ರಾಜ್ಯದ ಎಲ್ಲಯಾತ್ರಿಕರೂ ಸುರಕ್ಷಿತ


Team Udayavani, Jul 5, 2018, 12:02 PM IST

blore-5.jpg

ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ಎಲ್ಲ 259 ಕೈಲಾಸ ಮಾನಸ ಸರೋವರ ಯಾತ್ರಿಗಳೂ ಸುರಕ್ಷಿತ ಸ್ಥಳದಲ್ಲಿದ್ದು, ಬುಧವಾರ ತಮ್ಮ ಊರುಗಳಿಗೆ ಹಿಂತಿರುಗುವ ಸಿದ್ಧತೆಯಲ್ಲಿದ್ದಾರೆ. ಯಾತ್ರಿಕರೆಲ್ಲರೂ ವಿವಿಧ ತಂಡಗಳಲ್ಲಿ ದೆಹಲಿ, ಕಠ್ಮಂಡು, ಸಿಮಿಕೋಟ್‌ ಮತ್ತಿತರ ಕಡೆಗಳಲ್ಲಿ ಸುರಕ್ಷಿತವಾಗಿದ್ದಾರೆ. ವಿಮಾನ, ರೈಲುಗಳ ಮೂಲಕ ಬಂದು ತಲುಪಲಿದ್ದಾರೆ. ಈ ಪೈಕಿ ಜಿಗಣಿಯಿಂದ ತೆರಳಿದ್ದ 35 ಜನರ ತಂಡ ಬುಧವಾರ ರಾತ್ರಿಯೇ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

“ಸ್ವಲ್ಪದರಲ್ಲೇ ಬಚಾವ್‌’: ಬೆಂಗಳೂರಿಗೆ ಬಂದಿಳಿದ ಆ ತಂಡದ ನಾಗೇಶ್‌ “ಉದಯವಾಣಿ’ಯೊಂದಿಗೆ ಮಾತನಾಡಿ, “15 ದಿನಗಳ ಹಿಂದೆಯೇ ನಾವು ಜಿಗಣಿಯಿಂದ ವೈಷ್ಣವಿದೇವಿ ದರ್ಶನಕ್ಕೆ ತೆರಳಿದ್ದೆವು. ಅಮರನಾಥ ಯಾತ್ರೆಗೆ ತೆರಳುವ ಪ್ಲಾನ್‌ ಇತ್ತು. ಆದರೆ, ಅಲ್ಲಿ ಸಾಕಷ್ಟು ಮಳೆಯಾಗುತ್ತಿದೆ ಎಂಬ
ಮಾಹಿತಿ ಬಂತು. ಹಾಗಾಗಿ, ಆ ಪ್ರವಾಸ ಮೊಟಕುಗೊಳಿಸಿ, ಅಮೃತಸರದಿಂದ ವಿಮಾನದಲ್ಲಿ ಬಂದಿಳಿದೆವು’ ಎಂದು ಹೇಳಿದರು. 

“ನನ್ನ ಅಣ್ಣ ಸೋಮಪ್ರಸಾದ್‌ ಮತ್ತು ಅತ್ತಿಗೆ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದರು. ಈಗ ಅವರು ಸಿಮಿಕೋಟ್‌ನಲ್ಲಿ ಸುರಕ್ಷಿತವಾಗಿದ್ದಾರೆ. ದೂರವಾಣಿ ಮೂಲಕ ಮಾತನಾಡಿದೆ. ಗುರುವಾರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ’ ಎಂದು ಪ್ರಭು ಪ್ರಸಾದ್‌ ನಿಟ್ಟುಸಿರುಬಿಟ್ಟರು.

ಯಾರ್ಯಾರು ಎಲ್ಲೆಲ್ಲಿದ್ದಾರೆ?: “ಸಂಕಷ್ಟದಲ್ಲಿ ಸಿಲುಕಿರುವ ಬಹುತೇಕ ಎಲ್ಲರನ್ನೂ ಬುಧವಾರ ಸಂಪರ್ಕಿಸಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಇನ್ನು ಕೆಲವರು ಮಾನಸ ಸರೋವರ ಯಾತ್ರೆಯಿಂದ ವೈಷ್ಣವಿದೇವಿ ದರ್ಶನ ಪ್ರವಾಸಕ್ಕೆ ತೆರಳಿದ್ದಾರೆ. ಸಂಧ್ಯಾ ಅವರ ನೇತೃತ್ವದಲ್ಲಿ ನೂರು ಜನರ ಒಂದು ತಂಡವು ಸಿಮಿಕೋಟ್‌ನ ಸುರಕ್ಷಿತ ಜಾಗದಲ್ಲಿದೆ. ಬೆಂಗಳೂರಿನ ಜೆ.ಪಿ. ನಗರದ ಅಣ್ಣಪ್ಪ ಸೇರಿದಂತೆ 80 ಜನರ ತಂಡ ವೈಷ್ಣವಿದೇವಿ ದರ್ಶನಕ್ಕೆ ಪ್ರಯಾಣ ಬೆಳೆಸಿದ್ದಾರೆ.

ರಾಮನಗರದ ರೇವಮ್ಮ ಮತ್ತು ಸಿದ್ದರೇವಯ್ಯ ದೆಹಲಿಯಲ್ಲಿದ್ದಾರೆ. ನಗರದ ವಿನಾಯಕ ಭಟ್‌ ನೇತೃತ್ವದ 7 ಜನರ ತಂಡ ಕಠ್ಮಂಡು ವಿನಲ್ಲಿದೆ. ಮೈಸೂರಿನ ಛಾಯಾ ದೇವಿ ಸೇರಿ 15 ಜನರ ತಂಡ ನೇಪಾಳ ದಾಟಿ ಪ್ರವಾಸಕ್ಕೆ ತೆರಳಿದ್ದಾರೆ’ ಎಂದು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದರು.

ಹವಾಮಾನ ವೈಪರಿತ್ಯ ದಿಂದ ನೇಪಾಳದ ಸಿಮಿಕೋಟ್‌ನಲ್ಲಿ ಭಾರಿ ಮಳೆಯಿಂದ ಕರ್ನಾಟಕ ಮೂಲದ 259 ಯಾತ್ರಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಯುದ್ಧವಿಮಾನಗಳ ಮೂಲಕ ಅವರೆಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಕರೆತರಲಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.