ ಸಾವಿರಾರು ಕೆ.ಜಿ. ಹೂವಿನ ತ್ಯಾಜ್ಯ ಹಾಳಾಗುತ್ತಿರುವುದನ್ನು ಕಂಡು, ಅದರಲ್ಲಿ 5 ಕೆ.ಜಿ. ಹೂ ಒಣಗಿಸಿ ಪರಿಮಳ ಭರಿತ ಪುಡಿ ತಯಾರಿಸಿದೆ. ನಂತರ ನಾನೇ ಕೆಲವು ಕೆಮಿಕಲ್‌ಗ‌ಳನ್ನು ಬಳಸಿ ಅಗರಬತ್ತಿ ತಯಾರಿಸಿದೆ. ಪ್ರಾಯೋಗಿಕವಾಗಿ ಯಶಸ್ವಿ ಪಡೆದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಪರಿಸರ ಎಂಜಿನಿಯರ್‌ ಹನುಮಂತ್‌ ಕಲಾದಗಿ ಹೇಳಿದರು.

ಎರಡು ಯಂತ್ರಗಳು ಮತ್ತು ಶೆಡ್‌ ಸೇರಿ 1.5 ಲಕ್ಷ ರೂ. ಖರ್ಚಾಯಿತು. ಈ ಯಶಸ್ಸಿನ ಬಳಿಕ ಹೂ ಒಣಗಿಸಿ ಪುಡಿ ಮಾಡುವ ಪ್ರಕ್ರಿಯೆಯನ್ನು ಈಗ ಸ್ಥಳೀಯ ಸ್ತ್ರೀಶಕ್ತಿ ಸಂಘಕ್ಕೆ ವಹಿಸಲಾಗಿದೆ. ಪ್ರತಿನಿತ್ಯ 300 ರಿಂದ 500 ಕೆ.ಜಿ. ಹೂವಿನ ತ್ಯಾಜ್ಯ ಸಂಗ್ರಹವಾಗುತ್ತಿದೆ. 50 ಕೆ.ಜಿ. ಹೂವಿನ ಪುಡಿ ತಯಾರು ಮಾಡಲಾಗುತ್ತಿದೆ. ಇದರಿಂದಾಗಿ ಅಲ್ಲಿ ಕೆಲಸ ಮಾಡುತ್ತಿರುವ ನಾಲ್ಕೈದು ಮಹಿಳೆಯರು ತಿಂಗಳಿಗೆ 10 ರಿಂದ 15 ಸಾವಿರ ರೂ. ಗಳಿಸುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿ ಮೂಲದ ಖಾಸಗಿ ಅಗರಬತ್ತಿ ಸಂಸ್ಥೆ ಹೂವಿನ ಪುಡಿ ಖರೀದಿಸುತ್ತಿದೆ. ಹಲವು ಅಗರಬತ್ತಿ ಸಂಸ್ಥೆಗಳು ಕೂಡ ಒಣ ಹೂವಿನ ಪುಡಿ ಖರೀದಿಗೆ ಮುಂದೆ ಬಂದಿವೆ ಎಂದು ತಿಳಿಸಿದರು.

ಯಲ್ಲಮ್ಮ ದೇಗುಲ ಆವರಣದಲ್ಲಿ ಘಟಕ: ಈ ಯೋಜನೆ ಅನುಷ್ಠಾನಗೊಳಿಸಿದ ನಂತರ ಹಲವು ದೇಗುಲದ ಅಧಿಕಾರಿಗಳು ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ. ಸವದತ್ತಿಯ ಯಲ್ಲಮ್ಮ ದೇವಸ್ಥಾನದ ಅಧಿಕಾರಿಗಳೂ ಸಂಪರ್ಕಿಸಿದ್ದಾರೆ. ಸವದತ್ತಿ ದೇವಸ್ಥಾನದಲ್ಲಿ ಟನ್‌ಗಟ್ಟಲೆ ಹೂವಿನ ತ್ಯಾಜ್ಯ ಉತ್ಪತ್ತಿ ಆಗುತ್ತಿದೆ. ಅಲ್ಲಿ ಘಟಕ ನಿರ್ಮಿಸಿ, ಮಂಡಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಬೆಳಗಾವಿ ಪಾಲಿಕೆಯ ಪರಿಸರ ಅಭಿಯಾಂತರ ಅದಿಲ್‌ ಖಾನ್‌ ಹೇಳುತ್ತಾರೆ.

-ದೇವೇಶ ಸೂರಗುಪ್ಪ

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.