ಅಲ್ವಸಂಖ್ಯಾತರ ಕೇಸ್‌ ವಾಪಸ್‌: ಸರ್ಕಾರ ಪತ್ರ


Team Udayavani, Jan 27, 2018, 6:00 AM IST

Govt-kar-26.jpg

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಕೋಮುಗಲಭೆ ಹಾಗೂ ಇತರ ಪ್ರಕರಣಗಳ ಸಂದರ್ಭದಲ್ಲಿ ಮುಗ್ಧ ಅಲ್ವಸಂಖ್ಯಾತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ನಿಂದ ಹಿಂದಕ್ಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ವಿಳಂಬ ಮಾಡದೇ ಸಲ್ಲಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಾರ್ಯಾಲಯದಿಂದ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಡಿಐಜಿ ಪರವಾಗಿ ಹಿರಿಯ ಪೊಲಿಸ್‌ ಅಧಿಕಾರಿಯಾಗಿರುವ ಎಐಜಿಪಿ ಶಿವಪ್ರಕಾಶ್‌ ದೇವರಾಜ್‌ ಅವರು ಮಂಗಳೂರು, ಬೆಳಗಾವಿ ಪೊಲೀಸ್‌ ಆಯುಕ್ತರು ಸೇರಿದಂತೆ 21 ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಹಲವೆಡೆ ಕೋಮು ಗಲಭೆ ಸಂಭವಿಸಿದ ಪ್ರಕರಣಗಳಲ್ಲಿ ಅಮಾಯಕ ಅಲ್ಪಸಂಖ್ಯಾತರ ಮೇಲಿನ ಮೊಕದ್ದಮೆಗಳನ್ನು ವಾಪಸ್‌ ಪಡೆಯುವ ಕುರಿತು ತಮ್ಮ ನಿಲುವು ತಿಳಿಸಬೇಕು. ಈ ಹಿಂದೆ ಪತ್ರ ಬರೆದಾಗಲೂ ಯಾವುದೇ ಅಭಿಪ್ರಾಯ ತಿಳಿಸದೇ ಇರುವುದನ್ನು ಪತ್ರದಲ್ಲಿ ಪ್ರಸ್ಥಾಪಿಸಲಾಗಿದ್ದು, ಈ ಬಾರಿಯ ಪತ್ರಕ್ಕೆ ತಕ್ಷಣ ಸ್ಪಂದಿಸಿ, ತಪ್ಪದೇ ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದೆ.

ಮಂಗಳೂರು, ಬೆಳಗಾವಿ ಪೊಲೀಸ್‌ ಆಯುಕ್ತರಲ್ಲದೇ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಕೆಜಿಎಫ್, ಮೈಸೂರು, ಹಾಸನ, ಕೊಡಗು, ಚಾಮರಾಜನಗರ,  ವಿಜಯಪುರ, ಧಾರವಾಡ, ಗದಗ, ಹಾವೇರಿ, ಕಾರವಾರ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಬೆಳಗಾವಿ, ಬಳ್ಳಾರಿ, ಕಲಬುರಗಿ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಯ ಎಸ್ಪಿಗಳಿಗೆ  “ನೆನಪೋಲೆ-2 ಅತ್ಯಂತ ಜರೂರು ‘ ಎಂದು ಜ.25ರಂದು ಬರೆಯಲಾದ ಪತ್ರದಲ್ಲಿ ತಿಳಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ 2013 ರಿಂದ 2017 ರವರೆಗಿನ ಅವಧಿಯಲ್ಲಿ ನಡೆದ ಕೋಮುಗಲಭೆ ಮತ್ತು ಇತರ ಪ್ರಕರಣಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಮುಗ್ಧ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯುವ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಈ ಮೊದಲು ಸಹ ಪತ್ರ ಬರೆದಾಗ ಇದುವರೆಗೂ ತಮ್ಮಿಂದ ಯಾವುದೇ ವರದಿ ಬಂದಿಲ್ಲ. ಹೀಗಾಗಿ ಕೂಡಲೇ ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಹಿಂಪಡೆಯುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ವರದಿ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.