Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ


Team Udayavani, Oct 17, 2024, 10:19 AM IST

3

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ಬೆಂಗಳೂರು ನಗರ ಮತ್ತು ಹೊರಭಾಗದ ಪ್ರಮುಖ ಜಾಗಗಳಿಗೆ ಏರ್‌ ಟ್ಯಾಕ್ಸಿ ಸೇವೆ ನೀಡುವ ಬಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್‌) ಮತ್ತು ಸರ್ಲಾ ಏವಿಯೇಷನ್‌ ಮಧ್ಯೆ ಸಹಭಾಗಿತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ನಗರದ ಕೇಂದ್ರ ಭಾಗದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಕೆಐಎಯನ್ನು ತಲುಪಲು, ಹಾಗೆಯೇ ಕೆಐಎನಿಂದ ದಟ್ಟ ಟ್ರಾಫಿಕ್‌ ನಡುವೆ ನಗರಕ್ಕೆ ಅಥವಾ ಇನ್ನಿತರ ಪ್ರಮುಖ ಐಟಿ ಹಬ್‌, ವ್ಯವಹಾರ ಕೇಂದ್ರಗಳಾದ ಎಲೆಕ್ಟ್ರಾನಿಕ್‌ ಸಿಟಿ, ವೈಟ್‌ ಫೀಲ್ಡ್‌, ಕೋರಮಂಗಲ, ಇಂದಿರಾನಗರ ಮುಂತಾ ದೆಡೆ ತಲುಪಲು ಪ್ರಯಾಣಿಕರು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳುವುದು ಸಾಮಾನ್ಯ. ಇದರಿಂದಾಗಿ ವ್ಯವಹಾರ ನಿಮಿತ್ತ ನಗರಕ್ಕೆ ಆಗಮಿಸುವ ಮತ್ತು ತುರ್ತಾಗಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಾದ ಸಂದರ್ಭದಲ್ಲಿ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವ ಪ್ರಸಂಗ ಬೆಂಗಳೂರಿಗರಿಗೆ ಹೊಸದಲ್ಲ. ಈ ಸಮಸ್ಯೆಗೆ ಸ್ಪಂದಿಸಲು ನಗರದ ಹಲವು ಭಾಗಗಳಿಗೆ ಏರ್‌ ಟ್ಯಾಕ್ಸಿ (ಹೆಲಿಕಾಫ್ಟರ್‌ ಸೇವೆ) ಆರಂಭಿ ಸಲು ಸರ್ಲಾ ಏವಿಯೇಷನ್‌ ಸಂಸ್ಥೆಯು ಮುಂದೆ ಬಂದಿ ದ್ದು ಬಿಐಎಎಲ್‌ ಜೊತೆ ಒಪ್ಪಂದ ಮಾಡಿಕೊಂಡಿದೆ.

ನಗರದ ಪ್ರಮುಖ ಐಟಿ ಮತ್ತಿತ್ತರ ಉದ್ದಿಮೆ ತಾಣವಾದ ಎಲೆಕ್ಟ್ರಾನಿಕ್‌ ಸಿಟಿಯಿಂದ ಕೆಐಎಗೆ ಹೆಲಿಕಾಪ್ಟರ್‌ನಲ್ಲಿ ಗರಿಷ್ಠ 19 ನಿಮಿಷದಲ್ಲಿ ಪ್ರಯಾಣಿಸಬಹುದು. ಅದೇ ರಸ್ತೆ ಮಾರ್ಗದಲ್ಲಿ ಒಂದೂವರೆ ಗಂಟೆಯಿಂದ ಎರಡು ಗಂಟೆ ಸಮಯ ಟ್ರಾಫಿಕ್‌ ದಟ್ಟಣೆಯ ಅವಧಿಯಲ್ಲಿ ಬೇಕಾಗುತ್ತದೆ. ನಗರದ ಬೇರೆ ಭಾಗಗಳಿಂದ ರಸ್ತೆ ಮಾರ್ಗದಲ್ಲಿ ಕನಿಷ್ಠ ಒಂದು ಗಂಟೆ ತೆಗೆದುಕೊಳ್ಳುವ ಪ್ರಯಾಣ ವನ್ನು ಹೆಲಿಕಾಪ್ಟರ್‌ ಮೂಲಕ 15 ನಿಮಿಷದಲ್ಲಿ ಮುಗಿಸಬಹುದು. ಇಂದಿರಾ ನಗರದಿಂದ ಕೆಐಎಗೆ ರಸ್ತೆ ಮಾರ್ಗದಲ್ಲಿ ಒಂದೂವರೆ ಗಂಟೆ ತೆಗೆದುಕೊಳ್ಳುವ ಪ್ರಯಾಣವನ್ನು ಏರ್‌ ಟ್ಯಾಕ್ಸಿ ಯ ಮೂಲಕ 5 ನಿಮಿಷದಲ್ಲಿ ಮುಗಿಸಬಹುದು ಎಂದು ಸರ್ಲಾ ಏವಿಯೇಷನ್‌ ಹೇಳುತ್ತದೆ.

ಇಷ್ಟೊಂದು ಸಮಯ ಪ್ರಯಾಣದಲ್ಲಿ ವ್ಯರ್ಥವಾಗು ವುದರ ಜೊತೆಗೆ ಅಗ್ರಿಗೇಟರ್‌ಗಳಲ್ಲಿನ ಪ್ರೀಮಿ ಯಂ ಕಾರುಗಳ ದರ ಸಹ ಅನೇಕ ಸಂದರ್ಭದಲ್ಲಿ 2 ಸಾವಿರ ರೂ. ದಾಟುವುದಿದೆ. ಹಾಗಾಗಿ 2 ಸಾವಿರ ರೂಗಳೊಳಗೆ ದರ ನಿಗದಿ ಮಾಡುವ ಚಿಂತನೆ ಸರ್ಲಾ ಏವಿಯೇಷನ್‌ನದ್ದು.

ಈ ಒಪ್ಪಂದದ ಬಗ್ಗೆ “ಎಕ್ಸ್‌’ನಲ್ಲಿ ಬರೆದುಕೊಂಡಿರುವ ಬಿಐಎಎಲ್‌, 7 ಆಸನಗಳ ಇವಿಟಿಒಲ್‌ (ಇಲೆಕ್ಟ್ರೀಕ್‌ ವರ್ಟಿಕಲ್‌ ಟೇಕ್‌ ಆಫ್ ಮತ್ತು ಲ್ಯಾಂಡಿಂಗ್‌) ಅಭಿಪ್ರದ್ಧಿ ಪಡಿಸುತ್ತಿದ್ದೇವೆ. ಇದು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಮಾತ್ರವಲ್ಲದೆ ಸ್ವತ್ಛ, ವೇಗ ಮತ್ತು ಸುಧಾರಿತ ಸಂಪರ್ಕ ವ್ಯವಸ್ಥೆಯನ್ನು ಸಾಧ್ಯವಾಗಿಸುವ ಪ್ರಯತ್ನ ಎಂದು ಹೇಳಿದೆ.

ಈ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಸರ್ಲಾ ಏವಿಯೇಷನ್‌, ನಮಗೆ ಈ ಒಪ್ಪಂದದ ಬಗ್ಗೆ ಹೆಮ್ಮೆಯಿದೆ. ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿರ್ವಹಣೆಯ ದೃಷ್ಟಿಯಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದೆ.

1,700 ಆಸುಪಾಸು ದರ ನಿಗದಿ ಪ್ರಸ್ತಾವನೆ: ವಿಮಾನ ನಿಲ್ದಾಣಕ್ಕೆ ತೆರಳಲು ಏರ್‌ ಟ್ಯಾಕ್ಸಿಯನ್ನು ಒಂದು ವರ್ಗ ಇಷ್ಟ ಪಡಬಹುದು ಎಂಬ ಹಿನ್ನೆಲೆಯಲ್ಲಿ ಏರ್‌ ಟ್ಯಾಕ್ಸಿ ಆರಂಭಿಸುವ ಪ್ರಯತ್ನಕ್ಕೆ ಬಿಐಎಎಲ್‌ ಮತ್ತು ಸರ್ಲಾ ಏವಿಯೇಷನ್‌ ಮುಂದಾಗಿದ್ದು, ಸುಮಾರು 1,700 ರೂ.ಗಳ ಆಸುಪಾಸು ದರ ನಿಗದಿ ಮಾಡುವ ಪ್ರಸ್ತಾವವಿದೆ. ಪೈಲಟ್‌ ಸೇರಿ ಒಟ್ಟು 7 ಮಂದಿ ಈ ಬ್ಯಾಟರಿ ಆಧಾರಿತ ಏರ್‌ ಟ್ಯಾಕ್ಸಿಯಲ್ಲಿ ಪ್ರಯಾಣಿಸಬಹುದಾಗಿದೆ.

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.